ಅಚ್ಚುಕಟ್ಟುದಾರರ ಸಭೆಯಲ್ಲಿ ತೀವ್ರ ಚರ್ಚೆಯ ನಂತರ ಮಾತನಾಡಿದ ಜೆಡಿಎಸ್ ಮುಖಂಡ ಬಿ.ಎನ್.ಜಗದೀಶ್, ದೊಡ್ಡಕೆರೆ ವ್ಯಾಪ್ತಿಯಲ್ಲಿ 13 ಸಾವಿರ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವಿದೆ. ಕೆರೆಗೆ ಹೇಮಾವತಿ ನೀರು ಹರಿದು ಬರುತ್ತಿದ್ದರೂ, ಕುಡಿಯುವ ನೀರಿನ ನೆಪವೂಡ್ಡಿ 14 ವರ್ಷಗಳಿಂದ ನೀರು ನೀಡಿಲ್ಲ. ಸಂಗ್ರಹವಾಗಿರುವ ನೀರು ಮಲೀನವಾಗುತ್ತಿದ್ದರೂ, ಸಂಪೂರ್ಣವಾಗಿ ಖಾಲಿ ಮಾಡಿ, ಹೇಮಾವತಿ ನೀರಿನಿಂದ ತುಂಬಿಸಲು ಹಲವಾರು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಕೃಷಿ ಚಟುವಟಿಕೆಗಳಿಗೆ ಕೆರೆಗಳು ಆಧಾರವಾಗಿದ್ದು, ಕುಡಿಯುವ ನೀರಿನ ನೆಪದಲ್ಲಿ ಅಚ್ಚುಕಟ್ಟುದಾರರಿಗೆ ಅನ್ಯಾಯವಾಗುತ್ತಿದೆ ಎಂದರು.