<p><strong>ತುರುವೇಕೆರೆ:</strong> ಡಾ.ಬಿ.ಆರ್.ಅಂಬೇಡ್ಕರ್ ಮಹಾನ್ ಪತ್ರಕರ್ತರಾಗಿದ್ದು, ಪತ್ರಿಕೋದ್ಯಮದ ತತ್ವಗಳನ್ನು ಎತ್ತಿ ಹಿಡಿದಿದ್ದರು ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಅಧ್ಯಕ್ಷ<br />ಪ್ರೊ.ಪುಟ್ಟರಂಗಪ್ಪ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕು ನಾಗರಿಕ ವೇದಿಕೆ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಾ.ಅಮ್ಮಸಂದ್ರ ಸುರೇಶ್ ಅವರ ‘ಧೀಮಂತ ಪತ್ರಕರ್ತ ಡಾ.ಬಿ.ಆರ್.ಅಂಬೇಡ್ಕರ್’ ಹಾಗೂ ‘ಅಭಿವೃದ್ಧಿಗಾಗಿ ಸಂವಹನ’ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಅಂಬೇಡ್ಕರ್ ಚಿಂತನೆಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.</p>.<p>ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಬಿ.ಟಿ.ಮುದ್ದೇಶ್, ‘ಎರಡೂ ಪುಸ್ತಕಗಳು ಮೌಲ್ಯಯುತವಾಗಿದ್ದು, ಸಂಶೋಧಕರು, ವಿದ್ಯಾರ್ಥಿಗಳು, ಓದುಗರಿಗೆ ಅತ್ಯಂತ ಉಪಯುಕ್ತವಾಗಿವೆ’ ಎಂದು ತಿಳಿಸಿದರು.</p>.<p>ಅಂಬೇಡ್ಕರ್ ಪತ್ರಿಕಾ ರಂಗಕ್ಕೆ ನೀಡಿದ ಕೊಡುಗೆಗಳನ್ನು ಪುಸ್ತಕದಲ್ಲಿ ಲೇಖಕರು ಸಂಶೋಧನೆಯ ಮೂಲಕ ದಾಖಲು ಮಾಡಿದ್ದಾರೆ ಎಂದು ಹೇಳಿದರು. ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತವಾಗಿ ತರಬೇತಿ ನೀಡಲಾಗುವುದು ಎಂದರು.</p>.<p>ನಾಗರಿಕ ವೇದಿಕೆ ಅಧ್ಯಕ್ಷ ಧನಪಾಲ್ ಅಧ್ಯಕ್ಷತೆ ವಹಿಸಿದ್ದರು. ಲೇಖಕ ತುರುವೇಕೆರೆ ಪ್ರಸಾದ್ ಆಶಯ ನುಡಿಗಳನ್ನಾಡಿದರು. ಕೃತಿಗಳ ಲೇಖಕರಾದ ಡಾ.ಅಮ್ಮಸಂದ್ರ ಸುರೇಶ್, ಕಿರುತೆರೆ ನಟ ಸುರೇಶ್,<br />ಮುಖಂಡರಾದ ವೆಂಕಟರಾಮು, ಕುಂದೂರು ತಿಮ್ಮಯ್ಯ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಂ.ರಾಜು ಇತರರು<br />ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ಡಾ.ಬಿ.ಆರ್.ಅಂಬೇಡ್ಕರ್ ಮಹಾನ್ ಪತ್ರಕರ್ತರಾಗಿದ್ದು, ಪತ್ರಿಕೋದ್ಯಮದ ತತ್ವಗಳನ್ನು ಎತ್ತಿ ಹಿಡಿದಿದ್ದರು ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಅಧ್ಯಕ್ಷ<br />ಪ್ರೊ.ಪುಟ್ಟರಂಗಪ್ಪ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕು ನಾಗರಿಕ ವೇದಿಕೆ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಾ.ಅಮ್ಮಸಂದ್ರ ಸುರೇಶ್ ಅವರ ‘ಧೀಮಂತ ಪತ್ರಕರ್ತ ಡಾ.ಬಿ.ಆರ್.ಅಂಬೇಡ್ಕರ್’ ಹಾಗೂ ‘ಅಭಿವೃದ್ಧಿಗಾಗಿ ಸಂವಹನ’ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಅಂಬೇಡ್ಕರ್ ಚಿಂತನೆಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.</p>.<p>ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಬಿ.ಟಿ.ಮುದ್ದೇಶ್, ‘ಎರಡೂ ಪುಸ್ತಕಗಳು ಮೌಲ್ಯಯುತವಾಗಿದ್ದು, ಸಂಶೋಧಕರು, ವಿದ್ಯಾರ್ಥಿಗಳು, ಓದುಗರಿಗೆ ಅತ್ಯಂತ ಉಪಯುಕ್ತವಾಗಿವೆ’ ಎಂದು ತಿಳಿಸಿದರು.</p>.<p>ಅಂಬೇಡ್ಕರ್ ಪತ್ರಿಕಾ ರಂಗಕ್ಕೆ ನೀಡಿದ ಕೊಡುಗೆಗಳನ್ನು ಪುಸ್ತಕದಲ್ಲಿ ಲೇಖಕರು ಸಂಶೋಧನೆಯ ಮೂಲಕ ದಾಖಲು ಮಾಡಿದ್ದಾರೆ ಎಂದು ಹೇಳಿದರು. ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತವಾಗಿ ತರಬೇತಿ ನೀಡಲಾಗುವುದು ಎಂದರು.</p>.<p>ನಾಗರಿಕ ವೇದಿಕೆ ಅಧ್ಯಕ್ಷ ಧನಪಾಲ್ ಅಧ್ಯಕ್ಷತೆ ವಹಿಸಿದ್ದರು. ಲೇಖಕ ತುರುವೇಕೆರೆ ಪ್ರಸಾದ್ ಆಶಯ ನುಡಿಗಳನ್ನಾಡಿದರು. ಕೃತಿಗಳ ಲೇಖಕರಾದ ಡಾ.ಅಮ್ಮಸಂದ್ರ ಸುರೇಶ್, ಕಿರುತೆರೆ ನಟ ಸುರೇಶ್,<br />ಮುಖಂಡರಾದ ವೆಂಕಟರಾಮು, ಕುಂದೂರು ತಿಮ್ಮಯ್ಯ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಂ.ರಾಜು ಇತರರು<br />ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>