<p><strong>ಗುಬ್ಬಿ:</strong> ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸಂವಿಧಾನದಲ್ಲಿ ಅನೇಕ ಕಾನೂನುಗಳನ್ನು ರೂಪಿಸಿಗಿದ್ದರೂ ದೌರ್ಜನ್ಯಗಳು ನಡೆಯುತ್ತಿರುವುದು ದುರಾದೃಷ್ಟಕರ ಎಂದು ನ್ಯಾಯಾಧೀಶೆ ಪೂರ್ಣಿಮಾ ಕೆ. ಯಾದವ್ ತಿಳಿಸಿದರು.</p>.<p>ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಮಹಿಳೆಯರ ಮೇಲಿನ ದೌರ್ಜನ್ಯ ನಿಷೇಧ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹೆಣ್ಣುಮಕ್ಕಳು ಯಾವುದೇ ಭಾವನಾತ್ಮಕತೆಗೆ ಒಳಗಾಗದೆ ಕಾನೂನು ಅರಿವು ಪಡೆದು ದೌರ್ಜನ್ಯಗಳನ್ನು ಮೆಟ್ಟಿ ನಿಲ್ಲುವ ಮನಸ್ಥಿತಿಯನ್ನು ರೂಢಿಸಿಕೊಳ್ಳಬೇಕಿದೆ. ಬಾಲಕಿಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಉದ್ದೇಶದಿಂದಲೇ ಪೋಕ್ಸೊ ಕಾಯ್ದೆ ಜಾರಿಗೊಳಿಸಲಾಗಿದೆ ಎಂದರು.</p>.<p>ವಕೀಲ ರಂಗನಾಥ್ ಮಾತನಾಡಿ, ನಾಗರಿಕತೆ ಬೆಳೆದಂತೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಎಲ್ಲ ದೌರ್ಜನ್ಯಗಳನ್ನು ಖಂಡಿಸುವ ಮನಸ್ಥಿತಿ ರೂಢಿಸಿಕೊಳ್ಳಬೇಕಿದೆ. ಇಲ್ಲವಾದಲ್ಲಿ ಪೈಶಾಚಿಕ ಕೃತ್ಯಗಳು ಹೆಚ್ಚುತ್ತವೆ ಎಂದರು.</p>.<p>ಇತ್ತೀಚಿನ ದಿನಗಳಲ್ಲಿ ಮನೆಯ ಹೊರಗಿನ ಜೊತೆಗೆ ಕುಟುಂಬದಲ್ಲಿಯೂ ದೌರ್ಜನ್ಯಗಳು ಹೆಚ್ಚಾಗುತ್ತಿರುವುದರಿಂದ ಮಕ್ಕಳು ಹಾಗೂ ಮಹಿಳೆಯರು ಭಯದಲ್ಲಿ ಬದುಕುವಂತಾಗಿದೆ. ಆತಂಕದ ಪರಿಸ್ಥಿತಿ ಹೋಗಲಾಡಿಸಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುವಂತೆ ಅಸ್ತಿತ್ವದಲ್ಲಿರುವ ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದರು.</p>.<p>ಪ್ರಾಂಶುಪಾಲ ರಮೇಶ್ ಮಾತನಾಡಿ, ಕಾನೂನುಗಳ ಬಗ್ಗೆ ಅರಿವು ಪಡೆದರೆ ದೌರ್ಜನ್ಯದ ವಿರುದ್ಧ ಹೋರಾಡಲು ಸಾಧ್ಯ. ಮಕ್ಕಳು ಶಾಲಾ, ಕಾಲೇಜು ಹಾಗೂ ಮನೆಯ ಸಮೀಪ ಯಾವುದೇ ಅಪರಿಚಿತ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣ ಪೋಷಕರು ಹಾಗೂ ಶಿಕ್ಷಕರಿಗೆ ತಿಳಿಸಬೇಕು ಎಂದರು.</p>.