<p><strong>ತುಮಕೂರು:</strong> ನೂತನ ಕಾರ್ಮಿಕ ಸಂಹಿತೆ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ವತಿಯಿಂದ ನಗರದ ಟೌನ್ಹಾಲ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.</p>.<p>‘ಕಟ್ಟಡ ಕಾರ್ಮಿಕರ 1996ರ ಮೂಲ ಕಾಯ್ದೆ ಉಳಿಸಬೇಕು. ಕಾರ್ಮಿಕರು ಸ್ಥಿರ ಆದಾಯವಿಲ್ಲದೆ ಮಕ್ಕಳಿಗೆ ಶಿಕ್ಷಣ ನೀಡಲು ಆಗುತ್ತಿಲ್ಲ. ಕೆಲಸ ಹುಡುಕಿಕೊಂಡು ವಲಸೆ ಹೋಗಬೇಕಾದ ಪರಿಸ್ಥಿತಿ ಬಂದಿದೆ’ ಎಂದು ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಗಿರೀಶ್ ಹೇಳಿದರು.</p>.<p>44 ಕಾರ್ಮಿಕ ಕಾನೂನುಗಳನ್ನು ಮತ್ತೆ ಜಾರಿಗೊಳಿಸಬೇಕು. ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಾಯ್ದೆ– 1996, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಸೆಸ್ ಕಾಯ್ದೆ ಜಾರಿಗೆ ತರಬೇಕು. ಕಾರ್ಮಿಕರನ್ನು ಸಾಮಾಜಿಕ ಭದ್ರತಾ ಯೋಜನೆಯಡಿ ನೋಂದಣಿ ಮಾಡಬೇಕು. ₹36 ಸಾವಿರ ಕನಿಷ್ಠ ವೇತನ ನಿಗದಿ ಪಡಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಖಾತರಿ ಪಡಿಸಬೇಕು. ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ನಿರ್ಮಾಣ ವಲಯದ ಮಹಿಳಾ ಕಾರ್ಮಿಕರಿಗೆ ಕಾನೂನಿನ ಪ್ರಕಾರ 6 ತಿಂಗಳ ವೇತನ ಸಹಿತ ಹೆರಿಗೆ ರಜೆ ನೀಡಬೇಕು. ನಿವೇಶನ ವಂಚಿತರಿಗೆ ಭೂಮಿ, ವಸತಿ ಕೊಡಬೇಕು ಎಂದರು.</p>.<p>ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಚಂದ್ರಶೇಖರ್, ಮುಖಂಡರಾದ ಆರ್.ಗೋವಿಂದರಾಜು, ಹನುಮಂತರಾವ್, ರಂಗಧಾಮಯ್ಯ, ಅಂಜನಪ್ಪ, ದೇವರಾಜ್, ವೆಂಕಟೇಶ್, ನರಸಿಂಹಮೂರ್ತಿ, ನಾಗರಾಜು ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನೂತನ ಕಾರ್ಮಿಕ ಸಂಹಿತೆ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ವತಿಯಿಂದ ನಗರದ ಟೌನ್ಹಾಲ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.</p>.<p>‘ಕಟ್ಟಡ ಕಾರ್ಮಿಕರ 1996ರ ಮೂಲ ಕಾಯ್ದೆ ಉಳಿಸಬೇಕು. ಕಾರ್ಮಿಕರು ಸ್ಥಿರ ಆದಾಯವಿಲ್ಲದೆ ಮಕ್ಕಳಿಗೆ ಶಿಕ್ಷಣ ನೀಡಲು ಆಗುತ್ತಿಲ್ಲ. ಕೆಲಸ ಹುಡುಕಿಕೊಂಡು ವಲಸೆ ಹೋಗಬೇಕಾದ ಪರಿಸ್ಥಿತಿ ಬಂದಿದೆ’ ಎಂದು ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಗಿರೀಶ್ ಹೇಳಿದರು.</p>.<p>44 ಕಾರ್ಮಿಕ ಕಾನೂನುಗಳನ್ನು ಮತ್ತೆ ಜಾರಿಗೊಳಿಸಬೇಕು. ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಾಯ್ದೆ– 1996, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಸೆಸ್ ಕಾಯ್ದೆ ಜಾರಿಗೆ ತರಬೇಕು. ಕಾರ್ಮಿಕರನ್ನು ಸಾಮಾಜಿಕ ಭದ್ರತಾ ಯೋಜನೆಯಡಿ ನೋಂದಣಿ ಮಾಡಬೇಕು. ₹36 ಸಾವಿರ ಕನಿಷ್ಠ ವೇತನ ನಿಗದಿ ಪಡಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಖಾತರಿ ಪಡಿಸಬೇಕು. ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ನಿರ್ಮಾಣ ವಲಯದ ಮಹಿಳಾ ಕಾರ್ಮಿಕರಿಗೆ ಕಾನೂನಿನ ಪ್ರಕಾರ 6 ತಿಂಗಳ ವೇತನ ಸಹಿತ ಹೆರಿಗೆ ರಜೆ ನೀಡಬೇಕು. ನಿವೇಶನ ವಂಚಿತರಿಗೆ ಭೂಮಿ, ವಸತಿ ಕೊಡಬೇಕು ಎಂದರು.</p>.<p>ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಚಂದ್ರಶೇಖರ್, ಮುಖಂಡರಾದ ಆರ್.ಗೋವಿಂದರಾಜು, ಹನುಮಂತರಾವ್, ರಂಗಧಾಮಯ್ಯ, ಅಂಜನಪ್ಪ, ದೇವರಾಜ್, ವೆಂಕಟೇಶ್, ನರಸಿಂಹಮೂರ್ತಿ, ನಾಗರಾಜು ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>