<p><strong>ಗುಬ್ಬಿ:</strong> ಸಹಕಾರಿ ಬ್ಯಾಂಕ್ ಮೂಲಕ ಸುಲಭ ಸಾಲ ಸೌಲಭ್ಯ ಲಭ್ಯವಾಗುವುದರಿಂದ ಅನೇಕ ಮಂದಿ ವ್ಯವಸಾಯ, ವ್ಯಾಪಾರ ಮತ್ತು ಉದ್ಯಮ ಸ್ಥಾಪಿಸಿ ಉತ್ತಮ ಜೀವನ ನಿರ್ವಹಿಸಲು ಸಾಧ್ಯವಾಗಿದೆ ಎಂದು ವಾಸವಿ ಪೀಠದ ಪೀಠಾಧ್ಯಕ್ಷ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು.</p>.<p>ಸೋಮವಾರ ಗುಬ್ಬಿ ಪಟ್ಟಣದಲ್ಲಿ ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ನ 18ನೇ ಶಾಖೆ ಉದ್ಘಾಟಿಸಿದ ಮಾತನಾಡಿದರು. ಬ್ಯಾಂಕ್ನ ಎಲ್ಲ ಸದಸ್ಯರ ಸಹಕಾರದಿಂದಾಗಿ ಇತರ ರಾಜ್ಯಗಳಲ್ಲೂ ಶಾಖೆಗಳನ್ನು ತೆರೆಯಲು ಸಾಧ್ಯವಾಗಿದೆ ಎಂದರು.</p>.<p>ಗುಬ್ಬಿಯಂತಹ ಪಟ್ಟಣದಲ್ಲಿ ಬ್ಯಾಂಕ್ ಶಾಖೆ ತೆರೆಯುವ ಮೂಲಕ ವ್ಯಾಪಾರಿಗಳು ಮತ್ತು ಉದ್ಯಮಿಗಳಿಗೆ ಅನುಕೂಲ ಒದಗಿಸಲು ಮುಂದಾಗಿರುವುದು ಸ್ತುತ್ಯರ್ಹ ಬೆಳವಣಿಗೆ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಎಲ್ಲರನ್ನೂ ಒಟ್ಟುಗೂಡಿಸಿ ಸಹಕಾರಿ ಬ್ಯಾಂಕ್ ಕಟ್ಟಿ ಬೆಳೆಸುವುದು ಸಾಧಾರಣ ಕಾರ್ಯವಲ್ಲ. ಬ್ಯಾಂಕ್ ಹಣಕಾಸು ವ್ಯವಹಾರ ವೃದ್ಧಿಯಾಗುತ್ತಿರುವಂತೆ ಟಿಎಂಸಿಸಿ ಬ್ಯಾಂಕ್ ವಿವಿಧ ಸಾಮಾಜಿಕ ಕಾರ್ಯಗಳಿಗೆ ಲಾಭಾಂಶ ವಿನಿಯೋಗಿಸುತ್ತಿರುವುದು ಪ್ರಶಂಸನೀಯ ಎಂದರು.</p>.<p>ಬ್ಯಾಂಕ್ ಅಧ್ಯಕ್ಷ ಎನ್.ಎಸ್.ಜಯಕುಮಾರ್, ದೇಶದಲ್ಲೇ ಮೊದಲ ಬಾರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಬ್ಯಾಂಕಿನ ವೆಬ್ಸೈಟ್ನಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಗಳು ಲಭ್ಯವಿವೆ. ಗ್ರಾಹಕರು ವೆಬ್ಸೈಟ್ ಮೂಲಕವೇ ಮಾಹಿತಿ ಪಡೆದು ವ್ಯವಹಾರ ನಡೆಸಲು ಸಾಧ್ಯವಾಗುವಂತೆ ತಂತ್ರಜ್ಞಾನ ರೂಪಿಸಲಾಗಿದ ಎಂದರು.</p>.<p>ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಜ್ಯೋತಿ ಗಣೇಶ್ ಮಾತನಾಡಿದರು. </p>.<p>ಕಾರ್ಯಕ್ರಮದಲ್ಲಿ ಬ್ಯಾಂಕ್ ನಿರ್ದೇಶಕ ಡಿ.ಎ.ಮೋಹನ್, ಎಂ.ಎಸ್. ನಾಗರಾಜಗುಪ್ತ, ಸಿ.ವಿ.ಸುರೇಶ್, ಉಮಾಶಂಕರ್, ಎಮ್.ಎಸ್.