<p><strong>ತುಮಕೂರು:</strong> ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗ್ರಾಚ್ಯುಟಿಗೆ ಪಾವತಿಗೆ ಆಗ್ರಹಿಸಿ ಸಿಐಟಿಯು– ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಯಿತು.</p>.<p>‘ಅಂಗನವಾಡಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಕಾರ್ಯಕರ್ತೆಯರು, ಸಹಾಯಕಿಯರಿಗೆ ಉಪಧನ ಪಾವತಿ ಕಾಯ್ದೆ–1972 ನಿಬಂಧನೆಗಳು ಅನ್ವಯವಾಗುತ್ತವೆ’ ಎಂದು ಸುಪ್ರೀಂ ಕೋರ್ಟ್ 2022 ಏಪ್ರಿಲ್ನಲ್ಲಿ ತೀರ್ಪು ನೀಡಿದೆ. ಹಾಗಾಗಿ 2011ರಿಂದ ನಿವೃತ್ತರಾದವರಿಗೆ ಗ್ರಾಚ್ಯುಟಿಗೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸುಪ್ರೀಂ ಕೋರ್ಟ್ ತೀರ್ಪು ಜಾರಿಗಾಗಿ ನಡೆದ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಕೆಲವು ಸೌಲಭ್ಯ ನೀಡಿದೆ. 1–4–2023ರ ನಂತರ ನಿವೃತ್ತರಾದವರಿಗೆ ಮಾತ್ರ ಗ್ರಾಚ್ಯುಟಿ ನೀಡುವುದನ್ನು ಜಾರಿ ಮಾಡಿದೆ. ಈ ಆದೇಶ 2011ರಿಂದ 2023 ಮಾರ್ಚ್ ಅವಧಿಯಲ್ಲಿ ನಿವೃತ್ತರಾದ 10,311 ಕಾರ್ಯಕರ್ತೆಯರು, 11,980 ಸಹಾಯಕಿಯರಿಗೂ ಅನ್ವಯಿಸಬೇಕು. ಇದಕ್ಕಾಗಿ ₹183 ಕೋಟಿ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.</p>.<p>ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ಅಂಗನವಾಡಿ ನೌಕರರ ಸಂಘದ ನಗರ ಘಟಕದ ಅಧ್ಯಕ್ಷೆ ಬಿ.ಕೆ.ಗೌರಮ್ಮ, ಪ್ರಧಾನ ಕಾರ್ಯದರ್ಶಿ ಜಬೀನಾ ಖಾತೊನ್, ಗ್ರಾಮಾಂತರ ಘಟಕದ ಅಧ್ಯಕ್ಷೆ ಗಂಗಮ್ಮ, ಪ್ರಧಾನ ಕಾರ್ಯದರ್ಶಿ ಪ್ರೇಮಾ, ಪ್ರಮುಖರಾದ ವಿನೋದ, ರಾಜಮ್ಮ, ಜಯಂತಿ, ರಾಮಕ್ಕ ಪಾಲ್ಗೊಂಡಿದ್ದರು.</p>.<p>ಇಲಾಖೆ ಅಧಿಕಾರಿ ರಾಘವೇಂದ್ರ ಮನವಿ ಸ್ವಿಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗ್ರಾಚ್ಯುಟಿಗೆ ಪಾವತಿಗೆ ಆಗ್ರಹಿಸಿ ಸಿಐಟಿಯು– ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಯಿತು.</p>.<p>‘ಅಂಗನವಾಡಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಕಾರ್ಯಕರ್ತೆಯರು, ಸಹಾಯಕಿಯರಿಗೆ ಉಪಧನ ಪಾವತಿ ಕಾಯ್ದೆ–1972 ನಿಬಂಧನೆಗಳು ಅನ್ವಯವಾಗುತ್ತವೆ’ ಎಂದು ಸುಪ್ರೀಂ ಕೋರ್ಟ್ 2022 ಏಪ್ರಿಲ್ನಲ್ಲಿ ತೀರ್ಪು ನೀಡಿದೆ. ಹಾಗಾಗಿ 2011ರಿಂದ ನಿವೃತ್ತರಾದವರಿಗೆ ಗ್ರಾಚ್ಯುಟಿಗೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸುಪ್ರೀಂ ಕೋರ್ಟ್ ತೀರ್ಪು ಜಾರಿಗಾಗಿ ನಡೆದ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಕೆಲವು ಸೌಲಭ್ಯ ನೀಡಿದೆ. 1–4–2023ರ ನಂತರ ನಿವೃತ್ತರಾದವರಿಗೆ ಮಾತ್ರ ಗ್ರಾಚ್ಯುಟಿ ನೀಡುವುದನ್ನು ಜಾರಿ ಮಾಡಿದೆ. ಈ ಆದೇಶ 2011ರಿಂದ 2023 ಮಾರ್ಚ್ ಅವಧಿಯಲ್ಲಿ ನಿವೃತ್ತರಾದ 10,311 ಕಾರ್ಯಕರ್ತೆಯರು, 11,980 ಸಹಾಯಕಿಯರಿಗೂ ಅನ್ವಯಿಸಬೇಕು. ಇದಕ್ಕಾಗಿ ₹183 ಕೋಟಿ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.</p>.<p>ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ಅಂಗನವಾಡಿ ನೌಕರರ ಸಂಘದ ನಗರ ಘಟಕದ ಅಧ್ಯಕ್ಷೆ ಬಿ.ಕೆ.ಗೌರಮ್ಮ, ಪ್ರಧಾನ ಕಾರ್ಯದರ್ಶಿ ಜಬೀನಾ ಖಾತೊನ್, ಗ್ರಾಮಾಂತರ ಘಟಕದ ಅಧ್ಯಕ್ಷೆ ಗಂಗಮ್ಮ, ಪ್ರಧಾನ ಕಾರ್ಯದರ್ಶಿ ಪ್ರೇಮಾ, ಪ್ರಮುಖರಾದ ವಿನೋದ, ರಾಜಮ್ಮ, ಜಯಂತಿ, ರಾಮಕ್ಕ ಪಾಲ್ಗೊಂಡಿದ್ದರು.</p>.<p>ಇಲಾಖೆ ಅಧಿಕಾರಿ ರಾಘವೇಂದ್ರ ಮನವಿ ಸ್ವಿಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>