<p>ವಕೀಲರ ಸಂಘದ ಉಪಾಧ್ಯಕ್ಷ ಶಿವಯೋಗಿಶ್, ಖಜಾಂಚಿ ಶಿವಾನಂದ್, ವಕೀಲ ನಿರಂಜನ್ ಮೂರ್ತಿ, ಶಿಕ್ಷಕರು, ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸಂವಿಧಾನದಲ್ಲಿ ಅನೇಕ ಕಾನೂನುಗಳನ್ನು ರೂಪಿಸಿಗಿದ್ದರೂ ದೌರ್ಜನ್ಯಗಳು ನಡೆಯುತ್ತಿರುವುದು ದುರಾದೃಷ್ಟಕರ ಎಂದು ನ್ಯಾಯಾಧೀಶೆ ಪೂರ್ಣಿಮಾ ಕೆ. ಯಾದವ್ ತಿಳಿಸಿದರು.</p>.<p>ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಮಹಿಳೆಯರ ಮೇಲಿನ ದೌರ್ಜನ್ಯ ನಿಷೇಧ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹೆಣ್ಣುಮಕ್ಕಳು ಯಾವುದೇ ಭಾವನಾತ್ಮಕತೆಗೆ ಒಳಗಾಗದೆ ಕಾನೂನು ಅರಿವು ಪಡೆದು ದೌರ್ಜನ್ಯಗಳನ್ನು ಮೆಟ್ಟಿ ನಿಲ್ಲುವ ಮನಸ್ಥಿತಿಯನ್ನು ರೂಢಿಸಿಕೊಳ್ಳಬೇಕಿದೆ. ಬಾಲಕಿಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಉದ್ದೇಶದಿಂದಲೇ ಪೋಕ್ಸೊ ಕಾಯ್ದೆ ಜಾರಿಗೊಳಿಸಲಾಗಿದೆ ಎಂದರು.</p>.<p>ವಕೀಲ ರಂಗನಾಥ್ ಮಾತನಾಡಿ, ನಾಗರಿಕತೆ ಬೆಳೆದಂತೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಎಲ್ಲ ದೌರ್ಜನ್ಯಗಳನ್ನು ಖಂಡಿಸುವ ಮನಸ್ಥಿತಿ ರೂಢಿಸಿಕೊಳ್ಳಬೇಕಿದೆ. ಇಲ್ಲವಾದಲ್ಲಿ ಪೈಶಾಚಿಕ ಕೃತ್ಯಗಳು ಹೆಚ್ಚುತ್ತವೆ ಎಂದರು.</p>.<p>ಇತ್ತೀಚಿನ ದಿನಗಳಲ್ಲಿ ಮನೆಯ ಹೊರಗಿನ ಜೊತೆಗೆ ಕುಟುಂಬದಲ್ಲಿಯೂ ದೌರ್ಜನ್ಯಗಳು ಹೆಚ್ಚಾಗುತ್ತಿರುವುದರಿಂದ ಮಕ್ಕಳು ಹಾಗೂ ಮಹಿಳೆಯರು ಭಯದಲ್ಲಿ ಬದುಕುವಂತಾಗಿದೆ. ಆತಂಕದ ಪರಿಸ್ಥಿತಿ ಹೋಗಲಾಡಿಸಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುವಂತೆ ಅಸ್ತಿತ್ವದಲ್ಲಿರುವ ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದರು.</p>.<p>ಪ್ರಾಂಶುಪಾಲ ರಮೇಶ್ ಮಾತನಾಡಿ, ಕಾನೂನುಗಳ ಬಗ್ಗೆ ಅರಿವು ಪಡೆದರೆ ದೌರ್ಜನ್ಯದ ವಿರುದ್ಧ ಹೋರಾಡಲು ಸಾಧ್ಯ. ಮಕ್ಕಳು ಶಾಲಾ, ಕಾಲೇಜು ಹಾಗೂ ಮನೆಯ ಸಮೀಪ ಯಾವುದೇ ಅಪರಿಚಿತ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣ ಪೋಷಕರು ಹಾಗೂ ಶಿಕ್ಷಕರಿಗೆ ತಿಳಿಸಬೇಕು ಎಂದರು.</p>.<p>ವಕೀಲರ ಸಂಘದ ಉಪಾಧ್ಯಕ್ಷ ಶಿವಯೋಗಿಶ್, ಖಜಾಂಚಿ ಶಿವಾನಂದ್, ವಕೀಲ ನಿರಂಜನ್ ಮೂರ್ತಿ, ಶಿಕ್ಷಕರು, ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>