<p><strong>ತುಮಕೂರು:</strong> ದೇಶದಲ್ಲಿರುವ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ಕಾಣುತ್ತಿರುವುದು ಸರಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p>ನಗರದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ನಿರ್ಮಿಸಲಾಗುತ್ತಿದೆ. ಇದು ಬದಲಾಗಬೇಕು. ಎಲ್ಲ ವಿದ್ಯಾರ್ಥಿಗಳಿಗೆ ಸಾಮಾನ್ಯ ಹಾಸ್ಟೆಲ್ಗಳನ್ನು ಕಲ್ಪಿಸಬೇಕು. ಎಲ್ಲರು ಒಟ್ಟಿಗೆ ಬಾಳುವಂತ ವ್ಯವಸ್ಥೆ ಮಾಡಬೇಕು. ಇದರಿಂದ ಜಾತಿ ಪದ್ಧತಿ ಹೋಗಲಾಡಿಸಬಹುದು ಎಂದು ಅಭಿಪ್ರಾಯಪಟ್ಟರು.</p>.<p>ಸಂವಿಧಾನ ರಚಿಸಿದಾಗ ಸಾಕಷ್ಟು ಟೀಕೆ ಮಾಡಿದರು. ಸಂವಿಧಾನವನ್ನು ನಕಲು ಮಾಡಲಾಗಿದೆ ಎಂದು ಆರೋಪಿಸಿದರು. ಸಂವಿಧಾನದಲ್ಲಿ ಯಾವ ಅಂಶಗಳನ್ನು, ಯಾವ ದೇಶದ ಸಂವಿಧಾನದಿಂದ, ಯಾವ ಕಾರಣಕ್ಕಾಗಿ ಅಳವಡಿಸಿಕೊಳ್ಳಲಾಗಿದೆ ಎಂಬುದನ್ನೂ ಸ್ಪಷ್ಟಪಡಿಸಿದ್ದಾರೆ. ಆದರೂ ಸಂವಿಧಾನವನ್ನು ಟೀಕಿಸಲಾಗುತ್ತಿದೆ ಎಂದು ಬೇಸರದ ಮಾತುಗಳನ್ನಾಡಿದರು.</p>.<p>ಸಂವಿಧಾನ ಪೀಠಿಕೆಯ ಅಂಶಗಳನ್ನು ಎಷ್ಟರ ಮಟ್ಟಿಗೆ ಅನುಷ್ಠಾನಗೊಳಿಸಿದ್ದೇವೆ ಎಂದು ನಮ್ಮನ್ನು ನಾವೇ ಪ್ರಶ್ನಿಸಿಕೊಳ್ಳಬೇಕಿದೆ. ಸಮಾನತೆ, ಭ್ರಾತೃತ್ವದ ಬದುಕು ಸಾಧ್ಯವಾಗಿಲ್ಲ. ಇದರ ನಡುವೆಯೂ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಯುವ ಜನತೆ ಇದನ್ನು ಅರಿತುಕೊಳ್ಳಬೇಕು ಎಂದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಚಂದ್ರಶೇಖರ್ಗೌಡ, ಮುಖಂಡರಾದ ಇಕ್ಬಾಲ್ ಅಹ್ಮದ್, ಕೆಂಚಮಾರಯ್ಯ, ರಫೀಕ್ ಅಹ್ಮದ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ದೇಶದಲ್ಲಿರುವ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ಕಾಣುತ್ತಿರುವುದು ಸರಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p>ನಗರದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ನಿರ್ಮಿಸಲಾಗುತ್ತಿದೆ. ಇದು ಬದಲಾಗಬೇಕು. ಎಲ್ಲ ವಿದ್ಯಾರ್ಥಿಗಳಿಗೆ ಸಾಮಾನ್ಯ ಹಾಸ್ಟೆಲ್ಗಳನ್ನು ಕಲ್ಪಿಸಬೇಕು. ಎಲ್ಲರು ಒಟ್ಟಿಗೆ ಬಾಳುವಂತ ವ್ಯವಸ್ಥೆ ಮಾಡಬೇಕು. ಇದರಿಂದ ಜಾತಿ ಪದ್ಧತಿ ಹೋಗಲಾಡಿಸಬಹುದು ಎಂದು ಅಭಿಪ್ರಾಯಪಟ್ಟರು.</p>.<p>ಸಂವಿಧಾನ ರಚಿಸಿದಾಗ ಸಾಕಷ್ಟು ಟೀಕೆ ಮಾಡಿದರು. ಸಂವಿಧಾನವನ್ನು ನಕಲು ಮಾಡಲಾಗಿದೆ ಎಂದು ಆರೋಪಿಸಿದರು. ಸಂವಿಧಾನದಲ್ಲಿ ಯಾವ ಅಂಶಗಳನ್ನು, ಯಾವ ದೇಶದ ಸಂವಿಧಾನದಿಂದ, ಯಾವ ಕಾರಣಕ್ಕಾಗಿ ಅಳವಡಿಸಿಕೊಳ್ಳಲಾಗಿದೆ ಎಂಬುದನ್ನೂ ಸ್ಪಷ್ಟಪಡಿಸಿದ್ದಾರೆ. ಆದರೂ ಸಂವಿಧಾನವನ್ನು ಟೀಕಿಸಲಾಗುತ್ತಿದೆ ಎಂದು ಬೇಸರದ ಮಾತುಗಳನ್ನಾಡಿದರು.</p>.<p>ಸಂವಿಧಾನ ಪೀಠಿಕೆಯ ಅಂಶಗಳನ್ನು ಎಷ್ಟರ ಮಟ್ಟಿಗೆ ಅನುಷ್ಠಾನಗೊಳಿಸಿದ್ದೇವೆ ಎಂದು ನಮ್ಮನ್ನು ನಾವೇ ಪ್ರಶ್ನಿಸಿಕೊಳ್ಳಬೇಕಿದೆ. ಸಮಾನತೆ, ಭ್ರಾತೃತ್ವದ ಬದುಕು ಸಾಧ್ಯವಾಗಿಲ್ಲ. ಇದರ ನಡುವೆಯೂ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಯುವ ಜನತೆ ಇದನ್ನು ಅರಿತುಕೊಳ್ಳಬೇಕು ಎಂದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಚಂದ್ರಶೇಖರ್ಗೌಡ, ಮುಖಂಡರಾದ ಇಕ್ಬಾಲ್ ಅಹ್ಮದ್, ಕೆಂಚಮಾರಯ್ಯ, ರಫೀಕ್ ಅಹ್ಮದ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>