<p><strong>ತುಮಕೂರು:</strong> ಮಾಸಿಕ ₹ 18,000 ಕನಿಷ್ಠ ವೇತನವನ್ನು ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಒಕ್ಕೂಟದ ತುಮಕೂರು ಜಿಲ್ಲಾ ಸಮಿತಿಯ ಸದಸ್ಯರು ಎಐಟಿಯುಸಿ ಸಂಘಟನೆಯ ಸಹಯೋಗದಲ್ಲಿ ಶನಿವಾರ ಪ್ರತಿಭಟನೆ ಮಾಡಿದರು.</p>.<p>ಶಾಲೆಗಳಿಗೆ ಬಿಸಿಯೂಟ ಪೂರೈಕೆ ಮಾಡಲು ಇಸ್ಕಾನ್ ಮತ್ತು ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡುವುದನ್ನು ಕೈಬಿಡಬೇಕು. ಸಿಬ್ಬಂದಿಗೆ ಉದ್ಯೋಗ ಭದ್ರತೆ ಒದಗಿಸಬೇಕು. ಕೆಲಸಗಾರರನ್ನು ಶಾಲಾ ಸಿಬ್ಬಂದಿಯಂದು ಪರಿಗಣಿಸಬೇಕು. ಭವಿಷ್ಯನಿಧಿ ಸೌಲಭ್ಯ ಮತ್ತು ಆರೋಗ್ಯ ವಿಮಾ ಸೌಲಭ್ಯ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p>ಬಿಸಿಯೂಟ ತಯಾರಕರಿಗೆ ₹ 2 ಲಕ್ಷ ಅಫಘಾತ ವಿಮೆ, ಮರಣ ಹೊಂದಿದರೆ ಕುಟುಂಬದ ಸದಸ್ಯರಿಗೆ ₹ 5 ಲಕ್ಷ ಪರಿಹಾರ ನೀಡಬೇಕು. ನಿವೃತ್ತರಾದವರಿಗೆ ₹ 3,000 ಪಿಂಚಣಿಯೊಂದಿಗೆ ₹ 2 ಲಕ್ಷ ಹಿಡುಗಂಟು ನೀಡಬೇಕು ಎಂದು ಬೇಡಿಕೆಗಳನ್ನು ಮಂಡಿಸಿದರು.</p>.<p>ಉದ್ಯೋಗ ಭದ್ರತೆಯಿಲ್ಲದೆ 16 ವರ್ಷಗಳಿಂದ ನೌಕರರು ದುಡಿಯುತ್ತಿದ್ದಾರೆ. ಮುಖ್ಯ ಅಡುಗೆ ತಯಾರಿಸುವವರಿಗೆ ₹2,700, ಸಹಾಯಕಿಯರಿಗೆ ₹2,600 ಮಾತ್ರ ಸಿಗುತ್ತಿದೆ. ಸರ್ಕಾರ ಈ ಹಿಂದೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ದೂರಿದರು. </p>.<p>ಪ್ರತಿಭಟನೆಯಲ್ಲಿ ಒಕ್ಕೂಟದ ಸಂಚಾಲಕರಾದ ರಾಧಮ್ಮ, ಸಾವಿತ್ರಮ್ಮ, ಉಮಾದೇವಿ, ನಾಗರತ್ನಮ್ಮ, ಎನ್.ಎಸ್.ನಳಿನಾ, ಅನಿತಾ, ಪದ್ಮಾ, ಚಂದ್ರಕಲಾ ಇದ್ದರು. ರಾಜ್ಯ ಸರ್ಕಾರದ ಗಮನ ಸೆಳೆಯಲು ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಮಾಸಿಕ ₹ 18,000 ಕನಿಷ್ಠ ವೇತನವನ್ನು ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಒಕ್ಕೂಟದ ತುಮಕೂರು ಜಿಲ್ಲಾ ಸಮಿತಿಯ ಸದಸ್ಯರು ಎಐಟಿಯುಸಿ ಸಂಘಟನೆಯ ಸಹಯೋಗದಲ್ಲಿ ಶನಿವಾರ ಪ್ರತಿಭಟನೆ ಮಾಡಿದರು.</p>.<p>ಶಾಲೆಗಳಿಗೆ ಬಿಸಿಯೂಟ ಪೂರೈಕೆ ಮಾಡಲು ಇಸ್ಕಾನ್ ಮತ್ತು ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡುವುದನ್ನು ಕೈಬಿಡಬೇಕು. ಸಿಬ್ಬಂದಿಗೆ ಉದ್ಯೋಗ ಭದ್ರತೆ ಒದಗಿಸಬೇಕು. ಕೆಲಸಗಾರರನ್ನು ಶಾಲಾ ಸಿಬ್ಬಂದಿಯಂದು ಪರಿಗಣಿಸಬೇಕು. ಭವಿಷ್ಯನಿಧಿ ಸೌಲಭ್ಯ ಮತ್ತು ಆರೋಗ್ಯ ವಿಮಾ ಸೌಲಭ್ಯ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p>ಬಿಸಿಯೂಟ ತಯಾರಕರಿಗೆ ₹ 2 ಲಕ್ಷ ಅಫಘಾತ ವಿಮೆ, ಮರಣ ಹೊಂದಿದರೆ ಕುಟುಂಬದ ಸದಸ್ಯರಿಗೆ ₹ 5 ಲಕ್ಷ ಪರಿಹಾರ ನೀಡಬೇಕು. ನಿವೃತ್ತರಾದವರಿಗೆ ₹ 3,000 ಪಿಂಚಣಿಯೊಂದಿಗೆ ₹ 2 ಲಕ್ಷ ಹಿಡುಗಂಟು ನೀಡಬೇಕು ಎಂದು ಬೇಡಿಕೆಗಳನ್ನು ಮಂಡಿಸಿದರು.</p>.<p>ಉದ್ಯೋಗ ಭದ್ರತೆಯಿಲ್ಲದೆ 16 ವರ್ಷಗಳಿಂದ ನೌಕರರು ದುಡಿಯುತ್ತಿದ್ದಾರೆ. ಮುಖ್ಯ ಅಡುಗೆ ತಯಾರಿಸುವವರಿಗೆ ₹2,700, ಸಹಾಯಕಿಯರಿಗೆ ₹2,600 ಮಾತ್ರ ಸಿಗುತ್ತಿದೆ. ಸರ್ಕಾರ ಈ ಹಿಂದೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ದೂರಿದರು. </p>.<p>ಪ್ರತಿಭಟನೆಯಲ್ಲಿ ಒಕ್ಕೂಟದ ಸಂಚಾಲಕರಾದ ರಾಧಮ್ಮ, ಸಾವಿತ್ರಮ್ಮ, ಉಮಾದೇವಿ, ನಾಗರತ್ನಮ್ಮ, ಎನ್.ಎಸ್.ನಳಿನಾ, ಅನಿತಾ, ಪದ್ಮಾ, ಚಂದ್ರಕಲಾ ಇದ್ದರು. ರಾಜ್ಯ ಸರ್ಕಾರದ ಗಮನ ಸೆಳೆಯಲು ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>