<p><strong>ಶಿರಾ</strong>: ನಗರದ ಪ್ರವಾಸಿ ಮಂದಿರದ ಬಳಿ ಇರುವ ಉದ್ಯಾನದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯ ಅನಾವರಣವನ್ನು ಏ. 14ರಂದು ಹಮ್ಮಿಕೊಂಡಿದ್ದು ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.</p>.<p>ಕಳೆದ ಎರಡು ವರ್ಷದಿಂದ ಪ್ರತಿಮೆ ಅನಾವರಣ ಯಾವಾಗ ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿತ್ತು. ಈ ಬಗ್ಗೆ ‘ಪ್ರಜಾವಾಣಿ’ ಮಾರ್ಚ್ 26ರಂದು ‘ಅಂಬೇಡ್ಕರ್ ಪ್ರತಿಮೆ ಅನಾವರಣ ಯಾವಾಗ?’ ಎನ್ನುವ ಲೇಖನ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅಧಿಕಾರಿಗಳು ಅಂಬೇಡ್ಕರ್ ಜಯಂತಿಗೆ ಪ್ರತಿಮೆ ಅನಾವರಣಗೊಳಿಸಲು ಸಿದ್ಧತೆ ನಡೆಸಿದ್ದಾರೆ.</p>.<p>ಉದ್ಯಾನದಲ್ಲಿ ಈ ಹಿಂದೆ ಇದ್ದ ಅಂಬೇಡ್ಕರ್ ಪ್ರತಿಮೆ ಅವರನ್ನು ಹೋಲುತ್ತಿಲ್ಲ. ಪ್ರತಿಮೆ ಎತ್ತರವಾಗಿಲ್ಲ. ಅದನ್ನು ಬದಲಾಯಿಸುವಂತೆ ದಲಿತಪರ ಸಂಘಟನೆಗಳು ನಡೆಸಿದ ಹೋರಾಟಕ್ಕೆ ಮಣಿದ ನಗರಸಭೆ ಆಡಳಿತ ಕೊನೆಗೂ ಪ್ರತಿಮೆ ಬದಲಾಯಿಸಲು ಮುಂದಾಯಿತು. ಈ ಹಿನ್ನೆಲೆಯಲ್ಲಿ ಹಳೆಯ ಪ್ರತಿಮೆಯನ್ನು ಬದಲಿಸಿ ಹೊಸ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲಾಯಿತು.</p>.<p>ಹೊಸ ಪ್ರತಿಮೆ ಸ್ಥಾಪನೆ ಮಾಡಿ ಎರಡು ವರ್ಷ ಕಳೆದರೂ ಪ್ರತಿಮೆಯ ಅನಾವರಣಕ್ಕೆ ಮುಹೂರ್ತ ಇದುವರೆಗೂ ಕೂಡಿ ಬಂದಿರಲಿಲ್ಲ. ಈಗಲಾ ದರೂ ಅನಾವರಣ ಮಾಡುತ್ತಿ ರುವುದು ಸಂತಸದ ವಿಷಯವಾಗಿದೆ. </p>.<p>ಅಂಬೇಡ್ಕರ್ ಪ್ರತಿಮೆ ಅನಾವರಣದ ಜೊತೆಗೆ ಪ್ರವಾಸಿ ಮಂದಿರದ ವೃತ್ತಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡುತ್ತಿರುವುದು ದಲಿತಪರ ಸಂಘಟನೆಗಳು ಬಹುದಿನದ ಹೋರಾಟಕ್ಕೆ ಜಯ ದೊರೆತಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ನಗರದ ಪ್ರವಾಸಿ ಮಂದಿರದ ಬಳಿ ಇರುವ ಉದ್ಯಾನದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯ ಅನಾವರಣವನ್ನು ಏ. 14ರಂದು ಹಮ್ಮಿಕೊಂಡಿದ್ದು ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.</p>.<p>ಕಳೆದ ಎರಡು ವರ್ಷದಿಂದ ಪ್ರತಿಮೆ ಅನಾವರಣ ಯಾವಾಗ ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿತ್ತು. ಈ ಬಗ್ಗೆ ‘ಪ್ರಜಾವಾಣಿ’ ಮಾರ್ಚ್ 26ರಂದು ‘ಅಂಬೇಡ್ಕರ್ ಪ್ರತಿಮೆ ಅನಾವರಣ ಯಾವಾಗ?’ ಎನ್ನುವ ಲೇಖನ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅಧಿಕಾರಿಗಳು ಅಂಬೇಡ್ಕರ್ ಜಯಂತಿಗೆ ಪ್ರತಿಮೆ ಅನಾವರಣಗೊಳಿಸಲು ಸಿದ್ಧತೆ ನಡೆಸಿದ್ದಾರೆ.</p>.<p>ಉದ್ಯಾನದಲ್ಲಿ ಈ ಹಿಂದೆ ಇದ್ದ ಅಂಬೇಡ್ಕರ್ ಪ್ರತಿಮೆ ಅವರನ್ನು ಹೋಲುತ್ತಿಲ್ಲ. ಪ್ರತಿಮೆ ಎತ್ತರವಾಗಿಲ್ಲ. ಅದನ್ನು ಬದಲಾಯಿಸುವಂತೆ ದಲಿತಪರ ಸಂಘಟನೆಗಳು ನಡೆಸಿದ ಹೋರಾಟಕ್ಕೆ ಮಣಿದ ನಗರಸಭೆ ಆಡಳಿತ ಕೊನೆಗೂ ಪ್ರತಿಮೆ ಬದಲಾಯಿಸಲು ಮುಂದಾಯಿತು. ಈ ಹಿನ್ನೆಲೆಯಲ್ಲಿ ಹಳೆಯ ಪ್ರತಿಮೆಯನ್ನು ಬದಲಿಸಿ ಹೊಸ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲಾಯಿತು.</p>.<p>ಹೊಸ ಪ್ರತಿಮೆ ಸ್ಥಾಪನೆ ಮಾಡಿ ಎರಡು ವರ್ಷ ಕಳೆದರೂ ಪ್ರತಿಮೆಯ ಅನಾವರಣಕ್ಕೆ ಮುಹೂರ್ತ ಇದುವರೆಗೂ ಕೂಡಿ ಬಂದಿರಲಿಲ್ಲ. ಈಗಲಾ ದರೂ ಅನಾವರಣ ಮಾಡುತ್ತಿ ರುವುದು ಸಂತಸದ ವಿಷಯವಾಗಿದೆ. </p>.<p>ಅಂಬೇಡ್ಕರ್ ಪ್ರತಿಮೆ ಅನಾವರಣದ ಜೊತೆಗೆ ಪ್ರವಾಸಿ ಮಂದಿರದ ವೃತ್ತಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡುತ್ತಿರುವುದು ದಲಿತಪರ ಸಂಘಟನೆಗಳು ಬಹುದಿನದ ಹೋರಾಟಕ್ಕೆ ಜಯ ದೊರೆತಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>