<p><strong>ತುಮಕೂರು:</strong> ಶಿರಾ ನಗರದ ಬರಗೂರು ರಾಮಚಂದ್ರಪ್ಪ ಬಯಲು ರಂಗಮಂದಿರಲ್ಲಿ ಭಾನುವಾರ ನಡೆದ ಜೆಡಿಎಸ್ ಬಹಿರಂಗ ಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಕುಸಿದು ಬಿದ್ದರು.</p>.<p>ದೇವೇಗೌಡರು ಮಾತನಾಡುತ್ತಿದ್ದಾಗ, ಅಮ್ಮಾಜಮ್ಮ ಅವರು ಪಕ್ಕದಲ್ಲಿಯೇ ನಿಂತಿದ್ದರು. ಬೆಳಿಗ್ಗೆಯಿಂದಲೂ ನಡೆದ ರೋಡ್ ಶೋ, ಪ್ರಚಾರ ಸಭೆಗಳಲ್ಲಿ ಅವರು ನಿಂತುಕೊಂಡಿದ್ದರು. ಇದರಿಂದ ಬಳಲಿದ್ದರು.<br />ತಕ್ಷಣ ಅವರನ್ನು ಶಾಸಕ ಡಾ. ಶ್ರೀನಿವಾಸಮೂರ್ತಿ ಆರೋಗ್ಯ ತಪಾಸಣೆ ನಡೆಸಿದರು. ನಂತರ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಮ್ಮಾಜಮ್ಮ ಅವರ ಪುತ್ರ ಸತ್ಯಪ್ರಕಾಶ್ ಈ ವೇಳೆ ಕಣ್ಣೀರಿಟ್ಟರು.</p>.<p>ಎಚ್.ಡಿ. ಕುಮಾರಸ್ವಾಮಿ ಸಂತೈಸಿದರು.</p>.<p>ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಅಮ್ಮಾಜಮ್ಮ ಸೆರಗೊಡ್ಡಿ, ನನಗೆ ರಾಜಕೀಯ ಗೊತ್ತಿಲ್ಲ. ರೈತರ ಕಷ್ಟ ತಿಳಿದಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುವುದು ನನ್ನ ಪತಿಯ ಕನಸಾಗಿತ್ತು. ಅದನ್ನು ನನಸು ಮಾಡಲು ಮತನೀಡಿ ಎಂದು ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಶಿರಾ ನಗರದ ಬರಗೂರು ರಾಮಚಂದ್ರಪ್ಪ ಬಯಲು ರಂಗಮಂದಿರಲ್ಲಿ ಭಾನುವಾರ ನಡೆದ ಜೆಡಿಎಸ್ ಬಹಿರಂಗ ಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಕುಸಿದು ಬಿದ್ದರು.</p>.<p>ದೇವೇಗೌಡರು ಮಾತನಾಡುತ್ತಿದ್ದಾಗ, ಅಮ್ಮಾಜಮ್ಮ ಅವರು ಪಕ್ಕದಲ್ಲಿಯೇ ನಿಂತಿದ್ದರು. ಬೆಳಿಗ್ಗೆಯಿಂದಲೂ ನಡೆದ ರೋಡ್ ಶೋ, ಪ್ರಚಾರ ಸಭೆಗಳಲ್ಲಿ ಅವರು ನಿಂತುಕೊಂಡಿದ್ದರು. ಇದರಿಂದ ಬಳಲಿದ್ದರು.<br />ತಕ್ಷಣ ಅವರನ್ನು ಶಾಸಕ ಡಾ. ಶ್ರೀನಿವಾಸಮೂರ್ತಿ ಆರೋಗ್ಯ ತಪಾಸಣೆ ನಡೆಸಿದರು. ನಂತರ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಮ್ಮಾಜಮ್ಮ ಅವರ ಪುತ್ರ ಸತ್ಯಪ್ರಕಾಶ್ ಈ ವೇಳೆ ಕಣ್ಣೀರಿಟ್ಟರು.</p>.<p>ಎಚ್.ಡಿ. ಕುಮಾರಸ್ವಾಮಿ ಸಂತೈಸಿದರು.</p>.<p>ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಅಮ್ಮಾಜಮ್ಮ ಸೆರಗೊಡ್ಡಿ, ನನಗೆ ರಾಜಕೀಯ ಗೊತ್ತಿಲ್ಲ. ರೈತರ ಕಷ್ಟ ತಿಳಿದಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುವುದು ನನ್ನ ಪತಿಯ ಕನಸಾಗಿತ್ತು. ಅದನ್ನು ನನಸು ಮಾಡಲು ಮತನೀಡಿ ಎಂದು ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>