ದಲಿತ ಮುಖಂಡ ತೆರಿಯೂರು ಜಿ. ನರಸಿಂಹಯ್ಯ ಮಾತನಾಡಿ, ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ವಿವಿಧ ದಲಿತ ಸಂಘಟನೆಗಳಿಂದ ಕಳೆದ 20 ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದರೂ ಪುತ್ಥಳಿ ನಿರ್ಮಾಣದ ಭಾಗ್ಯ ಕೂಡಿ ಬಂದಿರಲಿಲ್ಲ. ಇಂದು ಅಂತಹ ಭಾಗ್ಯ ಒದಗಿ ಬರುತ್ತಿರುವುದು ಸಂತೋಷದ ವಿಚಾರ. ಹಾಗಾಗಿ, ನಾವೆಲ್ಲ ವೈಯುಕ್ತಿಕ ಪ್ರತಿಷ್ಠೆ ಬಿಟ್ಟು ಪುತ್ಥಳಿ ಸ್ಥಾಪನೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.