‘ಪ್ರಜಾವಾಣಿ’ ಜೊತೆ ಮಾತನಾಡಿದ ಚಾಲಕ ಯೋಗೀಶ್, ‘ಕೊರೊನಾದಿಂದ ನನ್ನ ಮಾವನನ್ನು ಕಳೆದುಕೊಂಡಿದ್ದೇನೆ. ನಮಗೆ ಮುಖ ನೋಡಲು ಸಹ ಅವಕಾಶ ನೀಡಲಿಲ್ಲ. ನಮ್ಮ ಪರಿಸ್ಥಿತಿ ಬೇರೆಯವರಿಗೆ ಬೇಡ. ಎಲ್ಲರೂ ಒಂದು ದಿನ ಸಾಯುವುದು ಖಚಿತ. ಈ ಸಮಯದಲ್ಲಿ ನಾವು ಮಾಡಿದ ಒಳ್ಳೆಯ ಕೆಲಸ ಮುಖ್ಯವಾಗುತ್ತದೆ. ಇಂದು ನಾನು ಮಾಡಿದ ಕೆಲಸ ನನಗೆ ತೃಪ್ತಿ ತಂದಿದೆ. ಜಯಚಂದ್ರ ಅವರು ಉಚಿತವಾಗಿ ಅಂಬುಲೆನ್ಸ್ ನೀಡಿದ್ದು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಕೆಲಸವನ್ನು ತಾಲ್ಲೂಕು ಆಡಳಿತ ಮಾಡಬೇಕು’ ಎಂದು ಮನವಿ ಮಾಡಿದರು.