ದೇವೇಗೌಡರು ಮಾತನಾಡುತ್ತಿದ್ದಾಗ, ಅಮ್ಮಾಜಮ್ಮ ಅವರು ಪಕ್ಕದಲ್ಲಿಯೇ ನಿಂತಿದ್ದರು. ಬೆಳಿಗ್ಗೆಯಿಂದಲೂ ನಡೆದ ರೋಡ್ ಶೋ, ಪ್ರಚಾರ ಸಭೆಗಳಲ್ಲಿ ಅವರು ನಿಂತುಕೊಂಡಿದ್ದರು. ಇದರಿಂದ ಬಳಲಿದ್ದರು.
ತಕ್ಷಣ ಅವರನ್ನು ಶಾಸಕ ಡಾ. ಶ್ರೀನಿವಾಸಮೂರ್ತಿ ಆರೋಗ್ಯ ತಪಾಸಣೆ ನಡೆಸಿದರು. ನಂತರ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಮ್ಮಾಜಮ್ಮ ಅವರ ಪುತ್ರ ಸತ್ಯಪ್ರಕಾಶ್ ಈ ವೇಳೆ ಕಣ್ಣೀರಿಟ್ಟರು.