‘3 ದೊಡ್ಡ ಕರಡಿಗಳು ಮತ್ತು ಒಂದು ಮರಿ ಆಗಾಗ ಓಡಾಡುವುದನ್ನು ಕಣ್ಣಾರೆ ಕಂಡಿದ್ದೇವೆ. ಅವುಗಳನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಲಾಗಿದೆ. ಅವರು ಕೂಡ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ. ಆದರೆ, ಅವರಿಗೂ ಇದುವರೆಗೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡಲು ಸಾಧ್ಯವಾಗಿಲ್ಲ. ಇದು ನಮ್ಮಲ್ಲಿ ಭಯದ ವಾತವರಣ ಉಂಟು ಮಾಡಿದೆ. ಕೂಡಲೇ, ಬೋನು ಇಟ್ಟು ಕರಡಿಗಳನ್ನು ಸೆರೆ ಹಿಡಿಯಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.