<p><strong>ವೈ.ಎನ್.ಹೊಸಕೋಟೆ:</strong> ಹೋಬಳಿಯ ದೊಡ್ಡಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ವೈದ್ಯರಿಗಾಗಿ ಶನಿವಾರ ಬೆಳಿಗ್ಗೆ ಅನಾರೋಗ್ಯ ಪೀಡಿತ ವೃದ್ಧೆ ಹಲವು ಗಂಟೆ ಕಾದು ಕುಳಿತಿದ್ದು, ವೈದ್ಯರು ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>‘ಮೂರು ದಿನಗಳಿಂದ ನನಗೆ ಆರೋಗ್ಯ ಸಮಸ್ಯೆ ಕಾಡುತ್ತಿತ್ತು. ನಿನ್ನೆ ಚುನಾವಣೆ ಇದ್ದ ಕಾರಣ ಶನಿವಾರ ಬೆಳಿಗ್ಗೆ ಆಸ್ಪತ್ರೆಗೆ ಬಂದಿದ್ದೇನೆ. ಆದರೆ ಯಾರೊಬ್ಬರೂ ಆಸ್ಪತ್ರೆಗೆ ಬಂದಿಲ್ಲ. ನಿತ್ರಾಣಗೊಂಡಿರುವ ನಾನು ಬೇರೆಡೆ ಹೋಗಲು ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದ ವೃದ್ಧೆ ಆಸ್ಪತ್ರೆ ಬಾಗಿಲ ಮುಂದೆ ಮಲಗಿದ್ದರು.</p>.<p>ಸರ್ಕಾರಿ ರಜಾ ದಿನಗಳು ಹಾಗೂ 2ನೇ ಮತ್ತು 4ನೇ ಶನಿವಾರ ಆಸ್ಪತ್ರೆ ಕಾರ್ಯನಿರ್ವಹಿಸುವುದಿಲ್ಲ ಎಂಬ ವಿಷಯ ತಿಳಿಯದೆ ವೃದ್ಧೆ ಆಸ್ಪತ್ರೆಗೆ ಬಂದಿದ್ದರು.</p>.<p>ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಒಬ್ಬ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದು, ಸರಿಯಾಗಿ ಆಸ್ಪತ್ರೆಗೆ ಹಾಜರಾಗುತ್ತಿಲ್ಲ. ಇಲ್ಲಿನ ‘ಡಿ’ ದರ್ಜೆ ನೌಕರನೂ ಸರಿಯಾಗಿ ಆಸ್ಪತ್ರೆಗೆ ಹಾಜರಾಗುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವೈ.ಎನ್.ಹೊಸಕೋಟೆ:</strong> ಹೋಬಳಿಯ ದೊಡ್ಡಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ವೈದ್ಯರಿಗಾಗಿ ಶನಿವಾರ ಬೆಳಿಗ್ಗೆ ಅನಾರೋಗ್ಯ ಪೀಡಿತ ವೃದ್ಧೆ ಹಲವು ಗಂಟೆ ಕಾದು ಕುಳಿತಿದ್ದು, ವೈದ್ಯರು ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>‘ಮೂರು ದಿನಗಳಿಂದ ನನಗೆ ಆರೋಗ್ಯ ಸಮಸ್ಯೆ ಕಾಡುತ್ತಿತ್ತು. ನಿನ್ನೆ ಚುನಾವಣೆ ಇದ್ದ ಕಾರಣ ಶನಿವಾರ ಬೆಳಿಗ್ಗೆ ಆಸ್ಪತ್ರೆಗೆ ಬಂದಿದ್ದೇನೆ. ಆದರೆ ಯಾರೊಬ್ಬರೂ ಆಸ್ಪತ್ರೆಗೆ ಬಂದಿಲ್ಲ. ನಿತ್ರಾಣಗೊಂಡಿರುವ ನಾನು ಬೇರೆಡೆ ಹೋಗಲು ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದ ವೃದ್ಧೆ ಆಸ್ಪತ್ರೆ ಬಾಗಿಲ ಮುಂದೆ ಮಲಗಿದ್ದರು.</p>.<p>ಸರ್ಕಾರಿ ರಜಾ ದಿನಗಳು ಹಾಗೂ 2ನೇ ಮತ್ತು 4ನೇ ಶನಿವಾರ ಆಸ್ಪತ್ರೆ ಕಾರ್ಯನಿರ್ವಹಿಸುವುದಿಲ್ಲ ಎಂಬ ವಿಷಯ ತಿಳಿಯದೆ ವೃದ್ಧೆ ಆಸ್ಪತ್ರೆಗೆ ಬಂದಿದ್ದರು.</p>.<p>ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಒಬ್ಬ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದು, ಸರಿಯಾಗಿ ಆಸ್ಪತ್ರೆಗೆ ಹಾಜರಾಗುತ್ತಿಲ್ಲ. ಇಲ್ಲಿನ ‘ಡಿ’ ದರ್ಜೆ ನೌಕರನೂ ಸರಿಯಾಗಿ ಆಸ್ಪತ್ರೆಗೆ ಹಾಜರಾಗುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>