ಮಂಗಳವಾರ ಮುಖ್ಯಮಂತ್ರಿಗಳು ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಭೆ ಕರೆಯಲಾಗುವುದು ಎಂದು ತಿಳಿಸಿದ್ದರು. ಆದರೆ, ತಮಗೆ ಮೌಖಿಕ ಆದೇಶದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಲಿಖಿತ ಆದೇಶ ನೀಡುವವರೆಗೂ ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಬುಧವಾರವೂ ಪ್ರತಿಭಟನೆ ಮುಂದುವರೆಸಿದ್ದರು.