<p><strong>ಗುಬ್ಬಿ</strong>: ಭಯೋತ್ಪಾದನೆ ಪ್ರಪಂಚಕ್ಕೆ ಮಾರಕ. ಇದರ ಬಗ್ಗೆ ಜಾಗೃತಿ ಅಗತ್ಯವಿದೆ ಎಂದು ತಹಶೀಲ್ದಾರ್ ಆರತಿ ಬಿ. ತಿಳಿಸಿದರು.</p>.<p>ತಾಲ್ಲೂಕು ಆಡಳಿತ ಸೌಧದಲ್ಲಿ ಬುಧವಾರ ಏರ್ಪಡಿಸಿದ್ದ ಭಯೋತ್ಪಾದನಾ ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಲ್ಟಿಟಿಇ ದಾಳಿಗೆ ತುತ್ತಾಗಿ ಹತ್ಯೆಯಾದ ಮೇ 21ನ್ನು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಬದುಕುವ ಹಕ್ಕು ಎಲ್ಲರಿಗೂ ಇದ್ದು, ಅದನ್ನು ಬಲವಂತವಾಗಿ ಅಂತ್ಯಗೊಳಿಸುವುದು ಕಾನೂನು ಬಾಹಿರ ಎಂದು ಹೇಳಿದರು.</p>.<p>ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿರುವವರು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತ ಮನುಕುಲಕ್ಕೆ ಮಾರಕವಾಗಿದ್ದಾರೆ. ಅಂತಹ ಭಯೋತ್ಪಾದನಾ ಕೃತ್ಯಗಳನ್ನು ಎಲ್ಲರೂ ಖಂಡಿಸಬೇಕು ಎಂದರು.</p>.<p>ಭಯೋತ್ಪಾದನೆ ಮಟ್ಟಹಾಕಲು ಎಲ್ಲರ ಸಹಕಾರ ಅಗತ್ಯ. ಸ್ವಾರ್ಥ ಬಿಟ್ಟು ರಾಜ್ಯ ಹಾಗೂ ದೇಶದ ಹಿತ ದೃಷ್ಟಿಯಿಂದ ಭಯೋತ್ಪಾದನೆ ವಿರುದ್ಧ ಎಚ್ಚೆತ್ತುಕೊಳ್ಳಬೇಕಿದೆ ಎಂದು ತಿಳಿಸಿದರು.</p>.<p>ಭಯೋತ್ಪಾದನಾ ಕೃತ್ಯಗಳ ವಿರುದ್ಧ ಜಾಗೃತರಾಗದಿದ್ದಲ್ಲಿ ಸಮಾಜಘಾತಕ ಶಕ್ತಿಗಳು ಹಾಗೂ ಭಯೋತ್ಪಾದಕರು ಅಮಾನುಷ ಕೃತ್ಯಗಳನ್ನು ಮುಂದುವರೆಸುವರು. ಇದರಿಂದ ಅಮಾಯಕರು ಜೀವ ಕಳೆದುಕೊಳ್ಳುವ ಜೊತೆಗೆ ದೇಶದ ಅಭಿವೃದ್ಧಿ ಕುಂಟಿತಗೊಳ್ಳುವುದು ಎಂದರು.</p>.<p>ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.</p>.<p>ಶಿರಸ್ತೇದಾರ್ ವರುಣ್, ಖಾನ್, ತಾಲ್ಲೂಕು ಕಚೇರಿಯ ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ಭಯೋತ್ಪಾದನೆ ಪ್ರಪಂಚಕ್ಕೆ ಮಾರಕ. ಇದರ ಬಗ್ಗೆ ಜಾಗೃತಿ ಅಗತ್ಯವಿದೆ ಎಂದು ತಹಶೀಲ್ದಾರ್ ಆರತಿ ಬಿ. ತಿಳಿಸಿದರು.</p>.<p>ತಾಲ್ಲೂಕು ಆಡಳಿತ ಸೌಧದಲ್ಲಿ ಬುಧವಾರ ಏರ್ಪಡಿಸಿದ್ದ ಭಯೋತ್ಪಾದನಾ ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಲ್ಟಿಟಿಇ ದಾಳಿಗೆ ತುತ್ತಾಗಿ ಹತ್ಯೆಯಾದ ಮೇ 21ನ್ನು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಬದುಕುವ ಹಕ್ಕು ಎಲ್ಲರಿಗೂ ಇದ್ದು, ಅದನ್ನು ಬಲವಂತವಾಗಿ ಅಂತ್ಯಗೊಳಿಸುವುದು ಕಾನೂನು ಬಾಹಿರ ಎಂದು ಹೇಳಿದರು.</p>.<p>ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿರುವವರು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತ ಮನುಕುಲಕ್ಕೆ ಮಾರಕವಾಗಿದ್ದಾರೆ. ಅಂತಹ ಭಯೋತ್ಪಾದನಾ ಕೃತ್ಯಗಳನ್ನು ಎಲ್ಲರೂ ಖಂಡಿಸಬೇಕು ಎಂದರು.</p>.<p>ಭಯೋತ್ಪಾದನೆ ಮಟ್ಟಹಾಕಲು ಎಲ್ಲರ ಸಹಕಾರ ಅಗತ್ಯ. ಸ್ವಾರ್ಥ ಬಿಟ್ಟು ರಾಜ್ಯ ಹಾಗೂ ದೇಶದ ಹಿತ ದೃಷ್ಟಿಯಿಂದ ಭಯೋತ್ಪಾದನೆ ವಿರುದ್ಧ ಎಚ್ಚೆತ್ತುಕೊಳ್ಳಬೇಕಿದೆ ಎಂದು ತಿಳಿಸಿದರು.</p>.<p>ಭಯೋತ್ಪಾದನಾ ಕೃತ್ಯಗಳ ವಿರುದ್ಧ ಜಾಗೃತರಾಗದಿದ್ದಲ್ಲಿ ಸಮಾಜಘಾತಕ ಶಕ್ತಿಗಳು ಹಾಗೂ ಭಯೋತ್ಪಾದಕರು ಅಮಾನುಷ ಕೃತ್ಯಗಳನ್ನು ಮುಂದುವರೆಸುವರು. ಇದರಿಂದ ಅಮಾಯಕರು ಜೀವ ಕಳೆದುಕೊಳ್ಳುವ ಜೊತೆಗೆ ದೇಶದ ಅಭಿವೃದ್ಧಿ ಕುಂಟಿತಗೊಳ್ಳುವುದು ಎಂದರು.</p>.<p>ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.</p>.<p>ಶಿರಸ್ತೇದಾರ್ ವರುಣ್, ಖಾನ್, ತಾಲ್ಲೂಕು ಕಚೇರಿಯ ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>