ನಿತ್ಯ ಮಾರುಕಟ್ಟೆಗೆ ನೂರಾರು ರೈತರು ಬರುತ್ತಾರೆ. ಸೋಮವಾರ ಕುರಿ, ತರಕಾರಿ ಸಂತೆ ಇದೇ ಸ್ಥಳದಲ್ಲಿ ನಡೆಯುತ್ತದೆ. ತರಕಾರಿ, ಹಣ್ಣು, ಹಂಪಲು ತರುವ ನೂರಾರು ವಾಹನಗಳು ಇದೇ ಮಾರ್ಗದಲ್ಲಿ ಬರಬೇಕು. ಸಾವಿರಾರು ಸಾರ್ವಜನಿಕರು ಸಂತೆ ದಿನದಂದು ಇದೇ ಮಾರ್ಗದಲ್ಲಿ ಸಂಚರಿಸುತ್ತಾರೆ. ಗುಂಡಿಯಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ ಎಂದು ರೈತ ಮುಖಂಡ ನಾಗರಾಜು ಆರೋಪಿಸಿದರು.