<p><strong>ಚಿಕ್ಕನಾಯಕನಹಳ್ಳಿ:</strong> ಪಟ್ಟಣಕ್ಕೆ ಅಮೃತ ಜಲ ಯೋಜನೆಯಡಿ ₹72 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಪ್ರಾರಂಭವಾಗುತ್ತದೆ. ಯುಜಿಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ರಸ್ತೆಗಳ ದುರಸ್ತಿಯನ್ನು ಹಂತಹಂತವಾಗಿ ಮಾಡಲಾಗುವುದು ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಹೇಳಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ನಡೆದ ‘ಮನೆಬಾಗಿಲಿಗೆ ಮನೆ ಮಗ’ ಕಾರ್ಯಕ್ರಮದಡಿ ಪುರಸಭೆಯ 20, 21, 22, 23ನೇ ವಾರ್ಡ್ಗಳಿಗೆ ಭೇಟಿ ನೀಡಿ ಮಾತನಾಡಿದರು.</p>.<p>ಪಟ್ಟಣದಲ್ಲಿ ಯುಜಿಡಿ ಕಾಮಗಾರಿಯಿಂದಾಗಿ ರಸ್ತೆಗಳು ಹಾಳಾಗಿವೆ. ಅವುಗಳನ್ನು ಈಗ ದುರಸ್ತಿ ಮಾಡಿದರೆ ಮತ್ತೆ ಅಮೃತ್ಜಲ್ ಯೊಜನೆಗಾಗಿ ಅಗೆಯುತ್ತಾರೆ. ಆದ್ದರಿಂದ ಈ ಎಲ್ಲ ಕಾಮಗಾರಿ ಮುಗಿದ ತಕ್ಷಣ ಸಿ.ಸಿ ರಸ್ತೆಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.</p>.<p>ಅಂಬೇಡ್ಕರ್ ನಗರದ ಸಮುದಾಯ ಭವನಕ್ಕೆ ₹5 ಲಕ್ಷ ಹಾಗೂ ಪಟ್ಟಣದ ಆಡಳಿತಸೌಧ ಮುಂಭಾಗ ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಕಂಚಿನ ಪ್ರತಿಮೆಗಳನ್ನು ನಿರ್ಮಿಸಲಾಗುವುದು ಎಂದರು.</p>.<p>ಪುರಸಭಾದ್ಯಕ್ಷ ಸಿ.ಎಚ್. ದಯಾನಂದ್, ಉಪಾದ್ಯಕ್ಷ ಸಿ.ಎಂ.ರಾಜಶೇಖರ್, ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಡಿ.ಸುರೇಶ್, ಸದಸ್ಯರಾದ ಪೂರ್ಣಿಮ, ಮಮತ ದೃವಕುಮಾರ್, ಕೆ.ಮಲ್ಲಿಕಾರ್ಜುನಸ್ವಾಮಿ, ಮಂಜನಾಥ್ಗೌಡ, ಲಕ್ಷ್ಮಮ್ಮ, ಮಲ್ಲೇಶಯ್ಯ, ಸಿ.ಬಿ. ತಿಪ್ಪೇಸ್ವಾಮಿ, ಸಿ.ಎಂ.ರೇಣುಕಮ್ಮ, ಪುಷ್ಪಾ ಹನುಮಂತರಾಜು, ಚಂದ್ರಶೇಖರಯ್ಯ, ಕೆಂಪಮ್ಮ, ಪುರಸಭಾ ಮುಖ್ಯಾಧಿಕಾರಿ ಮಂಜಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ:</strong> ಪಟ್ಟಣಕ್ಕೆ ಅಮೃತ ಜಲ ಯೋಜನೆಯಡಿ ₹72 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಪ್ರಾರಂಭವಾಗುತ್ತದೆ. ಯುಜಿಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ರಸ್ತೆಗಳ ದುರಸ್ತಿಯನ್ನು ಹಂತಹಂತವಾಗಿ ಮಾಡಲಾಗುವುದು ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಹೇಳಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ನಡೆದ ‘ಮನೆಬಾಗಿಲಿಗೆ ಮನೆ ಮಗ’ ಕಾರ್ಯಕ್ರಮದಡಿ ಪುರಸಭೆಯ 20, 21, 22, 23ನೇ ವಾರ್ಡ್ಗಳಿಗೆ ಭೇಟಿ ನೀಡಿ ಮಾತನಾಡಿದರು.</p>.<p>ಪಟ್ಟಣದಲ್ಲಿ ಯುಜಿಡಿ ಕಾಮಗಾರಿಯಿಂದಾಗಿ ರಸ್ತೆಗಳು ಹಾಳಾಗಿವೆ. ಅವುಗಳನ್ನು ಈಗ ದುರಸ್ತಿ ಮಾಡಿದರೆ ಮತ್ತೆ ಅಮೃತ್ಜಲ್ ಯೊಜನೆಗಾಗಿ ಅಗೆಯುತ್ತಾರೆ. ಆದ್ದರಿಂದ ಈ ಎಲ್ಲ ಕಾಮಗಾರಿ ಮುಗಿದ ತಕ್ಷಣ ಸಿ.ಸಿ ರಸ್ತೆಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.</p>.<p>ಅಂಬೇಡ್ಕರ್ ನಗರದ ಸಮುದಾಯ ಭವನಕ್ಕೆ ₹5 ಲಕ್ಷ ಹಾಗೂ ಪಟ್ಟಣದ ಆಡಳಿತಸೌಧ ಮುಂಭಾಗ ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಕಂಚಿನ ಪ್ರತಿಮೆಗಳನ್ನು ನಿರ್ಮಿಸಲಾಗುವುದು ಎಂದರು.</p>.<p>ಪುರಸಭಾದ್ಯಕ್ಷ ಸಿ.ಎಚ್. ದಯಾನಂದ್, ಉಪಾದ್ಯಕ್ಷ ಸಿ.ಎಂ.ರಾಜಶೇಖರ್, ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಡಿ.ಸುರೇಶ್, ಸದಸ್ಯರಾದ ಪೂರ್ಣಿಮ, ಮಮತ ದೃವಕುಮಾರ್, ಕೆ.ಮಲ್ಲಿಕಾರ್ಜುನಸ್ವಾಮಿ, ಮಂಜನಾಥ್ಗೌಡ, ಲಕ್ಷ್ಮಮ್ಮ, ಮಲ್ಲೇಶಯ್ಯ, ಸಿ.ಬಿ. ತಿಪ್ಪೇಸ್ವಾಮಿ, ಸಿ.ಎಂ.ರೇಣುಕಮ್ಮ, ಪುಷ್ಪಾ ಹನುಮಂತರಾಜು, ಚಂದ್ರಶೇಖರಯ್ಯ, ಕೆಂಪಮ್ಮ, ಪುರಸಭಾ ಮುಖ್ಯಾಧಿಕಾರಿ ಮಂಜಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>