<p><strong>ತುಮಕೂರು: </strong>ಮಹಾನಗರಪಾಲಿಕೆಗೆ ನಾಮನಿರ್ದೇಶನಗೊಂಡಿರುವ ಸದಸ್ಯರು ತಮ್ಮ ಇತಿಮಿತಿಯೊಳಗೆ ಸಾಧ್ಯವಾದಷ್ಟು ಮಟ್ಟಿಗೆ ಜನರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಸಲಹೆ ನೀಡಿದರು.</p>.<p>ನಗರದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟವು ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಗರದಲ್ಲಿ ಕಸವಿಲೇವಾರಿ, ರಾಜ ಕಾಲುವೆಗಳ ಒತ್ತುವರಿ ತೆರವು, ಈ ಹಿಂದೆ ನಡೆದಿರುವ ಖಾತೆಗಳ ಅಕ್ರಮ ಕುರಿತು ಮಾಹಿತಿ ಕಲೆ ಹಾಕಿ ಜನರ ಮುಂದಿಡುವ ಕೆಲಸವನ್ನು ನಾಮನಿರ್ದೇಶಿತ ಸದಸ್ಯರು ಅದ್ಯತೆ ಮೇರೆಗೆ ಕೈಗೆತ್ತಿಕೊಳ್ಳಬೇಕು ಎಂದರು.</p>.<p>ವಿರೋಧ ಪಕ್ಷಗಳ ಸದಸ್ಯರಿಗೆ ಟೀಕಿಸುವ ತಪ್ಪುಗಳನ್ನು ಎತ್ತಿ ಹಿಡಿಯುವ ಅಧಿಕಾರ ಇದೆ. ಆದರೆ ಸರಿಯಾದ ತಿಳಿವಳಿಕೆ ಇಲ್ಲದೆ ದಾಖಲೆ ರಹಿತ ಆರೋಪ ಮಾಡುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಕೇವಲ ತಪ್ಪು ಕಂಡುಹಿಡಿಯುವುದೇ ಮುಖ್ಯವಲ್ಲ. ಪರಿಹಾರವು ಅಗತ್ಯ ಎಂದು ಹೇಳಿದರು.</p>.<p>ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಳೆದ ಎರಡು ವರ್ಷಗಳಲ್ಲಿ ಅಭಿವೃದ್ಧಿ ಕೆಲಸಗಳು ಬರದಿಂದ ಸಾಗುತ್ತಿವೆ. ಸರ್ಕಾರಕ್ಕೆ ವಾಪಸ್ ಆಗಿದ್ದ ₹ 125 ಕೋಟಿ ಮತ್ತೆ ವಾಪಸ್ ಬಂದಿದೆ. ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇವುಗಳಲ್ಲಿ ಗುಣಮಟ್ಟ ಕಾಯ್ದುಕೊಂಡರೆ ಹತ್ತಾರು ವರ್ಷ ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್ ಮಾತನಾಡಿದರು. ಪಾಲಿಕೆ ಸದಸ್ಯೆ ಗಿರಿಜಾ, ಮಲ್ಲಿಕಾರ್ಜುನಯ್ಯ, ಸರೋಜಗೌಡ, ವಿನಯ್ ಜೈನ್, ಕೊಪ್ಪಳ ನಾಗರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಮಹಾನಗರಪಾಲಿಕೆಗೆ ನಾಮನಿರ್ದೇಶನಗೊಂಡಿರುವ ಸದಸ್ಯರು ತಮ್ಮ ಇತಿಮಿತಿಯೊಳಗೆ ಸಾಧ್ಯವಾದಷ್ಟು ಮಟ್ಟಿಗೆ ಜನರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಸಲಹೆ ನೀಡಿದರು.</p>.<p>ನಗರದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟವು ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಗರದಲ್ಲಿ ಕಸವಿಲೇವಾರಿ, ರಾಜ ಕಾಲುವೆಗಳ ಒತ್ತುವರಿ ತೆರವು, ಈ ಹಿಂದೆ ನಡೆದಿರುವ ಖಾತೆಗಳ ಅಕ್ರಮ ಕುರಿತು ಮಾಹಿತಿ ಕಲೆ ಹಾಕಿ ಜನರ ಮುಂದಿಡುವ ಕೆಲಸವನ್ನು ನಾಮನಿರ್ದೇಶಿತ ಸದಸ್ಯರು ಅದ್ಯತೆ ಮೇರೆಗೆ ಕೈಗೆತ್ತಿಕೊಳ್ಳಬೇಕು ಎಂದರು.</p>.<p>ವಿರೋಧ ಪಕ್ಷಗಳ ಸದಸ್ಯರಿಗೆ ಟೀಕಿಸುವ ತಪ್ಪುಗಳನ್ನು ಎತ್ತಿ ಹಿಡಿಯುವ ಅಧಿಕಾರ ಇದೆ. ಆದರೆ ಸರಿಯಾದ ತಿಳಿವಳಿಕೆ ಇಲ್ಲದೆ ದಾಖಲೆ ರಹಿತ ಆರೋಪ ಮಾಡುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಕೇವಲ ತಪ್ಪು ಕಂಡುಹಿಡಿಯುವುದೇ ಮುಖ್ಯವಲ್ಲ. ಪರಿಹಾರವು ಅಗತ್ಯ ಎಂದು ಹೇಳಿದರು.</p>.<p>ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಳೆದ ಎರಡು ವರ್ಷಗಳಲ್ಲಿ ಅಭಿವೃದ್ಧಿ ಕೆಲಸಗಳು ಬರದಿಂದ ಸಾಗುತ್ತಿವೆ. ಸರ್ಕಾರಕ್ಕೆ ವಾಪಸ್ ಆಗಿದ್ದ ₹ 125 ಕೋಟಿ ಮತ್ತೆ ವಾಪಸ್ ಬಂದಿದೆ. ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇವುಗಳಲ್ಲಿ ಗುಣಮಟ್ಟ ಕಾಯ್ದುಕೊಂಡರೆ ಹತ್ತಾರು ವರ್ಷ ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್ ಮಾತನಾಡಿದರು. ಪಾಲಿಕೆ ಸದಸ್ಯೆ ಗಿರಿಜಾ, ಮಲ್ಲಿಕಾರ್ಜುನಯ್ಯ, ಸರೋಜಗೌಡ, ವಿನಯ್ ಜೈನ್, ಕೊಪ್ಪಳ ನಾಗರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>