ಸಮುದಾಯ ಸಂಘಟನೆಯ ಜಿಲ್ಲಾ ಸಂಚಾಲಕ ಕೆ.ಈ.ಸಿದ್ದಯ್ಯ ಮಾತನಾಡಿ, ‘ಅಂಬೇಡ್ಕರ್ ಕೇವಲ ದಲಿತರಿಗೆ ಮೀಸಲಾತಿ ಕಲ್ಪಿಸಿದ್ದಾರೆ, ಉಳಿದವರಿಗೆ ನೀಡಿಲ್ಲ ಎಂಬುದು ತಪ್ಪು ಗ್ರಹಿಕೆ. ಸಂವಿಧಾನದಲ್ಲಿ ಹಿಂದುಳಿದ, ಮೇಲ್ಜಾತಿ ಮತ್ತು ಸಾಮಾನ್ಯ ವರ್ಗದವರಿಗೂ ಸಮಾನವಾಗಿ ಮೀಸಲಾತಿ ಕಲ್ಪಿಸಲಾಗಿದ್ದು ಎಲ್ಲರೂ ಲಾಭ ಪಡೆಯುತ್ತಿದ್ದಾರೆ. ಇದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ’ ಎಂದು ಮನವಿ ಮಾಡಿದರು.