<p><strong>ತೋವಿನಕೆರೆ:</strong> ತೋವಿನಕರೆ ರೈತ ಸಂಪರ್ಕ ಕೇಂದ್ರಕ್ಕೆ ಸೇರಿದ ಐದು ಪಂಚಾಯಿತಿ ವ್ಯಾಪ್ತಿಯಲ್ಲಿ ಶೇ 92ರಷ್ಟು ಮುಂಗಾರು ಬಿತ್ತನೆಯಾಗಿದೆ ಎಂದು ಕೃಷಿ ಅಧಿಕಾರಿ ಜಿ.ಎಂ.ನರಸಿಂಹಮೂರ್ತಿ ತಿಳಿಸಿದ್ದಾರೆ.</p>.<p>ರಾಗಿ, ಮುಸುಕಿನ ಜೋಳ, ಭತ್ತ, ಸಿರಿ ಧಾನ್ಯಗಳು ಸೇರಿ 2,755 ಹೆಕ್ಟೇರ್ ಪ್ರದೇಶ ನಿಗದಿ ಪಡಿಸಲಾಗಿತ್ತು. ಈಗಾಗಲೇ 2,625 ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮುಸುಕಿನ ಜೋಳ ನಿಗದಿಪಡಿಸಿದ್ದಕ್ಕಿಂತ ಹೆಚ್ಚಾಗಿ ಬಿತ್ತನೆಯಾಗಿದೆ.</p>.<p>ದ್ವಿದಳ ಧಾನ್ಯಗಳಾದ ತೊಗರಿ, ಹುರುಳಿ, ಅವರೆ, ಅಲಸಂದೆ 3,255 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಗೆ ನಿಗದಿ ಪಡಿಸಲಾಗಿತ್ತು. ಈವರೆಗೆ 2,870 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಯಾಗಿದೆ. ಪ್ರತಿ ವರ್ಷ ಹೆಚ್ಚು ಬಿತ್ತನೆಯಾಗುತ್ತಿದ್ದ ಹುರುಳಿ ಈ ಮುಂಗಾರಿನಲ್ಲಿ ತೀರ ಕಡಿಮೆ ವಿಸ್ತೀರ್ಣದಲ್ಲಿ ಬಿತ್ತನೆಯಾಗಿದೆ.</p>.<p>ಎಣ್ಣೆ ಕಾಳುಗಳಾದ ಶೇಂಗಾ ಮತ್ತು ಹರಳು 1,932 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಹಲವು ವರ್ಷಗಳ ನಂತರ ಗುರಿ ಮೀರಿ ಬಿತ್ತನೆಯಾಗಿದೆ ಎಂದು ಮಾಹಿತಿ ನೀಡಿದರು.</p>.<p>ಜುಲೈ ತಿಂಗಳ ವಾಡಿಕೆ ಮಳೆ 66.8 ಮಿ.ಮೀ. ಆಗಿದ್ದು, 15 ವರ್ಷಗಳಲ್ಲಿ ಅತಿ ಹೆಚ್ಚು ಅಂದರೆ 280 ಮಿ.ಮೀ. ಮಳೆಯಾಗಿದೆ. 2016ರಲ್ಲಿ 217 ಮಿ.ಮೀ ಮಳೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೋವಿನಕೆರೆ:</strong> ತೋವಿನಕರೆ ರೈತ ಸಂಪರ್ಕ ಕೇಂದ್ರಕ್ಕೆ ಸೇರಿದ ಐದು ಪಂಚಾಯಿತಿ ವ್ಯಾಪ್ತಿಯಲ್ಲಿ ಶೇ 92ರಷ್ಟು ಮುಂಗಾರು ಬಿತ್ತನೆಯಾಗಿದೆ ಎಂದು ಕೃಷಿ ಅಧಿಕಾರಿ ಜಿ.ಎಂ.ನರಸಿಂಹಮೂರ್ತಿ ತಿಳಿಸಿದ್ದಾರೆ.</p>.<p>ರಾಗಿ, ಮುಸುಕಿನ ಜೋಳ, ಭತ್ತ, ಸಿರಿ ಧಾನ್ಯಗಳು ಸೇರಿ 2,755 ಹೆಕ್ಟೇರ್ ಪ್ರದೇಶ ನಿಗದಿ ಪಡಿಸಲಾಗಿತ್ತು. ಈಗಾಗಲೇ 2,625 ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮುಸುಕಿನ ಜೋಳ ನಿಗದಿಪಡಿಸಿದ್ದಕ್ಕಿಂತ ಹೆಚ್ಚಾಗಿ ಬಿತ್ತನೆಯಾಗಿದೆ.</p>.<p>ದ್ವಿದಳ ಧಾನ್ಯಗಳಾದ ತೊಗರಿ, ಹುರುಳಿ, ಅವರೆ, ಅಲಸಂದೆ 3,255 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಗೆ ನಿಗದಿ ಪಡಿಸಲಾಗಿತ್ತು. ಈವರೆಗೆ 2,870 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಯಾಗಿದೆ. ಪ್ರತಿ ವರ್ಷ ಹೆಚ್ಚು ಬಿತ್ತನೆಯಾಗುತ್ತಿದ್ದ ಹುರುಳಿ ಈ ಮುಂಗಾರಿನಲ್ಲಿ ತೀರ ಕಡಿಮೆ ವಿಸ್ತೀರ್ಣದಲ್ಲಿ ಬಿತ್ತನೆಯಾಗಿದೆ.</p>.<p>ಎಣ್ಣೆ ಕಾಳುಗಳಾದ ಶೇಂಗಾ ಮತ್ತು ಹರಳು 1,932 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಹಲವು ವರ್ಷಗಳ ನಂತರ ಗುರಿ ಮೀರಿ ಬಿತ್ತನೆಯಾಗಿದೆ ಎಂದು ಮಾಹಿತಿ ನೀಡಿದರು.</p>.<p>ಜುಲೈ ತಿಂಗಳ ವಾಡಿಕೆ ಮಳೆ 66.8 ಮಿ.ಮೀ. ಆಗಿದ್ದು, 15 ವರ್ಷಗಳಲ್ಲಿ ಅತಿ ಹೆಚ್ಚು ಅಂದರೆ 280 ಮಿ.ಮೀ. ಮಳೆಯಾಗಿದೆ. 2016ರಲ್ಲಿ 217 ಮಿ.ಮೀ ಮಳೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>