ಕಳೆದ ಎರಡು ವರ್ಷದಿಂದ ಪ್ರತಿಮೆ ಅನಾವರಣ ಯಾವಾಗ ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿತ್ತು. ಈ ಬಗ್ಗೆ ‘ಪ್ರಜಾವಾಣಿ’ ಮಾರ್ಚ್ 26ರಂದು ‘ಅಂಬೇಡ್ಕರ್ ಪ್ರತಿಮೆ ಅನಾವರಣ ಯಾವಾಗ?’ ಎನ್ನುವ ಲೇಖನ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅಧಿಕಾರಿಗಳು ಅಂಬೇಡ್ಕರ್ ಜಯಂತಿಗೆ ಪ್ರತಿಮೆ ಅನಾವರಣಗೊಳಿಸಲು ಸಿದ್ಧತೆ ನಡೆಸಿದ್ದಾರೆ.