<p>ಶಿರಾ: ತಾಲ್ಲೂಕಿನ ಅಜ್ಜಯ್ಯನಪಾಳ್ಯದ ಶಾಲೆಯನ್ನು ಬ್ರಹ್ಮಸಂದ್ರ ಕೆಪಿಎಸ್ ಮ್ಯಾಗ್ನೆಟ್ಗೆ ವಿಲೀನ ಮಾಡುವುದನ್ನು ವಿರೋಧಿಸಿ ಗ್ರಾಮಸ್ಥರು, ಎಐಡಿಎಸ್ಒ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯಿಂದ ಸೀಬಿ ಅಗ್ರಹಾರ ಗ್ರಾ.ಪಂ ಎದುರು ಪ್ರತಿಭಟನೆ ನಡೆಸಿ, ಪಿಡಿಒಗೆ ಮನವಿ ಪತ್ರ ಸಲ್ಲಿಸಿದರು.</p>.<p>ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಉಪಾಧ್ಯಕ್ಷೆ ರತ್ನಮ್ಮ ಮಾತನಾಡಿ, ಅಜ್ಜಯ್ಯನಪಾಳ್ಯದ ಸರ್ಕಾರಿ ಶಾಲೆಯನ್ನು ಮುಚ್ಚಿದರೆ 1ನೇ ತರಗತಿಯ 6 ವರ್ಷದ ಮಕ್ಕಳು ಸಹ ದಿನನಿತ್ಯ 4 ಕಿ.ಮೀ ದೂರ ನಡೆದುಕೊಂಡು ರಾಷ್ಟ್ರೀಯ ಹೆದ್ದಾರಿ ದಾಟಿಕೊಂಡು ಬ್ರಹ್ಮಸಂದ್ರ ಶಾಲೆಗೆ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇದರಿಂದ ಮಕ್ಕಳಿಗೆ ತೊಂದರೆಯಾಗಲಿದೆ. ಪೋಷಕರು ದೂರದ ಶಾಲೆಗೆ ಹೆಣ್ಣು ಮಕ್ಕಳನ್ನು ಸೇರಿಸದ ಕಾರಣ ಅವರು ಶಿಕ್ಷಣದಿಂದ ವಂಚಿತರಾಗುವಂತಾಗುತ್ತದೆ ಎಂದರು.</p>.<p>ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಹಿಂಪಡೆಯಿರಿ. ನಮ್ಮೂರ ಶಾಲೆ ವಿಲೀನ ಕೈಬಿಡಿ, ನಮ್ಮೂರ ಶಾಲೆಗೆ ಸಮರ್ಪಕ ಸೌಲಭ್ಯ ನೀಡಿ, ಕನ್ನಡ ಮಾಧ್ಯಮವನ್ನು ಉಳಿಸಿ. ಇಂಗ್ಲಿಷ್ ಮಾಧ್ಯಮಕ್ಕಾಗಿ ಪ್ರತ್ಯೇಕ ಶಿಕ್ಷಕರ ನೇಮಕ ಮಾಡಿ ಎಂದು ಒತ್ತಾಯಿಸಿದರು.</p>.<p>ಪ್ರತಿಭಟನೆಯಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಗ್ರಾಮ ಸಮಿತಿಯ ಸದಸ್ಯರಾದ ಭವ್ಯ, ವಿಮಲಾ, ಎಸ್ ಡಿಎಂಸಿ ಅಧ್ಯಕ್ಷೆ ಶಶಿಕಲಾ, ನರಸಮ್ಮ ಹಾಗೂ ಪೋಷಕರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-17-767954013</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಾ: ತಾಲ್ಲೂಕಿನ ಅಜ್ಜಯ್ಯನಪಾಳ್ಯದ ಶಾಲೆಯನ್ನು ಬ್ರಹ್ಮಸಂದ್ರ ಕೆಪಿಎಸ್ ಮ್ಯಾಗ್ನೆಟ್ಗೆ ವಿಲೀನ ಮಾಡುವುದನ್ನು ವಿರೋಧಿಸಿ ಗ್ರಾಮಸ್ಥರು, ಎಐಡಿಎಸ್ಒ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯಿಂದ ಸೀಬಿ ಅಗ್ರಹಾರ ಗ್ರಾ.ಪಂ ಎದುರು ಪ್ರತಿಭಟನೆ ನಡೆಸಿ, ಪಿಡಿಒಗೆ ಮನವಿ ಪತ್ರ ಸಲ್ಲಿಸಿದರು.</p>.<p>ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಉಪಾಧ್ಯಕ್ಷೆ ರತ್ನಮ್ಮ ಮಾತನಾಡಿ, ಅಜ್ಜಯ್ಯನಪಾಳ್ಯದ ಸರ್ಕಾರಿ ಶಾಲೆಯನ್ನು ಮುಚ್ಚಿದರೆ 1ನೇ ತರಗತಿಯ 6 ವರ್ಷದ ಮಕ್ಕಳು ಸಹ ದಿನನಿತ್ಯ 4 ಕಿ.ಮೀ ದೂರ ನಡೆದುಕೊಂಡು ರಾಷ್ಟ್ರೀಯ ಹೆದ್ದಾರಿ ದಾಟಿಕೊಂಡು ಬ್ರಹ್ಮಸಂದ್ರ ಶಾಲೆಗೆ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇದರಿಂದ ಮಕ್ಕಳಿಗೆ ತೊಂದರೆಯಾಗಲಿದೆ. ಪೋಷಕರು ದೂರದ ಶಾಲೆಗೆ ಹೆಣ್ಣು ಮಕ್ಕಳನ್ನು ಸೇರಿಸದ ಕಾರಣ ಅವರು ಶಿಕ್ಷಣದಿಂದ ವಂಚಿತರಾಗುವಂತಾಗುತ್ತದೆ ಎಂದರು.</p>.<p>ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಹಿಂಪಡೆಯಿರಿ. ನಮ್ಮೂರ ಶಾಲೆ ವಿಲೀನ ಕೈಬಿಡಿ, ನಮ್ಮೂರ ಶಾಲೆಗೆ ಸಮರ್ಪಕ ಸೌಲಭ್ಯ ನೀಡಿ, ಕನ್ನಡ ಮಾಧ್ಯಮವನ್ನು ಉಳಿಸಿ. ಇಂಗ್ಲಿಷ್ ಮಾಧ್ಯಮಕ್ಕಾಗಿ ಪ್ರತ್ಯೇಕ ಶಿಕ್ಷಕರ ನೇಮಕ ಮಾಡಿ ಎಂದು ಒತ್ತಾಯಿಸಿದರು.</p>.<p>ಪ್ರತಿಭಟನೆಯಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಗ್ರಾಮ ಸಮಿತಿಯ ಸದಸ್ಯರಾದ ಭವ್ಯ, ವಿಮಲಾ, ಎಸ್ ಡಿಎಂಸಿ ಅಧ್ಯಕ್ಷೆ ಶಶಿಕಲಾ, ನರಸಮ್ಮ ಹಾಗೂ ಪೋಷಕರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-17-767954013</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>