<p><strong>ಗುಬ್ಬಿ: </strong>ಪಟ್ಟಣದ ಮಗ್ಗದವರ ಬೀದಿಯ ನಾಗರಾಜು (26) ಪತ್ನಿ ದಿವ್ಯಾ (22) ಶೀಲ ಶಂಕಿಸಿ ಚಾಕುವಿನಿಂದ ಇರಿದು ಕೊಲೆ ಮಾಡಿ ತಾನೇ ಪೊಲೀಸರಿಗೆ ಶರಣಾಗಿದ್ದಾರೆ.</p>.<p>ತಾಲ್ಲೂಕಿನ ಜಿ.ಹೊಸಹಳ್ಳಿ ಗೇಟ್ನಲ್ಲಿ ತಾಯಿಯೊಂದಿಗೆ ಫಾಸ್ಟ್ಫುಡ್ ಹೋಟೆಲ್ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದ ನಾಗರಾಜು, ವರ್ಷದ ಹಿಂದೆ ನಿಟ್ಟೂರು ಹೋಬಳಿಯ ತಳವಾರನಹಳ್ಳಿಯ ದಿವ್ಯಾ ಅವರನ್ನು ವಿವಾಹವಾಗಿದ್ದರು.</p>.<p>‘ದಿವ್ಯಾಗೆ ಮುಂಚಿತವಾಗೇ ಇನ್ನೊಬ್ಬರೊಂದಿಗೆ ವಿವಾಹವಾಗಿದೆ. ಆ ವಿಷಯ ಮರೆಮಾಚಿ ನನ್ನೊಂದಿಗೆ ಮರು ಮದುವೆ ಮಾಡಿದ್ದಾರೆ ಎಂದು ಅನುಮಾನಿಸಿ ಆರೋಪಿ ಜಗಳ ಮಾಡುತ್ತಿದ್ದನು. ಮನೆಗೆ ಬೇರೆ ವ್ಯಕ್ತಿ ಬಂದು ಹೋಗುತ್ತಾನೆ ಎಂದು ಕಲಹ ಮಾಡುತ್ತಿದ್ದ. ಪತ್ನಿಯ ಚಲನವಲನಗಳ ಮೇಲೆ ನಿಗಾಯಿಡಲು ಮನೆಗೆ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಿಕೊಂಡಿದ್ದನು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜೂನ್ 3ರ ಬೆಳಗಿನ ಜಾವ 5ರ ಸುಮಾರಿಗೆ ದಂಪತಿ ನಡುವೆ ಜಗಳ ತಾರಕಕ್ಕೇರಿದೆ. ಆಗ ಪತಿ ಚಾಕುವಿನಿಂದ ಮೂರು ಕಡೆ ಹಲ್ಲೆ ನಡೆಸಿ ಜೀವ ಹೋಗಿರುವುದನ್ನು ಖಚಿತಪಡಿಸಿಕೊಂಡು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ತಿಳಿಸಿದರು.</p>.<p>ಡಿವೈಎಸ್ಪಿ, ಕುಮಾರಪ್ಪ, ತಹಶೀಲ್ದಾರ್ ಪ್ರದೀಪ್ ಕುಮಾರ್, ಸಿಪಿಐ ರಾಮಕೃಷ್ಣಯ್ಯ, ಪಿಎಸ್ಐ ಜ್ಞಾನಮೂರ್ತಿ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ನಾಲ್ಕು ದಿನಗಳಲ್ಲಿ ಪಟ್ಟಣದಲ್ಲಿ ಎರಡು ಕೊಲೆ ಪ್ರಕರಣಗಳು ನಡೆದಿದ್ದು, ನಾಗರಿಕರನ್ನು ಬೆಚ್ಚಿಬೀಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ: </strong>ಪಟ್ಟಣದ ಮಗ್ಗದವರ ಬೀದಿಯ ನಾಗರಾಜು (26) ಪತ್ನಿ ದಿವ್ಯಾ (22) ಶೀಲ ಶಂಕಿಸಿ ಚಾಕುವಿನಿಂದ ಇರಿದು ಕೊಲೆ ಮಾಡಿ ತಾನೇ ಪೊಲೀಸರಿಗೆ ಶರಣಾಗಿದ್ದಾರೆ.</p>.<p>ತಾಲ್ಲೂಕಿನ ಜಿ.ಹೊಸಹಳ್ಳಿ ಗೇಟ್ನಲ್ಲಿ ತಾಯಿಯೊಂದಿಗೆ ಫಾಸ್ಟ್ಫುಡ್ ಹೋಟೆಲ್ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದ ನಾಗರಾಜು, ವರ್ಷದ ಹಿಂದೆ ನಿಟ್ಟೂರು ಹೋಬಳಿಯ ತಳವಾರನಹಳ್ಳಿಯ ದಿವ್ಯಾ ಅವರನ್ನು ವಿವಾಹವಾಗಿದ್ದರು.</p>.<p>‘ದಿವ್ಯಾಗೆ ಮುಂಚಿತವಾಗೇ ಇನ್ನೊಬ್ಬರೊಂದಿಗೆ ವಿವಾಹವಾಗಿದೆ. ಆ ವಿಷಯ ಮರೆಮಾಚಿ ನನ್ನೊಂದಿಗೆ ಮರು ಮದುವೆ ಮಾಡಿದ್ದಾರೆ ಎಂದು ಅನುಮಾನಿಸಿ ಆರೋಪಿ ಜಗಳ ಮಾಡುತ್ತಿದ್ದನು. ಮನೆಗೆ ಬೇರೆ ವ್ಯಕ್ತಿ ಬಂದು ಹೋಗುತ್ತಾನೆ ಎಂದು ಕಲಹ ಮಾಡುತ್ತಿದ್ದ. ಪತ್ನಿಯ ಚಲನವಲನಗಳ ಮೇಲೆ ನಿಗಾಯಿಡಲು ಮನೆಗೆ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಿಕೊಂಡಿದ್ದನು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜೂನ್ 3ರ ಬೆಳಗಿನ ಜಾವ 5ರ ಸುಮಾರಿಗೆ ದಂಪತಿ ನಡುವೆ ಜಗಳ ತಾರಕಕ್ಕೇರಿದೆ. ಆಗ ಪತಿ ಚಾಕುವಿನಿಂದ ಮೂರು ಕಡೆ ಹಲ್ಲೆ ನಡೆಸಿ ಜೀವ ಹೋಗಿರುವುದನ್ನು ಖಚಿತಪಡಿಸಿಕೊಂಡು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ತಿಳಿಸಿದರು.</p>.<p>ಡಿವೈಎಸ್ಪಿ, ಕುಮಾರಪ್ಪ, ತಹಶೀಲ್ದಾರ್ ಪ್ರದೀಪ್ ಕುಮಾರ್, ಸಿಪಿಐ ರಾಮಕೃಷ್ಣಯ್ಯ, ಪಿಎಸ್ಐ ಜ್ಞಾನಮೂರ್ತಿ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ನಾಲ್ಕು ದಿನಗಳಲ್ಲಿ ಪಟ್ಟಣದಲ್ಲಿ ಎರಡು ಕೊಲೆ ಪ್ರಕರಣಗಳು ನಡೆದಿದ್ದು, ನಾಗರಿಕರನ್ನು ಬೆಚ್ಚಿಬೀಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>