<p><strong>ತುಮಕೂರು:</strong>‘ದೇಶದಲ್ಲಿ ಅಘೋಷಿತ ತುರ್ತುಸ್ಥಿತಿ ನಿರ್ಮಾಣವಾಗಿದೆ. ರಾಜಕಾರಣಿಗಳ ತಪ್ಪಿನ ವಿರುದ್ಧ ಯಾರೂ ಧ್ವನಿ ಎತ್ತುತ್ತಿಲ್ಲ. ಇಂದು ಅನ್ಯಾಯದ ವಿರುದ್ಧ ಧ್ವನಿ ಎತ್ತದಿದ್ದರೆ ಮುಂದಿನ ದಿನಗಳು ಇನ್ನಷ್ಟು ಕಷ್ಟಕರವಾಗಲಿವೆ’ ಎಂದು ಸಾಹಿತಿ ಕುಂ.ವೀರಭದ್ರಪ್ಪ ಅಭಿಪ್ರಾಯಪಟ್ಟರು.</p>.<p>‘ಸತ್ಯ ಹೇಳಿದ ಕಾರಣಕ್ಕೆ ಸಂಶೋಧಕ ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಯಿತು. ಉತ್ತಮ ಕಾರ್ಯ, ಭಾವೈಕ್ಯ, ಸಮಾನತೆ, ಸಹಬಾಳ್ವೆಗೆ ಜೀವ ಕೊಟ್ಟರೆ ಅದು ನಿಜವಾಗಲೂ ಸಾರ್ಥಕ’ ಎಂದರು.</p>.<p>ನಗರದಲ್ಲಿ ಭಾನುವಾರ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ (ಕೆಜೆವಿಎಸ್) ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪ್ರಸ್ತುತ ದಿನಗಳಲ್ಲಿ ದೇವರು, ಮೂಢನಂಬಿಕೆ ವಿರುದ್ಧ ಮಾತನಾಡಿದರೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ್ರೋಹಿ ಪಟ್ಟ ಕಟ್ಟುತ್ತಾರೆ. ನೀವು ಹಿಂದೂ ವಿರೋಧಿಗಳು, ನಿಮ್ಮನ್ನು ಕೊಲೆ ಮಾಡಲಾಗುತ್ತದೆ ಎಂದು ನನಗೂ ಎರಡು ಪ್ರೇಮಪತ್ರಗಳು (ಜೀವ ಬೆದರಿಕೆ ಪತ್ರ) ಬಂದಿದ್ದವು’ ಎಂದು ಹೇಳಿದರು.</p>.<p>‘ಸ್ವಾಮಿಗಳು ಅತ್ಯಂತ ಭಯಾನಕ. ಸಮಾಜದಲ್ಲಿ ಈಗ ಹೈಟೆಕ್ ಸ್ವಾಮಿಗಳ ಸಂಖ್ಯೆ ಹೆಚ್ಚಾಗಿದೆ. ಅಂಥವರ ಕಾಲಿಗೆ ಬೀಳುವ ರಾಜಕಾರಣಿಗಳಿಗಿಂತ ಮೂರ್ಖರು ಬೇರೆ ಯಾರೂ ಇಲ್ಲ. ರಾಜಕಾರಣಿಗಳು ವೈಚಾರಿಕತೆಯ ಪುಸ್ತಕಗಳಿಗಿಂತ ವಾಸ್ತುಶಾಸ್ತ್ರ, ವಾಮಾಚಾರಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಹೆಚ್ಚಾಗಿ ಓದುತ್ತಾರೆ’ ಎಂದು ಅವರು ತರಾಟೆಗೆ ತೆಗೆದುಕೊಂಡರು.</p>.<p>‘ವಿರೋಧ ಪಕ್ಷದವರ ಬಾಯಿ ಮುಚ್ಚಿಸುವುದು ಹೇಗೆ? ಅವರನ್ನು ಚುನಾವಣೆಯಲ್ಲಿ ಸೋಲಿಸುವುದು ಹೇಗೆ? ಎನ್ನುವುದಕ್ಕೂ ರಾಜಕಾರಣಿಗಳು ಹೋಮ, ಹವನ ಮಾಡಿಸುತ್ತಿದ್ದಾರೆ. ವೈಜ್ಞಾನಿಕ ದೃಷ್ಟಿಕೋನವುಳ್ಳ ರಾಜಕಾರಣಿಗಳ ಅವಶ್ಯಕತೆಯಿದೆ. ಶಿಕ್ಷಣವಂತರೇ ಮೂಢನಂಬಿಕೆಗಳನ್ನು ಹೆಚ್ಚಾಗಿ ನಂಬುತ್ತಾರೆ’ ಎಂದು ಕುಂ.ವೀ ವಿಷಾದಿಸಿದರು.</p>.<p>‘ಪುರೋಹಿತರು ನಮ್ಮನ್ನು ಭಯಾನಕ ಪರಿಸ್ಥಿತಿಯಲ್ಲಿ ಇಟ್ಟಿದ್ದಾರೆ. ಮೂಢನಂಬಿಕೆ ಬೇರೂರಿದೆ. ಮಕ್ಕಳಿಗೆ ಹೆಸರಿಡುವ ಸ್ವಾತಂತ್ರ್ಯವೂ ನಮಗಿಲ್ಲ. ಮಕ್ಕಳನ್ನು ಭಯದಲ್ಲಿ ಬೆಳೆಸುತ್ತಿದ್ದೇವೆ. ಅವರಲ್ಲಿ ಪ್ರಶ್ನಿಸುವ ಮನೋಭಾವ ರೂಢಿಸಬೇಕಿದೆ’ ಎಂದು ಸಲಹೆ ಮಾಡಿದರು.</p>.