<p><strong>ತುಮಕೂರು: </strong>ಮಧ್ಯಾಹ್ನದ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ತಡೆಹಿಡಿದಿರುವ ಜೂನ್, ಜುಲೈ ತಿಂಗಳ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.</p>.<p>ಅಲಹಾಬಾದ್ ಹೈಕೋರ್ಟ್ 2020ರ ಡಿಸೆಂಬರ್ 15ರಂದು ನೀಡಿದ ಕನಿಷ್ಠ ವೇತನಕ್ಕೆ ಸಂಬಂಧಿಸಿದ ತೀರ್ಪನ್ನು ದೇಶದಾದ್ಯಂತ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.</p>.<p>ಎಐಟಿಯುಸಿ ರಾಜ್ಯ ಸಲಹೆಗಾರ ಎನ್.ಶಿವಣ್ಣ, ‘2004ರಲ್ಲಿ ಸರ್ಕಾರ ಜಾರಿಗೆ ತಂದ ಅಕ್ಷರದಾಸೋಹ ಬಿಸಿಯೂಟ ಕಾರ್ಯಕ್ರಮ ಪ್ರಸ್ತುತ ದೇಶದಾದ್ಯಂತ ಜಾರಿಯಲ್ಲಿದೆ. ನಿರಂತರ ಹೋರಾಟದ ಫಲವಾಗಿ ಮುಖ್ಯ ಅಡುಗೆಯವರಿಗೆ ತಿಂಗಳಿಗೆ ₹2,700, ಸಹಾಯಕರಿಗೆ ₹2,600 ನೀಡಲಾಗುತ್ತಿದೆ. ಈಗಿನ ಬೆಲೆ ಏರಿಕೆಯಿಂದಾಗಿ ಇಷ್ಟು ಕನಿಷ್ಠ ಹಣದಲ್ಲಿ ಬದುಕುವುದು ಕಷ್ಟಕರವಾಗಿದೆ. ಹಾಗಾಗಿ ಕೋರ್ಟ್ ತೀರ್ಪು ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>ಬಿಸಿಯೂಟ ತಯಾರಕರಿಗೂ ಕೋವಿಡ್ ಪರಿಹಾರ ನೀಡಬೇಕು. ವಯಸ್ಸಿನ ನೆಪ ಮಾಡಿಕೊಂಡು 60 ವರ್ಷ ದಾಟಿದ ಅಡುಗೆ ಕೆಲಸಗಾರರನ್ನು ನಿವೃತ್ತಿ ಉಪದನವಿಲ್ಲದೆ ಕೆಲಸದಿಂದ ಕೈಬಿಡಬಾರದು. ಜತೆಗೆ ಬಿಸಿಯೂಟ ತಯಾರಕರ ಮೇಲ್ವಿಚಾರಣೆಯನ್ನು ಎಸ್ಡಿಎಂಸಿಯಿಂದ ಶಾಲೆಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.</p>.<p>ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಕಂಬೇಗೌಡ, ‘ಬಿಸಿಯೂಟ ತಯಾರಕರನ್ನು ಕಾಯಂಗೊಳಿಸಿ,ಶಾಸನಬದ್ಧ ಹಕ್ಕು ನೀಡಬೇಕು. ಎಲ್ಐಸಿಆಧಾರಿತ ನಿವೃತ್ತಿ ವೇತನ, ಪ್ರತಿ ತಿಂಗಳು 5ನೇ ತಾರೀಖಿಗೆ ವೇತನ ಬಿಡುಗಡೆ ಮಾಡಬೇಕು’ ಆಗ್ರಹಿಸಿದರು.</p>.<p>ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಗಿರೀಶ್, ಜಿಲ್ಲಾ ಸಂಚಾಲಕ ಕಾಂತರಾಜು, ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷರಾದ ವನಜಾಕ್ಷಮ್ಮ, ಸಾವಿತ್ರಮ್ಮ, ಉಮಾದೇವಿ, ನಾಗರತ್ನಮ್ಮ, ಪದ್ಮ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಮಧ್ಯಾಹ್ನದ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ತಡೆಹಿಡಿದಿರುವ ಜೂನ್, ಜುಲೈ ತಿಂಗಳ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.