ಸಂಭ್ರಮಾಚರಣೆ: ಅಧಿಕಾರ ಸ್ವೀಕಾರಕ್ಕೂ ಮುನ್ನ ಎಪಿಎಂಸಿ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಜಿ.ಪಂ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಸದಸ್ಯ ವೈ.ಎಚ್.ಹುಚ್ಚಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾ ರಮೇಶ್, ಉಪಾಧ್ಯಕ್ಷ ಶಾಂತಕುಮಾರ್, ಮಾಜಿ ಅಧ್ಯಕ್ಷ ಗಂಗಾಂಜಿನೇಯ, ಮುಖಂಡರಾದ ಸಿದ್ದೇಗೌಡ, ರಮೇಶ್ ಇದ್ದರು.