<p><strong>ಓದಿ...</strong></p>.<p><a href="https://www.prajavani.net/karnataka-news/karnataka-cm-basavaraj-bommai-reaction-about-cabinet-expansion-bjp-politics-936920.html" target="_blank">ಸಂಪುಟ ವಿಸ್ತರಣೆ:ಎರಡು ದಿನದಲ್ಲಿ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆಎಂದಬೊಮ್ಮಾಯಿ</a></p>.<p><a href="https://www.prajavani.net/karnataka-news/siddaramaiah-and-hd-kumaraswamy-condolence-for-jds-mla-gt-devegowda-granddaughter-death-936917.html" target="_blank">ಜಿ.ಟಿ.ದೇವೇಗೌಡರ ಮೊಮ್ಮಗಳ ನಿಧನ: ಸಿದ್ದರಾಮಯ್ಯ, ಎಚ್ಡಿಕೆ ಸೇರಿ ಗಣ್ಯರಿಂದ ಸಂತಾಪ</a></p>.<p><a href="https://www.prajavani.net/district/mysore/chamundeshwari-assembly-constituency-jds-mla-gt-devegowda-grand-daughter-died-due-to-illness-936906.html" target="_blank">ಶಾಸಕ ಜಿ.ಟಿ.ದೇವೇಗೌಡರ 3 ವರ್ಷದ ಮೊಮ್ಮಗಳು ಗೌರಿ ನಿಧನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong>‘ದೇಶದಲ್ಲಿ ಅಘೋಷಿತ ತುರ್ತುಸ್ಥಿತಿ ನಿರ್ಮಾಣವಾಗಿದೆ. ರಾಜಕಾರಣಿಗಳ ತಪ್ಪಿನ ವಿರುದ್ಧ ಯಾರೂ ಧ್ವನಿ ಎತ್ತುತ್ತಿಲ್ಲ. ಇಂದು ಅನ್ಯಾಯದ ವಿರುದ್ಧ ಧ್ವನಿ ಎತ್ತದಿದ್ದರೆ ಮುಂದಿನ ದಿನಗಳು ಇನ್ನಷ್ಟು ಕಷ್ಟಕರವಾಗಲಿವೆ’ ಎಂದು ಸಾಹಿತಿ ಕುಂ.ವೀರಭದ್ರಪ್ಪ ಅಭಿಪ್ರಾಯಪಟ್ಟರು.</p>.<p>‘ಸತ್ಯ ಹೇಳಿದ ಕಾರಣಕ್ಕೆ ಸಂಶೋಧಕ ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಯಿತು. ಉತ್ತಮ ಕಾರ್ಯ, ಭಾವೈಕ್ಯ, ಸಮಾನತೆ, ಸಹಬಾಳ್ವೆಗೆ ಜೀವ ಕೊಟ್ಟರೆ ಅದು ನಿಜವಾಗಲೂ ಸಾರ್ಥಕ’ ಎಂದರು.</p>.<p>ನಗರದಲ್ಲಿ ಭಾನುವಾರ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ (ಕೆಜೆವಿಎಸ್) ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪ್ರಸ್ತುತ ದಿನಗಳಲ್ಲಿ ದೇವರು, ಮೂಢನಂಬಿಕೆ ವಿರುದ್ಧ ಮಾತನಾಡಿದರೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ್ರೋಹಿ ಪಟ್ಟ ಕಟ್ಟುತ್ತಾರೆ. ನೀವು ಹಿಂದೂ ವಿರೋಧಿಗಳು, ನಿಮ್ಮನ್ನು ಕೊಲೆ ಮಾಡಲಾಗುತ್ತದೆ ಎಂದು ನನಗೂ ಎರಡು ಪ್ರೇಮಪತ್ರಗಳು (ಜೀವ ಬೆದರಿಕೆ ಪತ್ರ) ಬಂದಿದ್ದವು’ ಎಂದು ಹೇಳಿದರು.