<p><strong>ತಿಪ್ಪಟೂರು:</strong> ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಅರಳಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರಹಟ್ಟಿ ಗ್ರಾಮದಲ್ಲಿ ಕೃಷಿ ಇಲಾಖೆ ಮತ್ತು ಇಫ್ಕೋ ಸಂಸ್ಥೆ ಸಹಯೋಗದೊಂದಿಗೆ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ ನಡೆಯಿತು.</p>.<p>ಶಾಸಕ ಕೆ.ಷಡಕ್ಷರಿ ಮಾತನಾಡಿ, ಹೆಚ್ಚುತ್ತಿರುವ ಜನಸಂಖ್ಯೆಗೆ ಆಹಾರ ಒದಗಿಸುವ ಸದುದ್ದೇಶದಿಂದ ಈ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ ಎಂದರು.</p>.<p>ಆಹಾರ ಬೆಳೆಗಳ ವಿಸ್ತೀರ್ಣ, ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ಯೋಜನೆ ಮುಖ್ಯ ಗುರಿ. ಕೃಷಿಯಲ್ಲಿ ಸುಧಾರಿತ ಬೇಸಾಯ ಕ್ರಮ ಅಳವಡಿಸಿಕೊಂಡು ಉತ್ತಮ ಇಳುವರಿ ಪಡೆಯಬಹುದು ಎಂದು ತಿಳಿಸಿದರು.</p>.<p>ಕೃಷಿ ಕಾರ್ಮಿಕರ ಕೊರತೆ ಇಂದಿನ ದಿನಗಳಲ್ಲಿ ಒಂದು ದೊಡ್ಡ ಸಮಸ್ಯೆಯಾಗಿದೆ. ಸಸ್ಯ ಪೋಷಕಾಂಶಗಳು ಮತ್ತು ಸಸ್ಯ ಸಂರಕ್ಷಣಾ ಔಷಧಿಗಳನ್ನು ಸಿಂಪರಣೆ ಮಾಡಲು ಹೆಚ್ಚು ಸಮಯ ಮತ್ತು ಹಣ ವ್ಯಯವಾಗುತ್ತದೆ. ಈ ಸಮಸ್ಯೆಗೆ ಪರಿಹಾರವಾಗಿ ಡ್ರೋನ್ ಬಳಸಿ ಸಿಂಪಡಣೆ ಮಾಡುವುದು ಉತ್ತಮ ಮಾರ್ಗ ಎಂದರು.</p>.<p>ಸಹಾಯಕ ಕೃಷಿ ನಿರ್ದೇಶಕ ಎಂ.ಪಿ.ಪವನ್ ಮಾತನಾಡಿ, ತಾಲ್ಲೂಕಿನ 400 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಗೆ ಈ ಪ್ರಾತ್ಯಕ್ಷಿಕೆ ನಡೆಸಲಾಗಿದೆ ಎಂದರು.</p>.<p>ವ್ಯವಸಾಯದಲ್ಲಿ ಯೂರಿಯಾದ ಅತಿಯಾದ ಬಳಕೆಯು ಮಣ್ಣಿನ ಆರೋಗ್ಯ, ಬೆಳೆ ಇಳುವರಿ ಮತ್ತು ಪರಿಸರದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ. ನ್ಯಾನೋ ಯೂರಿಯಾ ಸಿಂಪಡಣೆಯು ಈ ಸಮಸ್ಯೆಗಳಿಗೆ ಪರಿಹಾರವಾಗಿದೆ. ನ್ಯಾನೋ ಯೂರಿಯಾವನ್ನು ಎರಡರಿಂದ ನಾಲ್ಕು ಮಿಲಿ ಪ್ರತಿ ಲೀಟರ್ ನೀರಿಗೆ ಮಿಶ್ರಣ ಮಾಡಿ ಎರಡು ಹಂತಗಳಲ್ಲಿ ಸಿಂಪಡಣೆ ಮಾಡಬೇಕು ಎಂದರು.</p>.<p>ಪ್ರಗತಿಪರ ರೈತ ರೇಣುಕಾಮೂರ್ತಿ ಭದ್ರಾಪುರ ಮಾತನಾಡಿ, ಡ್ರೋನ್ ಬಳಸಿ ನ್ಯಾನೋ ಯೂರಿಯಾ ತಂತ್ರಜ್ಞಾನ ರೈತರು ಅಳವಡಿಸಿಕೊಂಡರೆ ಕಾರ್ಮಿಕ ಸಮಸ್ಯೆ ಮತ್ತು ಖರ್ಚು ಕಡಿಮೆಯಾಗಿ ಉತ್ತಮ ಆದಾಯ ಗಳಿಸಬಹುದು ಎಂದರು.</p>.<p>ಅರಳಗುಪ್ಪೆ ಗ್ರಾಮಪಂಚಾಯಿತಿ ಅಧ್ಯಕ್ಷ ಸುಜಾತ, ಸದಸ್ಯರಾದ ಮಂಜುಳ ಮತ್ತು ಮುನಿಸ್ವಾಮಿ, ಕೃಷಿ ಅಧಿಕಾರಿ ವಿನುತಾ.ಟಿ.