ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಪರ ಬುಧವಾರ ಪ್ರಚಾರ ಮಾಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್ ಮುಂಖಡ ಕೆಂಪನಹಳ್ಳಿ ಬೋರೆಗೌಡ, ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ತಪ್ಪಿಸಿಕೊಂಡ ಕಾರಣ ಚಾಕು ಹಣೆಗೆ ಹೊಕ್ಕಿ ತೀವ್ರಗಾಯವಾಗಿದೆ. ಎನ್ಡಿಎ ಪರ ಪ್ರಚಾರ ಮಾಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು ಎಂದು ಆರೋಪಿಸಿ ಅಂಚೇಪಾಳ್ಯ ಬಳಿ ಕೆಂಪನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ ದೂರು ನೀಡಿದ್ದಾರೆ.