</p>.<p>‘ಸ್ವಾಮಿಗಳು ಅತ್ಯಂತ ಭಯಾನಕ. ಸಮಾಜದಲ್ಲಿ ಈಗ ಹೈಟೆಕ್ ಸ್ವಾಮಿಗಳ ಸಂಖ್ಯೆ ಹೆಚ್ಚಾಗಿದೆ. ಅಂಥವರ ಕಾಲಿಗೆ ಬೀಳುವ ರಾಜಕಾರಣಿಗಳಿಗಿಂತ ಮೂರ್ಖರು ಬೇರೆ ಯಾರೂ ಇಲ್ಲ. ರಾಜಕಾರಣಿಗಳು ವೈಚಾರಿಕತೆಯ ಪುಸ್ತಕಗಳಿಗಿಂತ ವಾಸ್ತುಶಾಸ್ತ್ರ, ವಾಮಾಚಾರಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಹೆಚ್ಚಾಗಿ ಓದುತ್ತಾರೆ’ ಎಂದು ಅವರು ತರಾಟೆಗೆ ತೆಗೆದುಕೊಂಡರು.</p>.<p>‘ವಿರೋಧ ಪಕ್ಷದವರ ಬಾಯಿ ಮುಚ್ಚಿಸುವುದು ಹೇಗೆ? ಅವರನ್ನು ಚುನಾವಣೆಯಲ್ಲಿ ಸೋಲಿಸುವುದು ಹೇಗೆ? ಎನ್ನುವುದಕ್ಕೂ ರಾಜಕಾರಣಿಗಳು ಹೋಮ, ಹವನ ಮಾಡಿಸುತ್ತಿದ್ದಾರೆ. ವೈಜ್ಞಾನಿಕ ದೃಷ್ಟಿಕೋನವುಳ್ಳ ರಾಜಕಾರಣಿಗಳ ಅವಶ್ಯಕತೆಯಿದೆ. ಶಿಕ್ಷಣವಂತರೇ ಮೂಢನಂಬಿಕೆಗಳನ್ನು ಹೆಚ್ಚಾಗಿ ನಂಬುತ್ತಾರೆ’ ಎಂದು ಕುಂ.ವೀ ವಿಷಾದಿಸಿದರು.</p>.<p>‘ಪುರೋಹಿತರು ನಮ್ಮನ್ನು ಭಯಾನಕ ಪರಿಸ್ಥಿತಿಯಲ್ಲಿ ಇಟ್ಟಿದ್ದಾರೆ. ಮೂಢನಂಬಿಕೆ ಬೇರೂರಿದೆ. ಮಕ್ಕಳಿಗೆ ಹೆಸರಿಡುವ ಸ್ವಾತಂತ್ರ್ಯವೂ ನಮಗಿಲ್ಲ. ಮಕ್ಕಳನ್ನು ಭಯದಲ್ಲಿ ಬೆಳೆಸುತ್ತಿದ್ದೇವೆ. ಅವರಲ್ಲಿ ಪ್ರಶ್ನಿಸುವ ಮನೋಭಾವ ರೂಢಿಸಬೇಕಿದೆ’ ಎಂದು ಸಲಹೆ ಮಾಡಿದರು.</p>.<p><strong>ಓದಿ...</strong></p>.<p><a href="https://www.prajavani.net/karnataka-news/karnataka-cm-basavaraj-bommai-reaction-about-cabinet-expansion-bjp-politics-936920.html" target="_blank">ಸಂಪುಟ ವಿಸ್ತರಣೆ:ಎರಡು ದಿನದಲ್ಲಿ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆಎಂದಬೊಮ್ಮಾಯಿ</a></p>.<p><a href="https://www.prajavani.net/karnataka-news/siddaramaiah-and-hd-kumaraswamy-condolence-for-jds-mla-gt-devegowda-granddaughter-death-936917.html" target="_blank">ಜಿ.ಟಿ.ದೇವೇಗೌಡರ ಮೊಮ್ಮಗಳ ನಿಧನ: ಸಿದ್ದರಾಮಯ್ಯ, ಎಚ್ಡಿಕೆ ಸೇರಿ ಗಣ್ಯರಿಂದ ಸಂತಾಪ</a></p>.<p><a href="https://www.prajavani.net/district/mysore/chamundeshwari-assembly-constituency-jds-mla-gt-devegowda-grand-daughter-died-due-to-illness-936906.html" target="_blank">ಶಾಸಕ ಜಿ.ಟಿ.ದೇವೇಗೌಡರ 3 ವರ್ಷದ ಮೊಮ್ಮಗಳು ಗೌರಿ ನಿಧನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>