<p><strong>ತುಮಕೂರು:</strong> ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಬೆಳವಣಿಗೆಯಿಂದ ನಿರುದ್ಯೋಗ ಹೆಚ್ಚಾಗಲಿದೆ ಎಂಬುದು ತಪ್ಪು ತಿಳಿವಳಿಕೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಐಐಐಟಿ ಧಾರವಾಡ ನಿರ್ದೇಶಕ ಎಸ್.ಆರ್.ಮಹದೇವ ಪ್ರಸನ್ನ ವಿಶ್ವಾಸ ವ್ಯಕ್ತಪಡಿಸಿದರು.</p>.<p>ನಗರದ ಸಿದ್ಧಗಂಗಾ ಪದವಿ ಕಾಲೇಜಿನಲ್ಲಿ ಎಐಸಿಟಿಇ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಕೃತಕ ಬುದ್ಧಿಮತ್ತೆ ಕುರಿತ ವಿಚಾರ ಸಂಕಿರಣವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.</p>.<p>ಕಂಪ್ಯೂಟರ್ ಬಳಕೆಗೆ ಬಂದ ಸಮಯದಲ್ಲೂ ನಿರುದ್ಯೋಗದ ಬಗ್ಗೆ ಚರ್ಚೆಗಳು ನಡೆದಿದ್ದವು. ಆದರೆ ಪ್ರಸ್ತುತ ಅತಿ ಹೆಚ್ಚು ಉದ್ಯೋಗ ಸೃಷ್ಟಿಸುವ ಕ್ಷೇತ್ರವಾಗಿ ಬೆಳವಣಿಗೆ ಸಾಧಿಸಿದೆ. ಅದೇ ಮಾರ್ಗದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸಾಗುವ ವಿಶ್ವಾಸವಿದೆ ಎಂದರು.</p>.<p>ಎಐಎಂಎಲ್ ಹಾಗೂ ಕಂಪ್ಯೂಟರ್ ಎಂಜಿನಿಯರಿಂಗ್ ಒಂದಕ್ಕೊಂದು ಪೂರಕವಾಗಿದೆ. ಸ್ವಾಫ್ಟ್ವೇರ್ ಎಂಜಿನಿಯರ್ಗಿಂತ ವೇಗವಾಗಿ, ನಿಖರವಾಗಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಕೆಲಸ ಮಾಡಲಿದೆ. ಎಐಎಂಎಲ್ ಬಳಕೆಯಿಂದ ಸರಾಗವಾಗಿ ಡಿಜಿಟಲ್ ತಂತ್ರಜ್ಞಾನ ಬಳಕೆ ಮಾಡುವ ಅವಕಾಶ ಸಿಗಲಿದೆ ಎಂದು ಹೇಳಿದರು.</p>.<p>ವಿಷಯ ಮಂಡಿಸಿದ ವಿಷಯ ತಜ್ಞ ಮಹೇಶ್ ಪಂಡಿತ್, ‘ಕೈಗಾರಿಕೆ– ಶಿಕ್ಷಣದ ನಡುವಿನ ಅಂತರವನ್ನು ಕಡಿಮೆ ಮಾಡಬೇಕಿದೆ. ಉನ್ನತ ಶಿಕ್ಷಣದ ಗುಣಮಟ್ಟ ಮತ್ತಷ್ಟು ಸುಧಾರಿಸಬೇಕಿದೆ. ಎಐಎಂಎಲ್ ಬಳಕೆಯಿಂದ ತಂತ್ರಜ್ಞಾನ ಆಧಾರಿತ ಭಾರತ ನಿರ್ಮಾಣ ಸಾಧ್ಯವಾಗಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಜಂಟಿ ಕಾರ್ಯದರ್ಶಿ ಶಿವಕುಮಾರಯ್ಯ, ಸಂಸ್ಥೆ ಕಾರ್ಯದರ್ಶಿ ಟಿ.ಕೆ.ನಂಜುಂಡಪ್ಪ, ಕಾಲೇಜು ಪ್ರಾಂಶುಪಾಲ ನಿಜಲಿಂಗಪ್ಪ, ಸಂಯೋಜಕಿ ಪ್ರೊ.ಎಂ.ಮಮತ, ಪ್ರೊ.ಕೆ.ಎಸ್.