<p><strong>ಮಧುಗಿರಿ</strong>: ದೇವತಾ ಕಾರ್ಯಗಳು ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುತ್ತವೆ ಎಂದು ಶಿರಾ ಶಾಸಕ ಸಿ.ಎಂ. ರಾಜೇಶ್ ಗೌಡ ತಿಳಿಸಿದರು.</p>.<p>ತಾಲ್ಲೂಕಿನ ನೀರಕಲ್ಲು ಗ್ರಾಮದಲ್ಲಿ ಸೋಮವಾರ ನಡೆದ ಅಮ್ಮಾಜಿ ಕಾವಲ್ಲೇಶ್ವರಿ ವಾರ್ಷಿಕ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಪಕ್ಷಾತೀತವಾಗಿ ರಾಜಕೀಯವಿಲ್ಲದೆ ದೇವರ ಉತ್ಸವ ನಡೆಸಬೇಕು. ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಭಾಗದಲ್ಲಿ ಶಿಥಿಲಗೊಂಡ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿವೆ. ಉಳ್ಳವರು ಉದಾರವಾಗಿ ದಾನ - ಧರ್ಮ ಮಾಡುವ ಮೂಲಕ ಸಂಸ್ಕೃತಿಯ ಭಾಗವಾದ ಶ್ರದ್ಧಾ ಕೇಂದ್ರಗಳ ಪುನರುತ್ಥಾನಕ್ಕೆ ಶ್ರಮಿಸುತ್ತಿದ್ದಾರೆ ಎಂದರು.</p>.<p>‘ನೀರಕಲ್ಲು ಕಾವಲ್ಲೇಶ್ವರಿ ನಮ್ಮ ಮನೆದೇವರಾಗಿದ್ದು ಶ್ರೀಕ್ಷೇತ್ರದ ಅಭಿವೃದ್ಧಿಗೆ ನಮ್ಮ ಕುಟುಂಬ ನೆರವು ನೀಡಿದೆ. ಮುಂದೆಯೂ ಸಮುದಾಯ ಭವನ ನಿರ್ಮಾಣ ಸೇರಿದಂತೆ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುವುದು’ ಎಂದರು.</p>.<p>ಜಿ.ಪಂ. ಮಾಜಿ ಸದಸ್ಯ ಪ್ರಕಾಶ್ ಗೌಡ, ಶಿರಾ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮೂಡಲಗಿರಿಯಪ್ಪ, ಗ್ರಾ.ಪಂ. ಸದಸ್ಯ ಎನ್. ಹನುಮಂತರಾಯಪ್ಪ, ಪೂಜಾರ್ ತಿಪ್ಪೇಸ್ವಾಮಿ, ದೇಗುಲದ ಹನುಮಂತರಾಜು, ತಿಮ್ಮರಾಜು, ಗೌಡ ರಾಮಚಂದ್ರಯ್ಯ, ಗೊಂಚಿಗಾರ್ ಹನುಮಂತಪ್ಪ, ಮಾಲಿಂಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ</strong>: ದೇವತಾ ಕಾರ್ಯಗಳು ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುತ್ತವೆ ಎಂದು ಶಿರಾ ಶಾಸಕ ಸಿ.ಎಂ. ರಾಜೇಶ್ ಗೌಡ ತಿಳಿಸಿದರು.</p>.<p>ತಾಲ್ಲೂಕಿನ ನೀರಕಲ್ಲು ಗ್ರಾಮದಲ್ಲಿ ಸೋಮವಾರ ನಡೆದ ಅಮ್ಮಾಜಿ ಕಾವಲ್ಲೇಶ್ವರಿ ವಾರ್ಷಿಕ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಪಕ್ಷಾತೀತವಾಗಿ ರಾಜಕೀಯವಿಲ್ಲದೆ ದೇವರ ಉತ್ಸವ ನಡೆಸಬೇಕು. ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಭಾಗದಲ್ಲಿ ಶಿಥಿಲಗೊಂಡ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿವೆ. ಉಳ್ಳವರು ಉದಾರವಾಗಿ ದಾನ - ಧರ್ಮ ಮಾಡುವ ಮೂಲಕ ಸಂಸ್ಕೃತಿಯ ಭಾಗವಾದ ಶ್ರದ್ಧಾ ಕೇಂದ್ರಗಳ ಪುನರುತ್ಥಾನಕ್ಕೆ ಶ್ರಮಿಸುತ್ತಿದ್ದಾರೆ ಎಂದರು.</p>.<p>‘ನೀರಕಲ್ಲು ಕಾವಲ್ಲೇಶ್ವರಿ ನಮ್ಮ ಮನೆದೇವರಾಗಿದ್ದು ಶ್ರೀಕ್ಷೇತ್ರದ ಅಭಿವೃದ್ಧಿಗೆ ನಮ್ಮ ಕುಟುಂಬ ನೆರವು ನೀಡಿದೆ. ಮುಂದೆಯೂ ಸಮುದಾಯ ಭವನ ನಿರ್ಮಾಣ ಸೇರಿದಂತೆ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುವುದು’ ಎಂದರು.</p>.<p>ಜಿ.ಪಂ. ಮಾಜಿ ಸದಸ್ಯ ಪ್ರಕಾಶ್ ಗೌಡ, ಶಿರಾ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮೂಡಲಗಿರಿಯಪ್ಪ, ಗ್ರಾ.ಪಂ. ಸದಸ್ಯ ಎನ್. ಹನುಮಂತರಾಯಪ್ಪ, ಪೂಜಾರ್ ತಿಪ್ಪೇಸ್ವಾಮಿ, ದೇಗುಲದ ಹನುಮಂತರಾಜು, ತಿಮ್ಮರಾಜು, ಗೌಡ ರಾಮಚಂದ್ರಯ್ಯ, ಗೊಂಚಿಗಾರ್ ಹನುಮಂತಪ್ಪ, ಮಾಲಿಂಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>