<p><strong>ತುಮಕೂರು:</strong> ತಾಲ್ಲೂಕಿನ ಚಿಕ್ಕಸಾರಂಗಿ ಗ್ರಾಮದಲ್ಲಿ ಶಿಥಿಲ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದ್ದು, ಮಕ್ಕಳು ಆತಂಕದಲ್ಲೇ ಕೇಂದ್ರಕ್ಕೆ ಬರುತ್ತಿದ್ದಾರೆ.</p>.<p>ಅಂಗನವಾಡಿ ಕೇಂದ್ರದ ಕಟ್ಟಡ 40 ವರ್ಷಗಳಷ್ಟು ಹಳೆಯದಾಗಿದ್ದು, ಗೋಡೆ, ಛಾವಣಿ ಬಿರುಕು ಬಿಟ್ಟಿದೆ. ಮಳೆ ಬಂದರೆ ಸೋರುತ್ತಿದ್ದು, ಕಟ್ಟಡ ಬೀಳುವ ಹಂತ ತಲುಪಿದೆ. ಮಳೆ ಸುರಿದಾಗ ಮಕ್ಕಳು ಮನೆಗೆ ಹೋಗುತ್ತಾರೆ. ಕೂಲಿ ಕಾರ್ಮಿಕರು, ಬಡವರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಅಂಗನವಾಡಿ ಕೇಂದ್ರದಲ್ಲಿ ಕಲಿಯುತ್ತಿದ್ದಾರೆ. ಕಟ್ಟಡ ಸುಣ್ಣ–ಬಣ್ಣ ಕಾಣದೆ ಹಲವು ವರ್ಷಗಳೇ ಕಳೆದಿವೆ. ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯ ಸಿಗುತ್ತಿಲ್ಲ. ಮಕ್ಕಳ ಆಟೋಟಕ್ಕೆ ಬೇಕಾದ ಮೈದಾನವೂ ಇಲ್ಲ.</p>.<p>‘ಅಂಗನವಾಡಿ ಮಕ್ಕಳ ಕಲಿಕೆಯ ಮೊದಲ ಹಂತ, ಪುಟ್ಟ ಹೆಜ್ಜೆಗಳನ್ನು ಇಟ್ಟು ಆಸಕ್ತಿಯಿಂದಲೇ ಕೇಂದ್ರದತ್ತ ಬರುತ್ತಾರೆ. ಆದರೆ, ಮೂಲಭೂತ ಸೌಲಭ್ಯ ಕಲ್ಪಿಸಿಲ್ಲ. ಚಿಕ್ಕಸಾರಂಗಿ ಗಳಿಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಲಿದ್ದು, ಹಲವು ಬಾರಿ ಅಧಿಕಾರಿಗಳು, ಅಧ್ಯಕ್ಷರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>‘ಗ್ರಾಮದ ಬಳಿ ಜಾಗ ಗುರುತಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳಬೇಕು. ಮಕ್ಕಳಿಗೆ ಕಲಿಕೆಗೆ ನೆರವು ನೀಡಬೇಕು. ಶೌಚಾಲಯ, ಮೈದಾನ ಸೇರಿ ಅಗತ್ಯ ಸೌಲಭ್ಯ ಕಲ್ಪಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ತಾಲ್ಲೂಕಿನ ಚಿಕ್ಕಸಾರಂಗಿ ಗ್ರಾಮದಲ್ಲಿ ಶಿಥಿಲ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದ್ದು, ಮಕ್ಕಳು ಆತಂಕದಲ್ಲೇ ಕೇಂದ್ರಕ್ಕೆ ಬರುತ್ತಿದ್ದಾರೆ.</p>.<p>ಅಂಗನವಾಡಿ ಕೇಂದ್ರದ ಕಟ್ಟಡ 40 ವರ್ಷಗಳಷ್ಟು ಹಳೆಯದಾಗಿದ್ದು, ಗೋಡೆ, ಛಾವಣಿ ಬಿರುಕು ಬಿಟ್ಟಿದೆ. ಮಳೆ ಬಂದರೆ ಸೋರುತ್ತಿದ್ದು, ಕಟ್ಟಡ ಬೀಳುವ ಹಂತ ತಲುಪಿದೆ. ಮಳೆ ಸುರಿದಾಗ ಮಕ್ಕಳು ಮನೆಗೆ ಹೋಗುತ್ತಾರೆ. ಕೂಲಿ ಕಾರ್ಮಿಕರು, ಬಡವರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಅಂಗನವಾಡಿ ಕೇಂದ್ರದಲ್ಲಿ ಕಲಿಯುತ್ತಿದ್ದಾರೆ. ಕಟ್ಟಡ ಸುಣ್ಣ–ಬಣ್ಣ ಕಾಣದೆ ಹಲವು ವರ್ಷಗಳೇ ಕಳೆದಿವೆ. ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯ ಸಿಗುತ್ತಿಲ್ಲ. ಮಕ್ಕಳ ಆಟೋಟಕ್ಕೆ ಬೇಕಾದ ಮೈದಾನವೂ ಇಲ್ಲ.</p>.<p>‘ಅಂಗನವಾಡಿ ಮಕ್ಕಳ ಕಲಿಕೆಯ ಮೊದಲ ಹಂತ, ಪುಟ್ಟ ಹೆಜ್ಜೆಗಳನ್ನು ಇಟ್ಟು ಆಸಕ್ತಿಯಿಂದಲೇ ಕೇಂದ್ರದತ್ತ ಬರುತ್ತಾರೆ. ಆದರೆ, ಮೂಲಭೂತ ಸೌಲಭ್ಯ ಕಲ್ಪಿಸಿಲ್ಲ. ಚಿಕ್ಕಸಾರಂಗಿ ಗಳಿಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಲಿದ್ದು, ಹಲವು ಬಾರಿ ಅಧಿಕಾರಿಗಳು, ಅಧ್ಯಕ್ಷರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>‘ಗ್ರಾಮದ ಬಳಿ ಜಾಗ ಗುರುತಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳಬೇಕು. ಮಕ್ಕಳಿಗೆ ಕಲಿಕೆಗೆ ನೆರವು ನೀಡಬೇಕು. ಶೌಚಾಲಯ, ಮೈದಾನ ಸೇರಿ ಅಗತ್ಯ ಸೌಲಭ್ಯ ಕಲ್ಪಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>