</p>.<p>ಅಲಹಾಬಾದ್ ಹೈಕೋರ್ಟ್ 2020ರ ಡಿಸೆಂಬರ್ 15ರಂದು ನೀಡಿದ ಕನಿಷ್ಠ ವೇತನಕ್ಕೆ ಸಂಬಂಧಿಸಿದ ತೀರ್ಪನ್ನು ದೇಶದಾದ್ಯಂತ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.</p>.<p>ಎಐಟಿಯುಸಿ ರಾಜ್ಯ ಸಲಹೆಗಾರ ಎನ್.ಶಿವಣ್ಣ, ‘2004ರಲ್ಲಿ ಸರ್ಕಾರ ಜಾರಿಗೆ ತಂದ ಅಕ್ಷರದಾಸೋಹ ಬಿಸಿಯೂಟ ಕಾರ್ಯಕ್ರಮ ಪ್ರಸ್ತುತ ದೇಶದಾದ್ಯಂತ ಜಾರಿಯಲ್ಲಿದೆ. ನಿರಂತರ ಹೋರಾಟದ ಫಲವಾಗಿ ಮುಖ್ಯ ಅಡುಗೆಯವರಿಗೆ ತಿಂಗಳಿಗೆ ₹2,700, ಸಹಾಯಕರಿಗೆ ₹2,600 ನೀಡಲಾಗುತ್ತಿದೆ. ಈಗಿನ ಬೆಲೆ ಏರಿಕೆಯಿಂದಾಗಿ ಇಷ್ಟು ಕನಿಷ್ಠ ಹಣದಲ್ಲಿ ಬದುಕುವುದು ಕಷ್ಟಕರವಾಗಿದೆ. ಹಾಗಾಗಿ ಕೋರ್ಟ್ ತೀರ್ಪು ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>ಬಿಸಿಯೂಟ ತಯಾರಕರಿಗೂ ಕೋವಿಡ್ ಪರಿಹಾರ ನೀಡಬೇಕು. ವಯಸ್ಸಿನ ನೆಪ ಮಾಡಿಕೊಂಡು 60 ವರ್ಷ ದಾಟಿದ ಅಡುಗೆ ಕೆಲಸಗಾರರನ್ನು ನಿವೃತ್ತಿ ಉಪದನವಿಲ್ಲದೆ ಕೆಲಸದಿಂದ ಕೈಬಿಡಬಾರದು. ಜತೆಗೆ ಬಿಸಿಯೂಟ ತಯಾರಕರ ಮೇಲ್ವಿಚಾರಣೆಯನ್ನು ಎಸ್ಡಿಎಂಸಿಯಿಂದ ಶಾಲೆಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.</p>.<p>ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಕಂಬೇಗೌಡ, ‘ಬಿಸಿಯೂಟ ತಯಾರಕರನ್ನು ಕಾಯಂಗೊಳಿಸಿ,ಶಾಸನಬದ್ಧ ಹಕ್ಕು ನೀಡಬೇಕು. ಎಲ್ಐಸಿಆಧಾರಿತ ನಿವೃತ್ತಿ ವೇತನ, ಪ್ರತಿ ತಿಂಗಳು 5ನೇ ತಾರೀಖಿಗೆ ವೇತನ ಬಿಡುಗಡೆ ಮಾಡಬೇಕು’ ಆಗ್ರಹಿಸಿದರು.</p>.<p>ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಗಿರೀಶ್, ಜಿಲ್ಲಾ ಸಂಚಾಲಕ ಕಾಂತರಾಜು, ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷರಾದ ವನಜಾಕ್ಷಮ್ಮ, ಸಾವಿತ್ರಮ್ಮ, ಉಮಾದೇವಿ, ನಾಗರತ್ನಮ್ಮ, ಪದ್ಮ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>