<p><strong>ತುಮಕೂರು:</strong> ಡಾ.ಬಿ.ಆರ್.ಅಂಬೇಡ್ಕರ್ ರಚನೆಯ ಸಂವಿಧಾನ ಎಲ್ಲರು ಸಮಾನವಾಗಿ, ಸ್ವಾಭಿಮಾನದಿಂದ ಬದುಕಲು ಅವಕಾಶ ಕಲ್ಪಿಸಿದೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು ಹೇಳಿದರು.</p>.<p>ನಗರದ ಜೆಡಿಎಸ್ ಕಚೇರಿಯಲ್ಲಿ ಸೋಮವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಯೊಬ್ಬರು ಸಂವಿಧಾನ ಓದಿ ತಿಳಿದುಕೊಳ್ಳಬೇಕು. ಅದರ ಆಶಯ ಪಾಲಿಸಬೇಕು ಎಂದು ಸಲಹೆ ಮಾಡಿದರು.</p>.<p>ಜೆಡಿಎಸ್ ಎಸ್.ಸಿ.ಘಟಕದ ಜಿಲ್ಲಾ ಅಧ್ಯಕ್ಷ ಎ.ಎಸ್.ಡಿ.ಕೃಷ್ಣಪ್ಪ, ‘ಅಂಬೇಡ್ಕರ್, ಜಗಜೀವನರಾಂ ಉದಯಿಸದಿದ್ದರೆ, ಈ ದೇಶದ ಶೋಷಿತರ ಬದುಕು ಮತ್ತಷ್ಟು ಹೀನಾಯವಾಗುತ್ತಿತ್ತು. ಅಂಬೇಡ್ಕರ್ ಸಂವಿಧಾನ ರಚಿಸಿದರೆ, ಜಗಜೀವನರಾಂ ಅವರು ತಮ್ಮ ಅಧಿಕಾರಾವಧಿಯಲ್ಲಿ ಸಂವಿಧಾನದ ಆಶಯ ಅನುಷ್ಠಾನಗೊಳಿಸಲು ಪ್ರಯತ್ನಿಸಿದರು. ದೇಶದ ಸಾಮಾಜಿಕ ಬದಲಾವಣೆಗೆ ಇಬ್ಬರ ಕೊಡುಗೆ ಅಪಾರ’ ಎಂದರು.</p>.<p>ಮುಖಂಡರಾದ ಸೋಲಾರ್ ಕೃಷ್ಣಮೂರ್ತಿ, ಯೋಗಾನಂದಕುಮಾರ್, ತಾಹೇರಾ ಕುಲ್ಸಂ, ಮುನಿರಾಜು, ಗೋವಿಂದರಾಜು, ಭೈರೇಶ್, ಕೆಂಪರಾಜು, ಮುದಿಮಡು ರಂಗಶಾಮಯ್ಯ, ಧರಣೇಂದ್ರಕುಮಾರ್, ಲಕ್ಷ್ಮಿನರಸಿಂಹರಾಜು, ಕುಸುಮಾ ಜಗನ್ನಾಥ್, ಪುನಿತ್ಗೌಡ, ದೊಡ್ಡೇರಿ ಬಸವರಾಜು, ವಿಶ್ವೇಶ್ವರಯ್ಯ, ಲೀಲಾವತಿ, ಮಧು, ಜಯಲಕ್ಷ್ಮಮ್ಮ, ನಾಗರಾಜು, ಹನುಮಂತರಾಜು ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಡಾ.ಬಿ.ಆರ್.ಅಂಬೇಡ್ಕರ್ ರಚನೆಯ ಸಂವಿಧಾನ ಎಲ್ಲರು ಸಮಾನವಾಗಿ, ಸ್ವಾಭಿಮಾನದಿಂದ ಬದುಕಲು ಅವಕಾಶ ಕಲ್ಪಿಸಿದೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು ಹೇಳಿದರು.</p>.<p>ನಗರದ ಜೆಡಿಎಸ್ ಕಚೇರಿಯಲ್ಲಿ ಸೋಮವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಯೊಬ್ಬರು ಸಂವಿಧಾನ ಓದಿ ತಿಳಿದುಕೊಳ್ಳಬೇಕು. ಅದರ ಆಶಯ ಪಾಲಿಸಬೇಕು ಎಂದು ಸಲಹೆ ಮಾಡಿದರು.</p>.<p>ಜೆಡಿಎಸ್ ಎಸ್.ಸಿ.ಘಟಕದ ಜಿಲ್ಲಾ ಅಧ್ಯಕ್ಷ ಎ.ಎಸ್.ಡಿ.ಕೃಷ್ಣಪ್ಪ, ‘ಅಂಬೇಡ್ಕರ್, ಜಗಜೀವನರಾಂ ಉದಯಿಸದಿದ್ದರೆ, ಈ ದೇಶದ ಶೋಷಿತರ ಬದುಕು ಮತ್ತಷ್ಟು ಹೀನಾಯವಾಗುತ್ತಿತ್ತು. ಅಂಬೇಡ್ಕರ್ ಸಂವಿಧಾನ ರಚಿಸಿದರೆ, ಜಗಜೀವನರಾಂ ಅವರು ತಮ್ಮ ಅಧಿಕಾರಾವಧಿಯಲ್ಲಿ ಸಂವಿಧಾನದ ಆಶಯ ಅನುಷ್ಠಾನಗೊಳಿಸಲು ಪ್ರಯತ್ನಿಸಿದರು. ದೇಶದ ಸಾಮಾಜಿಕ ಬದಲಾವಣೆಗೆ ಇಬ್ಬರ ಕೊಡುಗೆ ಅಪಾರ’ ಎಂದರು.</p>.<p>ಮುಖಂಡರಾದ ಸೋಲಾರ್ ಕೃಷ್ಣಮೂರ್ತಿ, ಯೋಗಾನಂದಕುಮಾರ್, ತಾಹೇರಾ ಕುಲ್ಸಂ, ಮುನಿರಾಜು, ಗೋವಿಂದರಾಜು, ಭೈರೇಶ್, ಕೆಂಪರಾಜು, ಮುದಿಮಡು ರಂಗಶಾಮಯ್ಯ, ಧರಣೇಂದ್ರಕುಮಾರ್, ಲಕ್ಷ್ಮಿನರಸಿಂಹರಾಜು, ಕುಸುಮಾ ಜಗನ್ನಾಥ್, ಪುನಿತ್ಗೌಡ, ದೊಡ್ಡೇರಿ ಬಸವರಾಜು, ವಿಶ್ವೇಶ್ವರಯ್ಯ, ಲೀಲಾವತಿ, ಮಧು, ಜಯಲಕ್ಷ್ಮಮ್ಮ, ನಾಗರಾಜು, ಹನುಮಂತರಾಜು ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>