ಕಾನೂನು ಅಥವಾ ನಿಯಮಗಳು ಎಲ್ಲರಿಗೂ ಒಂದೇ ಇರಬೇಕು. ಎಪಿಎಂಸಿ ಪ್ರಾಂಗಣದಲ್ಲಿರುವ ವರ್ತಕರು ಸರ್ಕಾರದ ನಿಯಮದಡಿ ಪರವಾನಗಿ ಪಡೆದು ವ್ಯವಹರಿಸುತ್ತಾರೆ. ಅನುಮತಿ ಪಡೆದು ವ್ಯವಹರಿಸುವ ವರ್ತಕರು ಪ್ರಾಂಗಣದ ಹೊರಗೆ ವ್ಯವಹಾರ ನಡೆಸುವವರಿಗೆ ಪೈಪೋಟಿ ನೀಡಲು ಸಾಧ್ಯವಾಗದೆ ಆರ್ಥಿಕ ದುಸ್ಥಿತಿ ಎದುರಿಸಬೇಕಾದ ಸಂದರ್ಭ ಬರಬಹುದು. ಆದ್ದರಿಂದ ಎಲ್ಲರಿಗೂ ಶುಲ್ಕದಿಂದ ವಿನಾಯಿತಿ ನೀಡಬೇಕು ಎಂದು ಕೋರಿದ್ದಾರೆ.