ರೂಪಾಶ್ರೀ ನಗರದ ಮೆಳೆಕೋಟೆಯ ರಾಜೀವ್ಗಾಂಧಿ ನಗರದ ನಿವಾಸಿ. ಚೋಳಾಪುರದ ಗಂಗರಾಜು (60) ಎಂಬುವರನ್ನು ಹೆಬ್ಬೂರು ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಅಪಘಾತ ಸಂಭವಿಸಿದೆ. ಹೆಬ್ಬೂರು–ತುಮಕೂರು ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಟ್ರ್ಯಾಕ್ಟರ್ಗೆ ಆಂಬುಲೆನ್ಸ್ ಡಿಕ್ಕಿಯಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರೂಪಾಶ್ರೀ ಬೆಂಗಳೂರಿಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.