ಸಂಘದ ನಿರ್ದೇಶಕ ಪಿ.ಡಿ. ಕೃಷ್ಣಪ್ಪ ಅವರು ಕಾರ್ಯನಿರ್ವಹಣೆಗೆ ಸಹಕಾರ ನೀಡುತ್ತಿಲ್ಲ. ಈಗಾಗಲೇ ಹೊಸ ಸಿಬ್ಬಂದಿ ನೇಮಕಕ್ಕೆ ತಯಾರಿ ನಡೆಸಿರುವ ರಂಗನಾಥ್ ಸಹಾಯಕ ಸಿಬ್ಬಂದಿ ಹುದ್ದೆಗೆ ಅವರ ಪತ್ನಿಯನ್ನೇ ನೇಮಿಸಲು ಹೋರಾಟ ಮಾಡುತ್ತಿದ್ದಾರೆ. ಇದನ್ನು ವಿರೋಧಿಸಿದ ನನಗೆ ಡೇರಿಯ ಹಣಕಾಸಿನ ವ್ಯವಹಾರದ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದರು.