<p><strong>ತುಮಕೂರು: </strong>ಶಿರಾ ತಾಲ್ಲೂಕಿನ ಮದಲೂರು ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸುರೇಶ್ಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.</p>.<p>ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ, ಕೆರೆಗೆ ನೀರು ಹರಿಸಲು ಆದೇಶಿಸುವುದಾಗಿ ಭರವಸೆ ನೀಡಿದರು ಎಂದು ಸುರೇಶ್ಗೌಡ ತಿಳಿಸಿದ್ದಾರೆ.</p>.<p>ಪ್ರಸ್ತುತ ಜಿಲ್ಲೆಯಲ್ಲಿ ಹೇಮಾವತಿ ನೀರು ಸಾಕಷ್ಟು ಹರಿಯುತ್ತಿದೆ. ಹೆಚ್ಚುವರಿ ನೀರನ್ನು ಶಿರಾ ತಾಲ್ಲೂಕಿನ ಮದಲೂರು ಕೆರೆಗೆ ಹರಿಸಬಹುದು. ಆದರೆ, ಈ ಕೆರೆಗೆ ಹೇಮಾವತಿ ನೀರು ಹಂಚಿಕೆಯಾಗದ ಕಾರಣ ನೀರು ಹರಿಸುತ್ತಿಲ್ಲ ಎಂದು ತಿಳಿಸಿದರು.</p>.<p>ಜನರು ಕುಡಿಯುವ ನೀರಿಗೂ ಕಷ್ಟಪಡುತ್ತಿದ್ದಾರೆ. ಮಳೆಗಾಲದಲ್ಲೂ ಫ್ಲೋರೈಡ್ ಸಮಸ್ಯೆಯಿಂದ ಜನರು ಬಳಲುತ್ತಿದ್ದಾರೆ. ವಿಶೇಷ ಪ್ರಕರಣವೆಂದು ಪರಿಗಣಿಸಿ ಕೆರೆಗೆ ನೀರು ಹರಿಸಲು ಆದೇಶಿಸಬೇಕು ಎಂದು ಕೋರಿದರು.</p>.<p>ಹೇಮಾವತಿ ನೀರು ಹೆಚ್ಚಾಗಿ ಹರಿಯುತ್ತಿರುವುದರಿಂದ ತಾಲ್ಲೂಕಿನ ಜನರ ಹಿತಾದೃಷ್ಟಿಯಿಂದ 0.250 ಟಿಎಂಸಿ ನೀರು ಹರಿಸಲು ಆದೇಶಿಸಬೇಕು. ಒಂದು ವರ್ಷ ಕೆರೆ ತುಂಬಿಸಿದರೆ 6–7 ವರ್ಷ ಅಂತರ್ಜಲ ವೃದ್ಧಿಯಾಗಲಿದೆ ಎಂದು ಮನವಿ ಮಾಡಿದರು.</p>.<p>ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ, ಮುಖಂಡರಾದ ಎಸ್.ಆರ್.ಗೌಡ, ಚಿದಾನಂದಗೌಡ, ಬಿ.ಕೆ.ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಶಿರಾ ತಾಲ್ಲೂಕಿನ ಮದಲೂರು ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸುರೇಶ್ಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.</p>.<p>ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ, ಕೆರೆಗೆ ನೀರು ಹರಿಸಲು ಆದೇಶಿಸುವುದಾಗಿ ಭರವಸೆ ನೀಡಿದರು ಎಂದು ಸುರೇಶ್ಗೌಡ ತಿಳಿಸಿದ್ದಾರೆ.</p>.<p>ಪ್ರಸ್ತುತ ಜಿಲ್ಲೆಯಲ್ಲಿ ಹೇಮಾವತಿ ನೀರು ಸಾಕಷ್ಟು ಹರಿಯುತ್ತಿದೆ. ಹೆಚ್ಚುವರಿ ನೀರನ್ನು ಶಿರಾ ತಾಲ್ಲೂಕಿನ ಮದಲೂರು ಕೆರೆಗೆ ಹರಿಸಬಹುದು. ಆದರೆ, ಈ ಕೆರೆಗೆ ಹೇಮಾವತಿ ನೀರು ಹಂಚಿಕೆಯಾಗದ ಕಾರಣ ನೀರು ಹರಿಸುತ್ತಿಲ್ಲ ಎಂದು ತಿಳಿಸಿದರು.</p>.<p>ಜನರು ಕುಡಿಯುವ ನೀರಿಗೂ ಕಷ್ಟಪಡುತ್ತಿದ್ದಾರೆ. ಮಳೆಗಾಲದಲ್ಲೂ ಫ್ಲೋರೈಡ್ ಸಮಸ್ಯೆಯಿಂದ ಜನರು ಬಳಲುತ್ತಿದ್ದಾರೆ. ವಿಶೇಷ ಪ್ರಕರಣವೆಂದು ಪರಿಗಣಿಸಿ ಕೆರೆಗೆ ನೀರು ಹರಿಸಲು ಆದೇಶಿಸಬೇಕು ಎಂದು ಕೋರಿದರು.</p>.<p>ಹೇಮಾವತಿ ನೀರು ಹೆಚ್ಚಾಗಿ ಹರಿಯುತ್ತಿರುವುದರಿಂದ ತಾಲ್ಲೂಕಿನ ಜನರ ಹಿತಾದೃಷ್ಟಿಯಿಂದ 0.250 ಟಿಎಂಸಿ ನೀರು ಹರಿಸಲು ಆದೇಶಿಸಬೇಕು. ಒಂದು ವರ್ಷ ಕೆರೆ ತುಂಬಿಸಿದರೆ 6–7 ವರ್ಷ ಅಂತರ್ಜಲ ವೃದ್ಧಿಯಾಗಲಿದೆ ಎಂದು ಮನವಿ ಮಾಡಿದರು.</p>.<p>ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ, ಮುಖಂಡರಾದ ಎಸ್.ಆರ್.ಗೌಡ, ಚಿದಾನಂದಗೌಡ, ಬಿ.ಕೆ.ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>