<p>ತುಮಕೂರು: ಅಗಾಧವಾದ ಜ್ಞಾನ ಹೊಂದಿದ್ದ ಡಾ.ಬಿ.ಆರ್.ಅಂಬೇಡ್ಕರ್, ತಮ್ಮ ಜೀವಿತದ ಕೊನೆಯಅವಧಿಯವರೆಗೂ ಜ್ಞಾನದ ಹುಡುಕಾಟದಲ್ಲಿ ತೊಡಗಿದ್ದರು ಎಂದು ದಲಿತ ಛಲವಾದಿ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಪಿ.ಚಂದ್ರಪ್ಪ ಹೇಳಿದರು.</p>.<p>ದಲಿತ ಛಲವಾದಿ ಮಹಾಸಭಾದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಅಂಬೇಡ್ಕರ್ ಜೀವನ, ಬದುಕಿದ ರೀತಿ ಅನೇಕರಿಗೆ ಮಾದರಿ. ಇಂದಿನ ಯುವಕರು ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ವಕೀಲ ರಾಜಣ್ಣ, ‘ಭಾರತೀಯರಲ್ಲೇ ಡಾಕ್ಟರೇಟ್ ಪಡೆದ ಮೊದಲಿಗರು ಅಂಬೇಡ್ಕರ್. 64 ವಿಷಯಗಳಲ್ಲಿ ವಿಶೇಷ ಅಧ್ಯಯನ ನಡೆಸಿದ್ದರು. ದೇಶದ 9 ಭಾಷೆಗಳಲ್ಲಿ ಪಾಂಡಿತ್ಯ ಹೊಂದಿದ್ದರು. ಅವರ ಸಮ ಸಮಾಜದ ಕನಸನ್ನು ನಾವೆಲ್ಲರೂ ನನಸು ಮಾಡಬೇಕಾಗಿದೆ’ ಎಂದು ತಿಳಿಸಿದರು.</p>.<p>ಮಹಾಸಭಾ ಯುವ ವೇದಿಕೆಯ ಹರ್ಷಧರ ಮಾತನಾಡಿದರು. ಸಂಘಟನೆ ಮುಖಂಡರಾದ ಪುಟ್ಟಬೋರಯ್ಯ, ಶ್ರೀನಿವಾಸ್, ರಾಜಯ್ಯ, ಮಂಜುಳಾ, ನವೀನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಅಗಾಧವಾದ ಜ್ಞಾನ ಹೊಂದಿದ್ದ ಡಾ.ಬಿ.ಆರ್.ಅಂಬೇಡ್ಕರ್, ತಮ್ಮ ಜೀವಿತದ ಕೊನೆಯಅವಧಿಯವರೆಗೂ ಜ್ಞಾನದ ಹುಡುಕಾಟದಲ್ಲಿ ತೊಡಗಿದ್ದರು ಎಂದು ದಲಿತ ಛಲವಾದಿ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಪಿ.ಚಂದ್ರಪ್ಪ ಹೇಳಿದರು.</p>.<p>ದಲಿತ ಛಲವಾದಿ ಮಹಾಸಭಾದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಅಂಬೇಡ್ಕರ್ ಜೀವನ, ಬದುಕಿದ ರೀತಿ ಅನೇಕರಿಗೆ ಮಾದರಿ. ಇಂದಿನ ಯುವಕರು ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ವಕೀಲ ರಾಜಣ್ಣ, ‘ಭಾರತೀಯರಲ್ಲೇ ಡಾಕ್ಟರೇಟ್ ಪಡೆದ ಮೊದಲಿಗರು ಅಂಬೇಡ್ಕರ್. 64 ವಿಷಯಗಳಲ್ಲಿ ವಿಶೇಷ ಅಧ್ಯಯನ ನಡೆಸಿದ್ದರು. ದೇಶದ 9 ಭಾಷೆಗಳಲ್ಲಿ ಪಾಂಡಿತ್ಯ ಹೊಂದಿದ್ದರು. ಅವರ ಸಮ ಸಮಾಜದ ಕನಸನ್ನು ನಾವೆಲ್ಲರೂ ನನಸು ಮಾಡಬೇಕಾಗಿದೆ’ ಎಂದು ತಿಳಿಸಿದರು.</p>.<p>ಮಹಾಸಭಾ ಯುವ ವೇದಿಕೆಯ ಹರ್ಷಧರ ಮಾತನಾಡಿದರು. ಸಂಘಟನೆ ಮುಖಂಡರಾದ ಪುಟ್ಟಬೋರಯ್ಯ, ಶ್ರೀನಿವಾಸ್, ರಾಜಯ್ಯ, ಮಂಜುಳಾ, ನವೀನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>