<p><strong>ಕುಣಿಗಲ್:</strong> ಹಲವು ಅವಿಷ್ಕಾರಗಳ ಮೂಲವೇ ಶಿಕ್ಷಣ. ಗುಣಮಟ್ಟದ ಶಿಕ್ಷಣ ಪಡೆಯುವ ಮೂಲಕ ಅಜ್ಞಾನದ ಕತ್ತಲೆಯಿಂದ ಹೊರಬರಬೇಕು. ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಳ್ಳಬೇಕು ಎಂದು ತುಮಕೂರು ವಿವಿ ವಾಣಿಜ್ಯ ವಿಭಾಗದ ಅಧ್ಯಕ್ಷ ಡಾ.ಬಿ.ಶೇಖರ್ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದಿಂದ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ವಿದ್ಯಾರ್ಥಿದಿಸೆಯಲ್ಲಿ ಹಲವು ವಿಷಯಗಳನ್ನು ಅಧ್ಯಯನ ಮಾಡಿ, ಚಿಂತನಾಶಕ್ತಿ ವೃದ್ಧಿಸಿಕೊಳ್ಳಬೇಕು. ವಾಣಿಜ್ಯ, ಸೇವೆ, ವಿಮೆ, ಹಣಕಾಸು, ಕೈಗಾರಿಕೆ ಮತ್ತಿತರ ಕ್ಷೇತ್ರಗಳಲ್ಲಿ ವಿಪುಲ ಅವಕಾಶಗಳಿವೆ. ವಾಣಿಜ್ಯ ಶಿಕ್ಷಣ ಪಡೆಯುವುದರ ಮೂಲಕ ಈ ಎಲ್ಲ ಕ್ಷೇತ್ರಗಳ ಜ್ಞಾನ ಪಡೆಯುವುದರ ಜೊತೆಗೆ ಕಾರ್ಪೋರೇಟ್ ಜಗತ್ತಿನ ಕೌಶಲಗಳನ್ನು ಕರಗತ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಪ್ರಥಮ ಎಂ.ಕಾಂ. ವಿದ್ಯಾರ್ಥಿಗಳು, ದ್ವಿತೀಯ ಎಂ.ಕಾಂ. ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿದರು.</p>.<p>ಅಧ್ಯಾಪಕರಾದ ನಾರಾಯಣ ದಾಸ್, ಟಿ.ಎನ್.ನರಸಿಂಹಮೂರ್ತಿ, ಎನ್.ಟಿ.ಶ್ರೀನಿವಾಸ್, ರವೀಶ್, ಜಿ.ಎಸ್. ಹನುಮಂತಪ್ಪ, ಮಂಜುಸ್ವಾಮಿ, ಉಮ್ಮೆತಬಸ್ಸುಂ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ಹಲವು ಅವಿಷ್ಕಾರಗಳ ಮೂಲವೇ ಶಿಕ್ಷಣ. ಗುಣಮಟ್ಟದ ಶಿಕ್ಷಣ ಪಡೆಯುವ ಮೂಲಕ ಅಜ್ಞಾನದ ಕತ್ತಲೆಯಿಂದ ಹೊರಬರಬೇಕು. ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಳ್ಳಬೇಕು ಎಂದು ತುಮಕೂರು ವಿವಿ ವಾಣಿಜ್ಯ ವಿಭಾಗದ ಅಧ್ಯಕ್ಷ ಡಾ.ಬಿ.ಶೇಖರ್ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದಿಂದ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ವಿದ್ಯಾರ್ಥಿದಿಸೆಯಲ್ಲಿ ಹಲವು ವಿಷಯಗಳನ್ನು ಅಧ್ಯಯನ ಮಾಡಿ, ಚಿಂತನಾಶಕ್ತಿ ವೃದ್ಧಿಸಿಕೊಳ್ಳಬೇಕು. ವಾಣಿಜ್ಯ, ಸೇವೆ, ವಿಮೆ, ಹಣಕಾಸು, ಕೈಗಾರಿಕೆ ಮತ್ತಿತರ ಕ್ಷೇತ್ರಗಳಲ್ಲಿ ವಿಪುಲ ಅವಕಾಶಗಳಿವೆ. ವಾಣಿಜ್ಯ ಶಿಕ್ಷಣ ಪಡೆಯುವುದರ ಮೂಲಕ ಈ ಎಲ್ಲ ಕ್ಷೇತ್ರಗಳ ಜ್ಞಾನ ಪಡೆಯುವುದರ ಜೊತೆಗೆ ಕಾರ್ಪೋರೇಟ್ ಜಗತ್ತಿನ ಕೌಶಲಗಳನ್ನು ಕರಗತ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಪ್ರಥಮ ಎಂ.ಕಾಂ. ವಿದ್ಯಾರ್ಥಿಗಳು, ದ್ವಿತೀಯ ಎಂ.ಕಾಂ. ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿದರು.</p>.<p>ಅಧ್ಯಾಪಕರಾದ ನಾರಾಯಣ ದಾಸ್, ಟಿ.ಎನ್.ನರಸಿಂಹಮೂರ್ತಿ, ಎನ್.ಟಿ.ಶ್ರೀನಿವಾಸ್, ರವೀಶ್, ಜಿ.ಎಸ್. ಹನುಮಂತಪ್ಪ, ಮಂಜುಸ್ವಾಮಿ, ಉಮ್ಮೆತಬಸ್ಸುಂ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>