ಎಸ್, ಆತ್ಮ ಯೋಜನೆ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ಮಹೇಶ್ ಮತ್ತು ಇತರ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪ್ಪಟೂರು:</strong> ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಅರಳಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರಹಟ್ಟಿ ಗ್ರಾಮದಲ್ಲಿ ಕೃಷಿ ಇಲಾಖೆ ಮತ್ತು ಇಫ್ಕೋ ಸಂಸ್ಥೆ ಸಹಯೋಗದೊಂದಿಗೆ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ ನಡೆಯಿತು.</p>.<p>ಶಾಸಕ ಕೆ.ಷಡಕ್ಷರಿ ಮಾತನಾಡಿ, ಹೆಚ್ಚುತ್ತಿರುವ ಜನಸಂಖ್ಯೆಗೆ ಆಹಾರ ಒದಗಿಸುವ ಸದುದ್ದೇಶದಿಂದ ಈ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ ಎಂದರು.</p>.<p>ಆಹಾರ ಬೆಳೆಗಳ ವಿಸ್ತೀರ್ಣ, ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ಯೋಜನೆ ಮುಖ್ಯ ಗುರಿ. ಕೃಷಿಯಲ್ಲಿ ಸುಧಾರಿತ ಬೇಸಾಯ ಕ್ರಮ ಅಳವಡಿಸಿಕೊಂಡು ಉತ್ತಮ ಇಳುವರಿ ಪಡೆಯಬಹುದು ಎಂದು ತಿಳಿಸಿದರು.</p>.<p>ಕೃಷಿ ಕಾರ್ಮಿಕರ ಕೊರತೆ ಇಂದಿನ ದಿನಗಳಲ್ಲಿ ಒಂದು ದೊಡ್ಡ ಸಮಸ್ಯೆಯಾಗಿದೆ. ಸಸ್ಯ ಪೋಷಕಾಂಶಗಳು ಮತ್ತು ಸಸ್ಯ ಸಂರಕ್ಷಣಾ ಔಷಧಿಗಳನ್ನು ಸಿಂಪರಣೆ ಮಾಡಲು ಹೆಚ್ಚು ಸಮಯ ಮತ್ತು ಹಣ ವ್ಯಯವಾಗುತ್ತದೆ. ಈ ಸಮಸ್ಯೆಗೆ ಪರಿಹಾರವಾಗಿ ಡ್ರೋನ್ ಬಳಸಿ ಸಿಂಪಡಣೆ ಮಾಡುವುದು ಉತ್ತಮ ಮಾರ್ಗ ಎಂದರು.</p>.<p>ಸಹಾಯಕ ಕೃಷಿ ನಿರ್ದೇಶಕ ಎಂ.ಪಿ.ಪವನ್ ಮಾತನಾಡಿ, ತಾಲ್ಲೂಕಿನ 400 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಗೆ ಈ ಪ್ರಾತ್ಯಕ್ಷಿಕೆ ನಡೆಸಲಾಗಿದೆ ಎಂದರು.</p>.<p>ವ್ಯವಸಾಯದಲ್ಲಿ ಯೂರಿಯಾದ ಅತಿಯಾದ ಬಳಕೆಯು ಮಣ್ಣಿನ ಆರೋಗ್ಯ, ಬೆಳೆ ಇಳುವರಿ ಮತ್ತು ಪರಿಸರದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ. ನ್ಯಾನೋ ಯೂರಿಯಾ ಸಿಂಪಡಣೆಯು ಈ ಸಮಸ್ಯೆಗಳಿಗೆ ಪರಿಹಾರವಾಗಿದೆ. ನ್ಯಾನೋ ಯೂರಿಯಾವನ್ನು ಎರಡರಿಂದ ನಾಲ್ಕು ಮಿಲಿ ಪ್ರತಿ ಲೀಟರ್ ನೀರಿಗೆ ಮಿಶ್ರಣ ಮಾಡಿ ಎರಡು ಹಂತಗಳಲ್ಲಿ ಸಿಂಪಡಣೆ ಮಾಡಬೇಕು ಎಂದರು.</p>.<p>ಪ್ರಗತಿಪರ ರೈತ ರೇಣುಕಾಮೂರ್ತಿ ಭದ್ರಾಪುರ ಮಾತನಾಡಿ, ಡ್ರೋನ್ ಬಳಸಿ ನ್ಯಾನೋ ಯೂರಿಯಾ ತಂತ್ರಜ್ಞಾನ ರೈತರು ಅಳವಡಿಸಿಕೊಂಡರೆ ಕಾರ್ಮಿಕ ಸಮಸ್ಯೆ ಮತ್ತು ಖರ್ಚು ಕಡಿಮೆಯಾಗಿ ಉತ್ತಮ ಆದಾಯ ಗಳಿಸಬಹುದು ಎಂದರು.</p>.<p>ಅರಳಗುಪ್ಪೆ ಗ್ರಾಮಪಂಚಾಯಿತಿ ಅಧ್ಯಕ್ಷ ಸುಜಾತ, ಸದಸ್ಯರಾದ ಮಂಜುಳ ಮತ್ತು ಮುನಿಸ್ವಾಮಿ, ಕೃಷಿ ಅಧಿಕಾರಿ ವಿನುತಾ.ಟಿ.ಎಸ್, ಆತ್ಮ ಯೋಜನೆ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ಮಹೇಶ್ ಮತ್ತು ಇತರ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>