ಜಗದ್ಗುರು ರೇಣುಕಾಚಾರ್ಯ ಜಯಂತಿ, ಜಗಜ್ಯೋತಿ ಬಸವೇಶ್ವರ ಜಯಂತಿ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತು ಜನಜಾಗೃತಿ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಬಾಳೆಹೊನ್ನೂರು ಪೀಠದ ಡಾ. ಪ್ರಸನ್ನರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಸ್ವಾಮೀಜಿ, ಗೃಹ ಸಚಿವ ಡಾ.ಜಿ. ಪರಮೇಶ್ವರ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದರು.