<p><strong>ತುರುವೇಕೆರೆ</strong>: ತಾಲ್ಲೂಕಿನ ತೆಂಗು ಬೆಳೆಗಾರರ ಹಿತ ಕಾಪಾಡಲು ಕೊಬ್ಬರಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಅವರಿಗೆ ತಾಲ್ಲೂಕು ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಆರ್. ಜಯರಾಮ್ ಮನವಿ ನೀಡಿದರು.</p>.<p>ಶಾಸಕ ಎಂ.ಟಿ.ಕೃಷ್ಣಪ್ಪ ಅವರನ್ನು ಪಟ್ಟಣದಲ್ಲಿ ತಾಲ್ಲೂಕು ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಪರ ಅಭಿನಂದಿಸಿ ಮಾತನಾಡಿದರು.</p>.<p>ಈಗಾಗಲೇ ತೆಂಗಿಗೆ ಕೀಟ, ನುಸಿ ಸೇರಿದಂತೆ ಅನೇಕ ರೋಗ ಕಾಣಿಸಿಕೊಂಡು ತೆಂಗಿನ ಇಳುವರಿ ಕಡಿಮೆಯಾಗಿ ರೈತರ ಆಸೆಗೆ ತಣ್ಣೀರು ಎರಚಿದೆ. ಮತ್ತೊಂದೆಡೆ ಕೊಬ್ಬರಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆಯಿಲ್ಲದೆ ರೈತ ಕಂಗಾಲಾಗಿದ್ದಾರೆ ಎಂದರು.</p>.<p>ಶಾಸಕ ಎಂ.ಟಿ.ಕೃಷ್ಣಪ್ಪ ಅವರು ಕೊಬ್ಬರಿಗೆ ವೈಜ್ಞಾನಿಕ ಬೆಲೆ ನೀಡುವ ವಿಚಾರವನ್ನು ಸದನದಲ್ಲಿ ಚರ್ಚಿಸಬೇಕು ಎಂದರು.</p>.<p>ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಒಂದು ಕ್ವಿಂಟಲ್ ಕೊಬ್ಬರಿಗೆ ₹3,000 ಘೋಷಿಸಿದ್ದರು. ಈ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು.</p>.<p>ಅಡಿಕೆ ಬೆಳೆಗಾರರ ಸಂಘದ ಉಪಾಧ್ಯಕ್ಷ ಪ್ರಸನ್ನ ಕುಮಾರ್, ಪುಟ್ಟೇಗೌಡ, ಕಾರ್ಯದರ್ಶಿ ಲೋಕಮ್ಮನಹಳ್ಳಿ ಕಾಂತರಾಜು, ಮಾಚೇನಹಳ್ಳಿ ಮಲ್ಲಿಕಾರ್ಜುನ್, ಕೊಪ್ಪ ನಾಗೇಶ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ</strong>: ತಾಲ್ಲೂಕಿನ ತೆಂಗು ಬೆಳೆಗಾರರ ಹಿತ ಕಾಪಾಡಲು ಕೊಬ್ಬರಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಅವರಿಗೆ ತಾಲ್ಲೂಕು ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಆರ್. ಜಯರಾಮ್ ಮನವಿ ನೀಡಿದರು.</p>.<p>ಶಾಸಕ ಎಂ.ಟಿ.ಕೃಷ್ಣಪ್ಪ ಅವರನ್ನು ಪಟ್ಟಣದಲ್ಲಿ ತಾಲ್ಲೂಕು ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಪರ ಅಭಿನಂದಿಸಿ ಮಾತನಾಡಿದರು.</p>.<p>ಈಗಾಗಲೇ ತೆಂಗಿಗೆ ಕೀಟ, ನುಸಿ ಸೇರಿದಂತೆ ಅನೇಕ ರೋಗ ಕಾಣಿಸಿಕೊಂಡು ತೆಂಗಿನ ಇಳುವರಿ ಕಡಿಮೆಯಾಗಿ ರೈತರ ಆಸೆಗೆ ತಣ್ಣೀರು ಎರಚಿದೆ. ಮತ್ತೊಂದೆಡೆ ಕೊಬ್ಬರಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆಯಿಲ್ಲದೆ ರೈತ ಕಂಗಾಲಾಗಿದ್ದಾರೆ ಎಂದರು.</p>.<p>ಶಾಸಕ ಎಂ.ಟಿ.ಕೃಷ್ಣಪ್ಪ ಅವರು ಕೊಬ್ಬರಿಗೆ ವೈಜ್ಞಾನಿಕ ಬೆಲೆ ನೀಡುವ ವಿಚಾರವನ್ನು ಸದನದಲ್ಲಿ ಚರ್ಚಿಸಬೇಕು ಎಂದರು.</p>.<p>ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಒಂದು ಕ್ವಿಂಟಲ್ ಕೊಬ್ಬರಿಗೆ ₹3,000 ಘೋಷಿಸಿದ್ದರು. ಈ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು.</p>.<p>ಅಡಿಕೆ ಬೆಳೆಗಾರರ ಸಂಘದ ಉಪಾಧ್ಯಕ್ಷ ಪ್ರಸನ್ನ ಕುಮಾರ್, ಪುಟ್ಟೇಗೌಡ, ಕಾರ್ಯದರ್ಶಿ ಲೋಕಮ್ಮನಹಳ್ಳಿ ಕಾಂತರಾಜು, ಮಾಚೇನಹಳ್ಳಿ ಮಲ್ಲಿಕಾರ್ಜುನ್, ಕೊಪ್ಪ ನಾಗೇಶ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>