<p><strong>ಚಿಕ್ಕನಾಯಕನಹಳ್ಳಿ:</strong> ‘ಈ ಹಿಂದೆ ಶಾಸಕನಾಗಿದ್ದಾಗ ಮಂಜೂರು ಮಾಡಿದ್ದ ಅಂಬೇಡ್ಕರ್ ಭವನವನ್ನು ಈಗ ಶಾಸಕನಾಗಿ ನಾನೇ ಉದ್ಘಾಟಿಸಿ ಜನರ ಬಳಕೆಗೆ ನೀಡುತ್ತಿರುವುದು ಸಾರ್ಥಕತೆ ತಂದಿದೆ’ ಎಂದು ಶಾಸಕ ಸಿ.ಬಿ. ಸುರೇಶ್ ಬಾಬು ತಿಳಿಸಿದರು.</p>.<p>ತಾಲ್ಲೂಕಿನ ಹಂದನಕೆರೆ ಹೋಬಳಿಯಲ್ಲಿ ಶನಿವಾರ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸಲಾದ ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದರು.</p>.<p>ಹಿಂದಿನ ಅವಧಿಯಲ್ಲಿ ಈ ಭವನಕ್ಕಾಗಿ ₹50 ಲಕ್ಷ ಅನುದಾನ ಮೀಸಲಿಡಲಾಗಿತ್ತು. ಈಗ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಮತ್ತೆ ₹10 ಲಕ್ಷ ನೀಡಿ ಸುಸಜ್ಜಿತವಾಗಿ ಪೂರ್ಣಗೊಳಿಸಲಾಗಿದೆ. ಈ ಭವನ ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಮನೆ ಕಾರ್ಯಕ್ರಮಗಳಿಗೆ ಅತ್ಯಂತ ಸೂಕ್ತವಾಗಿದೆ ಎಂದರು.</p>.<p>ಹಂದನಕೆರೆ ಹೋಬಳಿಯಲ್ಲಿ ₹3 ಕೋಟಿಗೂ ಅಧಿಕ ಮೊತ್ತದ ವಿವಿಧ ಕಾಮಗಾರಿಗಳನ್ನು ಜನಾರ್ಪಣೆ ಮಾಡಲಾಗಿದೆ. ಇದರಲ್ಲಿ ಐದು ನೂತನ ಅಂಗನವಾಡಿ ಕಟ್ಟಡ, ಬಿಸಿಯೂಟದ ಕೊಠಡಿ ಹಾಗೂ ಕಾಲೇಜು ಕಟ್ಟಡಗಳು ಸೇರಿವೆ. ತಾಲ್ಲೂಕಿನಾದ್ಯಂತ ಶಿಕ್ಷಣಕ್ಕೆ ಪೂರಕವಾಗಿ ಗುಣಮಟ್ಟದ ಕಟ್ಟಡಗಳನ್ನು ನಿರ್ಮಿಸುವ ಗುರಿ ಇದೆ ಎಂದರು.</p>.<p>ಜಿಲ್ಲಾ ಪಂಚಾಯತ್ ಸದಸ್ಯ ರಾಮಚಂದ್ರಯ್ಯ, ತಹಶೀಲ್ದಾರ್ ಮಮತಾ, ಸಮಾಜ ಕಲ್ಯಾಣಾಧಿಕಾರಿ ಶ್ರೀಧರಮೂರ್ತಿ, ಕಚೇರಿ ವ್ಯವಸ್ಥಾಪಕ ಆರ್. ಕುಮಾರಸ್ವಾಮಿ, ಹಂದನಕೆರೆ ನಾಗರಾಜು, ತಿಮ್ಮಣ್ಣ, ನಿರ್ಮಿತಿ ಕೇಂದ್ರದ ನವೀನ್, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ:</strong> ‘ಈ ಹಿಂದೆ ಶಾಸಕನಾಗಿದ್ದಾಗ ಮಂಜೂರು ಮಾಡಿದ್ದ ಅಂಬೇಡ್ಕರ್ ಭವನವನ್ನು ಈಗ ಶಾಸಕನಾಗಿ ನಾನೇ ಉದ್ಘಾಟಿಸಿ ಜನರ ಬಳಕೆಗೆ ನೀಡುತ್ತಿರುವುದು ಸಾರ್ಥಕತೆ ತಂದಿದೆ’ ಎಂದು ಶಾಸಕ ಸಿ.ಬಿ. ಸುರೇಶ್ ಬಾಬು ತಿಳಿಸಿದರು.</p>.<p>ತಾಲ್ಲೂಕಿನ ಹಂದನಕೆರೆ ಹೋಬಳಿಯಲ್ಲಿ ಶನಿವಾರ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸಲಾದ ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದರು.</p>.<p>ಹಿಂದಿನ ಅವಧಿಯಲ್ಲಿ ಈ ಭವನಕ್ಕಾಗಿ ₹50 ಲಕ್ಷ ಅನುದಾನ ಮೀಸಲಿಡಲಾಗಿತ್ತು. ಈಗ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಮತ್ತೆ ₹10 ಲಕ್ಷ ನೀಡಿ ಸುಸಜ್ಜಿತವಾಗಿ ಪೂರ್ಣಗೊಳಿಸಲಾಗಿದೆ. ಈ ಭವನ ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಮನೆ ಕಾರ್ಯಕ್ರಮಗಳಿಗೆ ಅತ್ಯಂತ ಸೂಕ್ತವಾಗಿದೆ ಎಂದರು.</p>.<p>ಹಂದನಕೆರೆ ಹೋಬಳಿಯಲ್ಲಿ ₹3 ಕೋಟಿಗೂ ಅಧಿಕ ಮೊತ್ತದ ವಿವಿಧ ಕಾಮಗಾರಿಗಳನ್ನು ಜನಾರ್ಪಣೆ ಮಾಡಲಾಗಿದೆ. ಇದರಲ್ಲಿ ಐದು ನೂತನ ಅಂಗನವಾಡಿ ಕಟ್ಟಡ, ಬಿಸಿಯೂಟದ ಕೊಠಡಿ ಹಾಗೂ ಕಾಲೇಜು ಕಟ್ಟಡಗಳು ಸೇರಿವೆ. ತಾಲ್ಲೂಕಿನಾದ್ಯಂತ ಶಿಕ್ಷಣಕ್ಕೆ ಪೂರಕವಾಗಿ ಗುಣಮಟ್ಟದ ಕಟ್ಟಡಗಳನ್ನು ನಿರ್ಮಿಸುವ ಗುರಿ ಇದೆ ಎಂದರು.</p>.<p>ಜಿಲ್ಲಾ ಪಂಚಾಯತ್ ಸದಸ್ಯ ರಾಮಚಂದ್ರಯ್ಯ, ತಹಶೀಲ್ದಾರ್ ಮಮತಾ, ಸಮಾಜ ಕಲ್ಯಾಣಾಧಿಕಾರಿ ಶ್ರೀಧರಮೂರ್ತಿ, ಕಚೇರಿ ವ್ಯವಸ್ಥಾಪಕ ಆರ್. ಕುಮಾರಸ್ವಾಮಿ, ಹಂದನಕೆರೆ ನಾಗರಾಜು, ತಿಮ್ಮಣ್ಣ, ನಿರ್ಮಿತಿ ಕೇಂದ್ರದ ನವೀನ್, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>