<p><strong>ಪಾವಗಡ:</strong> ಪರಿಶಿಷ್ಟ ಜಾತಿ, ಪಂಗಡದವರ ಜಮೀನುಗಳನ್ನು ಸೋಲಾರ್ ಕಂಪನಿಗಳು ವಶಪಡಿಸಿಕೊಳ್ಳದಂತೆ ಕ್ರಮ ತೆಗೆದುಕೊಳ್ಳಬೇಕು, ರೈತರ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ಬುಧವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕಿನ ವಿವಿಧೆಡೆ ಖಾಸಗಿ ಕಂಪನಿಗಳು ಸೋಲಾರ್ ಘಟಕ ನಿರ್ಮಿಸಲು ಪರಿಶಿಷ್ಟ ಜಾತಿ, ಪಂಗಡದವರ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿವೆ. ಇನ್ನಿಲ್ಲದ ಒತ್ತಡ ಹೇರಿ ಅವರಿಂದ ಜಮೀನು ವಶಪಡಿಸಿಕೊಳ್ಳುತ್ತಿದ್ದಾರೆ. ಇದರಿಂದ ಬಡ ಜನತೆ ಬೀದಿಗೆ ಬರುವಂತಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಪೂಜಾರಪ್ಪ ಆರೋಪಿಸಿದರು.</p>.<p>ಸೊಲಾರ್ ಘಟಕ ನಿರ್ಮಿಸುವಾಗ ಜಮೀನುಗಳಿಗೆ ಇರುವ ರಸ್ತೆಗಳನ್ನು ಮುಚ್ಚಲಾಗುತ್ತಿದೆ. ಇದರಿಂದ ಜಮೀನುಗಳಿಗೆ ಹೋಗಲಾಗದೆ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಿದ ರೈತರಿಗೆ ಭೂಮಿ ಮಂಜೂರು ಮಾಡುತ್ತಿಲ್ಲ. ಖಾತೆ, ಪಹಣಿ ಮಾಡಿಕೊಡುವಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಸೋಲಾರ್ ಘಟಕ ನಿರ್ಮಿಸುವಾಗ ರೈತರ ಜಮೀನುಗಳನ್ನು ಮುಚ್ಚಬಾರದು. ಪರಿಶಿಷ್ಟ ಜಾತಿ, ಪಂಗಡದ ರೈತರ ಜಮೀನು ವಶಪಡಿಸಿಕೊಳ್ಳಬಾರದು. ಬಗರ್ ಹುಕುಂ ಅಡಿ ಜಮೀನುಗಳನ್ನು ಶೀಘ್ರ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ಶಿವು, ಗುಡಿಪಲ್ಲಪ್ಪ, ಹನುಮಂತರಾಯ, ರಾಮಾಂಜಿ, ನಾಗೇಂದ್ರಪ್ಪ, ಪಡಿಯಾಲಪ್ಪ, ಪರಶನಾಯ್ಕ, ಚನ್ನಕೇಶವರೆಡ್ಡಿ, ಶ್ರೀನಿವಾಸರೆಡ್ಡಿ, ರಾಜನಾಯ್ಕ, ರಾಮಾನಾಯ್ಕ, ರಾಮಾಂಜಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ಪರಿಶಿಷ್ಟ ಜಾತಿ, ಪಂಗಡದವರ ಜಮೀನುಗಳನ್ನು ಸೋಲಾರ್ ಕಂಪನಿಗಳು ವಶಪಡಿಸಿಕೊಳ್ಳದಂತೆ ಕ್ರಮ ತೆಗೆದುಕೊಳ್ಳಬೇಕು, ರೈತರ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ಬುಧವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕಿನ ವಿವಿಧೆಡೆ ಖಾಸಗಿ ಕಂಪನಿಗಳು ಸೋಲಾರ್ ಘಟಕ ನಿರ್ಮಿಸಲು ಪರಿಶಿಷ್ಟ ಜಾತಿ, ಪಂಗಡದವರ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿವೆ. ಇನ್ನಿಲ್ಲದ ಒತ್ತಡ ಹೇರಿ ಅವರಿಂದ ಜಮೀನು ವಶಪಡಿಸಿಕೊಳ್ಳುತ್ತಿದ್ದಾರೆ. ಇದರಿಂದ ಬಡ ಜನತೆ ಬೀದಿಗೆ ಬರುವಂತಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಪೂಜಾರಪ್ಪ ಆರೋಪಿಸಿದರು.</p>.<p>ಸೊಲಾರ್ ಘಟಕ ನಿರ್ಮಿಸುವಾಗ ಜಮೀನುಗಳಿಗೆ ಇರುವ ರಸ್ತೆಗಳನ್ನು ಮುಚ್ಚಲಾಗುತ್ತಿದೆ. ಇದರಿಂದ ಜಮೀನುಗಳಿಗೆ ಹೋಗಲಾಗದೆ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಿದ ರೈತರಿಗೆ ಭೂಮಿ ಮಂಜೂರು ಮಾಡುತ್ತಿಲ್ಲ. ಖಾತೆ, ಪಹಣಿ ಮಾಡಿಕೊಡುವಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಸೋಲಾರ್ ಘಟಕ ನಿರ್ಮಿಸುವಾಗ ರೈತರ ಜಮೀನುಗಳನ್ನು ಮುಚ್ಚಬಾರದು. ಪರಿಶಿಷ್ಟ ಜಾತಿ, ಪಂಗಡದ ರೈತರ ಜಮೀನು ವಶಪಡಿಸಿಕೊಳ್ಳಬಾರದು. ಬಗರ್ ಹುಕುಂ ಅಡಿ ಜಮೀನುಗಳನ್ನು ಶೀಘ್ರ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ಶಿವು, ಗುಡಿಪಲ್ಲಪ್ಪ, ಹನುಮಂತರಾಯ, ರಾಮಾಂಜಿ, ನಾಗೇಂದ್ರಪ್ಪ, ಪಡಿಯಾಲಪ್ಪ, ಪರಶನಾಯ್ಕ, ಚನ್ನಕೇಶವರೆಡ್ಡಿ, ಶ್ರೀನಿವಾಸರೆಡ್ಡಿ, ರಾಜನಾಯ್ಕ, ರಾಮಾನಾಯ್ಕ, ರಾಮಾಂಜಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>