ಲಿಂಗದೇವರಪ್ಪ, ಹೇಮಲತಾ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಬೆಳವಣಿಗೆಯಿಂದ ನಿರುದ್ಯೋಗ ಹೆಚ್ಚಾಗಲಿದೆ ಎಂಬುದು ತಪ್ಪು ತಿಳಿವಳಿಕೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಐಐಐಟಿ ಧಾರವಾಡ ನಿರ್ದೇಶಕ ಎಸ್.ಆರ್.ಮಹದೇವ ಪ್ರಸನ್ನ ವಿಶ್ವಾಸ ವ್ಯಕ್ತಪಡಿಸಿದರು.</p>.<p>ನಗರದ ಸಿದ್ಧಗಂಗಾ ಪದವಿ ಕಾಲೇಜಿನಲ್ಲಿ ಎಐಸಿಟಿಇ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಕೃತಕ ಬುದ್ಧಿಮತ್ತೆ ಕುರಿತ ವಿಚಾರ ಸಂಕಿರಣವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.</p>.<p>ಕಂಪ್ಯೂಟರ್ ಬಳಕೆಗೆ ಬಂದ ಸಮಯದಲ್ಲೂ ನಿರುದ್ಯೋಗದ ಬಗ್ಗೆ ಚರ್ಚೆಗಳು ನಡೆದಿದ್ದವು. ಆದರೆ ಪ್ರಸ್ತುತ ಅತಿ ಹೆಚ್ಚು ಉದ್ಯೋಗ ಸೃಷ್ಟಿಸುವ ಕ್ಷೇತ್ರವಾಗಿ ಬೆಳವಣಿಗೆ ಸಾಧಿಸಿದೆ. ಅದೇ ಮಾರ್ಗದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸಾಗುವ ವಿಶ್ವಾಸವಿದೆ ಎಂದರು.</p>.<p>ಎಐಎಂಎಲ್ ಹಾಗೂ ಕಂಪ್ಯೂಟರ್ ಎಂಜಿನಿಯರಿಂಗ್ ಒಂದಕ್ಕೊಂದು ಪೂರಕವಾಗಿದೆ. ಸ್ವಾಫ್ಟ್ವೇರ್ ಎಂಜಿನಿಯರ್ಗಿಂತ ವೇಗವಾಗಿ, ನಿಖರವಾಗಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಕೆಲಸ ಮಾಡಲಿದೆ. ಎಐಎಂಎಲ್ ಬಳಕೆಯಿಂದ ಸರಾಗವಾಗಿ ಡಿಜಿಟಲ್ ತಂತ್ರಜ್ಞಾನ ಬಳಕೆ ಮಾಡುವ ಅವಕಾಶ ಸಿಗಲಿದೆ ಎಂದು ಹೇಳಿದರು.</p>.<p>ವಿಷಯ ಮಂಡಿಸಿದ ವಿಷಯ ತಜ್ಞ ಮಹೇಶ್ ಪಂಡಿತ್, ‘ಕೈಗಾರಿಕೆ– ಶಿಕ್ಷಣದ ನಡುವಿನ ಅಂತರವನ್ನು ಕಡಿಮೆ ಮಾಡಬೇಕಿದೆ. ಉನ್ನತ ಶಿಕ್ಷಣದ ಗುಣಮಟ್ಟ ಮತ್ತಷ್ಟು ಸುಧಾರಿಸಬೇಕಿದೆ. ಎಐಎಂಎಲ್ ಬಳಕೆಯಿಂದ ತಂತ್ರಜ್ಞಾನ ಆಧಾರಿತ ಭಾರತ ನಿರ್ಮಾಣ ಸಾಧ್ಯವಾಗಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಜಂಟಿ ಕಾರ್ಯದರ್ಶಿ ಶಿವಕುಮಾರಯ್ಯ, ಸಂಸ್ಥೆ ಕಾರ್ಯದರ್ಶಿ ಟಿ.ಕೆ.ನಂಜುಂಡಪ್ಪ, ಕಾಲೇಜು ಪ್ರಾಂಶುಪಾಲ ನಿಜಲಿಂಗಪ್ಪ, ಸಂಯೋಜಕಿ ಪ್ರೊ.ಎಂ.ಮಮತ, ಪ್ರೊ.ಕೆ.ಎಸ್.ಲಿಂಗದೇವರಪ್ಪ, ಹೇಮಲತಾ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>