ಶಿವಶಂಕರ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ಸಹಕಾರಿ ಬ್ಯಾಂಕ್ ಮೂಲಕ ಸುಲಭ ಸಾಲ ಸೌಲಭ್ಯ ಲಭ್ಯವಾಗುವುದರಿಂದ ಅನೇಕ ಮಂದಿ ವ್ಯವಸಾಯ, ವ್ಯಾಪಾರ ಮತ್ತು ಉದ್ಯಮ ಸ್ಥಾಪಿಸಿ ಉತ್ತಮ ಜೀವನ ನಿರ್ವಹಿಸಲು ಸಾಧ್ಯವಾಗಿದೆ ಎಂದು ವಾಸವಿ ಪೀಠದ ಪೀಠಾಧ್ಯಕ್ಷ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು.</p>.<p>ಸೋಮವಾರ ಗುಬ್ಬಿ ಪಟ್ಟಣದಲ್ಲಿ ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ನ 18ನೇ ಶಾಖೆ ಉದ್ಘಾಟಿಸಿದ ಮಾತನಾಡಿದರು. ಬ್ಯಾಂಕ್ನ ಎಲ್ಲ ಸದಸ್ಯರ ಸಹಕಾರದಿಂದಾಗಿ ಇತರ ರಾಜ್ಯಗಳಲ್ಲೂ ಶಾಖೆಗಳನ್ನು ತೆರೆಯಲು ಸಾಧ್ಯವಾಗಿದೆ ಎಂದರು.</p>.<p>ಗುಬ್ಬಿಯಂತಹ ಪಟ್ಟಣದಲ್ಲಿ ಬ್ಯಾಂಕ್ ಶಾಖೆ ತೆರೆಯುವ ಮೂಲಕ ವ್ಯಾಪಾರಿಗಳು ಮತ್ತು ಉದ್ಯಮಿಗಳಿಗೆ ಅನುಕೂಲ ಒದಗಿಸಲು ಮುಂದಾಗಿರುವುದು ಸ್ತುತ್ಯರ್ಹ ಬೆಳವಣಿಗೆ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಎಲ್ಲರನ್ನೂ ಒಟ್ಟುಗೂಡಿಸಿ ಸಹಕಾರಿ ಬ್ಯಾಂಕ್ ಕಟ್ಟಿ ಬೆಳೆಸುವುದು ಸಾಧಾರಣ ಕಾರ್ಯವಲ್ಲ. ಬ್ಯಾಂಕ್ ಹಣಕಾಸು ವ್ಯವಹಾರ ವೃದ್ಧಿಯಾಗುತ್ತಿರುವಂತೆ ಟಿಎಂಸಿಸಿ ಬ್ಯಾಂಕ್ ವಿವಿಧ ಸಾಮಾಜಿಕ ಕಾರ್ಯಗಳಿಗೆ ಲಾಭಾಂಶ ವಿನಿಯೋಗಿಸುತ್ತಿರುವುದು ಪ್ರಶಂಸನೀಯ ಎಂದರು.</p>.<p>ಬ್ಯಾಂಕ್ ಅಧ್ಯಕ್ಷ ಎನ್.ಎಸ್.ಜಯಕುಮಾರ್, ದೇಶದಲ್ಲೇ ಮೊದಲ ಬಾರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಬ್ಯಾಂಕಿನ ವೆಬ್ಸೈಟ್ನಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಗಳು ಲಭ್ಯವಿವೆ. ಗ್ರಾಹಕರು ವೆಬ್ಸೈಟ್ ಮೂಲಕವೇ ಮಾಹಿತಿ ಪಡೆದು ವ್ಯವಹಾರ ನಡೆಸಲು ಸಾಧ್ಯವಾಗುವಂತೆ ತಂತ್ರಜ್ಞಾನ ರೂಪಿಸಲಾಗಿದ ಎಂದರು.</p>.<p>ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಜ್ಯೋತಿ ಗಣೇಶ್ ಮಾತನಾಡಿದರು. </p>.<p>ಕಾರ್ಯಕ್ರಮದಲ್ಲಿ ಬ್ಯಾಂಕ್ ನಿರ್ದೇಶಕ ಡಿ.ಎ.ಮೋಹನ್, ಎಂ.ಎಸ್. ನಾಗರಾಜಗುಪ್ತ, ಸಿ.ವಿ.ಸುರೇಶ್, ಉಮಾಶಂಕರ್, ಎಮ್.ಎಸ್.ಶಿವಶಂಕರ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>