ಬಿಜೆಪಿ ಪ್ರಕೋಷ್ಠ ರಾಜ್ಯ ಸಂಯೋಜಕ ಎಸ್.ದತ್ತಾತ್ರೇಯ, ‘ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ಇದೆ. ಸಮಾಜದಲ್ಲಿ ಹೆಣ್ಣು ಮಕ್ಕಳನ್ನು ಗೌರವಯುತವಾಗಿ ನಡೆಸಿಕೊಂಡು ಬರಲಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಮಹಿಳೆಯರಿಗೆ ಸೂಕ್ತ ಗೌರವ, ರಕ್ಷಣೆ ಸಿಗುತ್ತಿಲ್ಲ. ಇದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಹತ್ಯೆ ತಾಜಾ ಉದಾಹರಣೆ. ಇದು ಅತ್ಯಂತ ಅಮಾನವೀಯ ಘಟನೆಯಾಗಿದೆ. ರಾಜ್ಯದಲ್ಲಿ ಮಹಿಳಾ ವಿರೋಧಿ ಸರ್ಕಾರ ಇದೆ’ ಎಂದು ಟೀಕಿಸಿದರು.