ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಿಗೇನಹಳ್ಳಿ: ಕರಡಿ ಪ್ರತ್ಯಕ್ಷ ಗ್ರಾಮಸ್ಥರ ಆತಂಕ

Last Updated 5 ಅಕ್ಟೋಬರ್ 2021, 4:49 IST
ಅಕ್ಷರ ಗಾತ್ರ

ಕೊಡಿಗೇನಹಳ್ಳಿ: ಕಳೆದ ಕೆಲವು ದಿನಗಳಿಂದ ಚಿಕ್ಕಮಾಲೂರು ಗ್ರಾಮದ ಕೆರೆಯಂಗಳ ಮತ್ತು ಅರಣ್ಯದಲ್ಲಿ ಕಾಣಿಸುತ್ತಿದ್ದ ಕರಡಿಗಳು ಮತ್ತೆ ಸೋಮವಾರ ಸಂಜೆ ಕುರಿಗಾಹಿಗಳಿಗೆ ಪೊದೆಯಲ್ಲಿ ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ.

ಕಳೆದ ಎರಡು ವಾರದಲ್ಲಿ ಮೂರು ಬಾರಿ ಕಂಡಿದ್ದ ಕರಡಿಗಳು ಸೋಮವಾರವೂ ಪೊದೆ ಕೆಳಗೆ ಮಲಗಿರುವುದನ್ನು ಗ್ರಾಮಸ್ಥರು ಕಂಡಿದ್ದು, ದಿಗಿಲುಗೊಂಡಿದ್ದಾರೆ.

‘3 ದೊಡ್ಡ ಕರಡಿಗಳು ಮತ್ತು ಒಂದು ಮರಿ ಆಗಾಗ ಓಡಾಡುವುದನ್ನು ಕಣ್ಣಾರೆ ಕಂಡಿದ್ದೇವೆ. ಅವುಗಳನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಲಾಗಿದೆ. ಅವರು ಕೂಡ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ. ಆದರೆ, ಅವರಿಗೂ ಇದುವರೆಗೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡಲು ಸಾಧ್ಯವಾಗಿಲ್ಲ. ಇದು ನಮ್ಮಲ್ಲಿ ಭಯದ ವಾತವರಣ ಉಂಟು ಮಾಡಿದೆ. ಕೂಡಲೇ, ಬೋನು ಇಟ್ಟು ಕರಡಿಗಳನ್ನು ಸೆರೆ ಹಿಡಿಯಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

‘ಗ್ರಾಮದ ಸಮೀಪದ ಗುಡ್ಡದಿಂದ ಆಹಾರ ಹುಡುಕುತ್ತ ಕರಡಿಗಳು ಬಂದಿರಬಹುದು. ಮತ್ತೆ ಅದೇ ಸ್ಥಳದಲ್ಲಿ ಕಂಡುಬಂದರೆ ಬೋನು ಇಟ್ಟು ಸೆರೆ ಹಿಡಿಯಲು ಕ್ರಮ ಕೈಗೊಳ್ಳಲಾಗುವುದು’ ಎಂದು ಮಧುಗಿರಿ ವಿಭಾಗದ ವಲಯ ಅರಣ್ಯಾಧಿಕಾರಿ ಸಿ. ರವಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT