<p>ಮಧುಗಿರಿ: ಮಧುಗಿರಿ ಕ್ಷೇತ್ರದ ಅಭಿವೃದ್ಧಿಗೆ ಶಾಸಕರ ಪ್ರದೇಶಾಭಿವೃದ್ಧಿ ಅನುದಾನವನ್ನು ಗ್ರಾಮಾಂತರ ಪ್ರದೇಶದ ಬಹುತೇಕ ವಿವಿಧ ದೇವಾಲಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.</p>.<p>ರಸ್ತೆ, ಶಾಲೆ ಮತ್ತು ಅಂಗನವಾಡಿ ದುರಸ್ತಿ, ಮೂರು ಗ್ರಾಮಗಳಲ್ಲಿ ಕುಡಿಯುವ ನೀರಿನ ಘಟಕ ಹಾಗೂ ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿರುವ ಹೆಲ್ತ್ ಆ್ಯಂಡ್ ಫಿಟ್ನೆಸ್ ಕೇಂದ್ರಕ್ಕೆ ಜಿಮ್ ಸಲಕರಣೆಗಾಗಿ ₹8 ಲಕ್ಷ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಭವನ ನಿರ್ಮಿಸಲು ₹10 ಲಕ್ಷ ಅನುದಾನವನ್ನು ಶಾಸಕ ಎಂ.ವಿ.ವೀರಭದ್ರಯ್ಯ ಅವರು ನೀಡಿದ್ದಾರೆ.</p>.<p>ಮೂರು ವರ್ಷದ ಅವಧಿಯಲ್ಲಿ ಬಿಡುಗಡೆಯಾದ ಶಾಸಕರ ಅನುದಾನ ಶೇ 98ರಷ್ಟು ಅನುದಾನ ಬಳಕೆಯಾಗಿದೆ. ಕೆಲ ಕಾಮಗಾರಿಗಳು ಮಾತ್ರ ಪ್ರಗತಿಯಲ್ಲಿವೆ. ಎರಡು ವರ್ಷದಲ್ಲಿ ಸರ್ಕಾರದಿಂದ ಬಿಡುಗಡೆಯಾದ ₹5 ಕೋಟಿ ಅನುದಾನದ ಪೈಕಿ ₹1.23 ಕೋಟಿ ಅನುದಾನವನ್ನು ಕ್ಷೇತ್ರದ ವಿವಿಧ ದೇವಾಲಯಗಳ ಅಭಿವೃದ್ಧಿಗೆ ಬಳಕೆ ಮಾಡಲಾಗಿದೆ. ಇನ್ನುಳಿದ ಅನುದಾನವನ್ನು ಶಾಲೆ, ಅಂಗನವಾಡಿ, ಸಮುದಾಯಭವನ, ರಸ್ತೆ, ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕೆ ಮತ್ತು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಆಂಬುಲೆನ್ಸ್ ಖರೀದಿ ಮಾಡಲು ಅನುದಾನ ನೀಡಿದ್ದಾರೆ.</p>.<p>2018 ಸಾಲಿನಲ್ಲಿ ₹2 ಕೋಟಿ ವೆಚ್ಚದ 72 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿತ್ತು. 67 ಕಾಮಗಾರಿಗಳು ಪೂರ್ಣಗೊಂಡು ಕೆಲ ಕಾಮಗಾರಿಗಳು ಪ್ರಗತಿಯಲ್ಲಿವೆ. 2019 ಸಾಲಿನಲ್ಲಿ ಶಾಸಕ ಎಂ.ವಿ.ವೀರಭದ್ರಯ್ಯ ಅವರು ಜನರು ಹಾಗೂ ಮುಖಂಡರ ಬೇಡಿಕೆಯಂತೆ ₹2 ಕೋಟಿ ವೆಚ್ಚದ 55 ಕಾಮಗಾರಿಗಳ ಪಟ್ಟಿಯನ್ನು ನೀಡಿದ್ದಾರೆ. 51 ಕಾಮಗಾರಿಗಳು ಪೂರ್ಣಗೊಂಡಿವೆ. ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದ ಹೆಲ್ತ್ ಅಂಡ್ ಪಿಟ್ ನೆಸ್ ಕೇಂದ್ರಕ್ಕೆ ಜಿಮ್ ಸಲಕರಣೆಗಾಗಿ ನೀಡಿದ್ದ ₹8 ಲಕ್ಷ ಅನುದಾನ ಈವರೆಗೂ ಬಳಕೆಯಾಗಿಲ್ಲ ಹಾಗೂ ಕೆಲ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ದಾಖಲೆಗಳು ಹೇಳುತ್ತಿವೆ.</p>.<p>2020ನೇ ಸಾಲಿನಲ್ಲಿ ₹1 ಕೋಟಿ ವೆಚ್ಚದ 24 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿತ್ತು. ಈ ಪೈಕಿ ಕಾಮಗಾರಿಗಳು ಪೂರ್ಣ<br />ಗೊಂಡಿವೆ. ಎರಡು ವರ್ಷದಲ್ಲಿ ಕ್ಷೇತ್ರದ ವಿವಿಧ ಗ್ರಾಮದ ವಿವಿಧ 63ದೇವಾಲಯಗಳ ಅಭಿವೃದ್ಧಿಗೆ ಅನುದಾನ ನೀಡಿದ್ದಾರೆ. ಕ್ಷೇತ್ರದ ಬೋರಾಗುಂಟೆ ಹಾಗೂ ಬ್ಯಾಡರಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ನೀಡಿದ್ದ ತಲಾ ₹6 ಲಕ್ಷ ಅನುದಾನ ನೀಡಿದ್ದಾರೆ. ಆದರೆ ನೀರಿನ ಘಟಕ ನಿರ್ಮಾಣ ಮಾಡಲುತಲಾ ₹1 ಲಕ್ಷ ಅನುದಾನದ ಕೊರತೆಯಿಂದ ಇನ್ನೂ ಕಾಮಗಾರಿ ಪ್ರಾರಂಭವಾಗಿಲ್ಲ.</p>.<p>ಕ್ಷೇತ್ರದ ಬಡಿಗೊಂಡನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಭಿವೃದ್ಧಿಗೆ ₹2 ಲಕ್ಷ ಹಾಗೂ ಮರಿತಿಮ್ಮನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಭಿವೃದ್ಧಿಗೆ ₹3 ಲಕ್ಷ ಶಾಸಕರು ಅನುದಾನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಧುಗಿರಿ: ಮಧುಗಿರಿ ಕ್ಷೇತ್ರದ ಅಭಿವೃದ್ಧಿಗೆ ಶಾಸಕರ ಪ್ರದೇಶಾಭಿವೃದ್ಧಿ ಅನುದಾನವನ್ನು ಗ್ರಾಮಾಂತರ ಪ್ರದೇಶದ ಬಹುತೇಕ ವಿವಿಧ ದೇವಾಲಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.</p>.<p>ರಸ್ತೆ, ಶಾಲೆ ಮತ್ತು ಅಂಗನವಾಡಿ ದುರಸ್ತಿ, ಮೂರು ಗ್ರಾಮಗಳಲ್ಲಿ ಕುಡಿಯುವ ನೀರಿನ ಘಟಕ ಹಾಗೂ ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿರುವ ಹೆಲ್ತ್ ಆ್ಯಂಡ್ ಫಿಟ್ನೆಸ್ ಕೇಂದ್ರಕ್ಕೆ ಜಿಮ್ ಸಲಕರಣೆಗಾಗಿ ₹8 ಲಕ್ಷ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಭವನ ನಿರ್ಮಿಸಲು ₹10 ಲಕ್ಷ ಅನುದಾನವನ್ನು ಶಾಸಕ ಎಂ.ವಿ.ವೀರಭದ್ರಯ್ಯ ಅವರು ನೀಡಿದ್ದಾರೆ.</p>.<p>ಮೂರು ವರ್ಷದ ಅವಧಿಯಲ್ಲಿ ಬಿಡುಗಡೆಯಾದ ಶಾಸಕರ ಅನುದಾನ ಶೇ 98ರಷ್ಟು ಅನುದಾನ ಬಳಕೆಯಾಗಿದೆ. ಕೆಲ ಕಾಮಗಾರಿಗಳು ಮಾತ್ರ ಪ್ರಗತಿಯಲ್ಲಿವೆ. ಎರಡು ವರ್ಷದಲ್ಲಿ ಸರ್ಕಾರದಿಂದ ಬಿಡುಗಡೆಯಾದ ₹5 ಕೋಟಿ ಅನುದಾನದ ಪೈಕಿ ₹1.23 ಕೋಟಿ ಅನುದಾನವನ್ನು ಕ್ಷೇತ್ರದ ವಿವಿಧ ದೇವಾಲಯಗಳ ಅಭಿವೃದ್ಧಿಗೆ ಬಳಕೆ ಮಾಡಲಾಗಿದೆ. ಇನ್ನುಳಿದ ಅನುದಾನವನ್ನು ಶಾಲೆ, ಅಂಗನವಾಡಿ, ಸಮುದಾಯಭವನ, ರಸ್ತೆ, ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕೆ ಮತ್ತು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಆಂಬುಲೆನ್ಸ್ ಖರೀದಿ ಮಾಡಲು ಅನುದಾನ ನೀಡಿದ್ದಾರೆ.</p>.<p>2018 ಸಾಲಿನಲ್ಲಿ ₹2 ಕೋಟಿ ವೆಚ್ಚದ 72 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿತ್ತು. 67 ಕಾಮಗಾರಿಗಳು ಪೂರ್ಣಗೊಂಡು ಕೆಲ ಕಾಮಗಾರಿಗಳು ಪ್ರಗತಿಯಲ್ಲಿವೆ. 2019 ಸಾಲಿನಲ್ಲಿ ಶಾಸಕ ಎಂ.ವಿ.ವೀರಭದ್ರಯ್ಯ ಅವರು ಜನರು ಹಾಗೂ ಮುಖಂಡರ ಬೇಡಿಕೆಯಂತೆ ₹2 ಕೋಟಿ ವೆಚ್ಚದ 55 ಕಾಮಗಾರಿಗಳ ಪಟ್ಟಿಯನ್ನು ನೀಡಿದ್ದಾರೆ. 51 ಕಾಮಗಾರಿಗಳು ಪೂರ್ಣಗೊಂಡಿವೆ. ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದ ಹೆಲ್ತ್ ಅಂಡ್ ಪಿಟ್ ನೆಸ್ ಕೇಂದ್ರಕ್ಕೆ ಜಿಮ್ ಸಲಕರಣೆಗಾಗಿ ನೀಡಿದ್ದ ₹8 ಲಕ್ಷ ಅನುದಾನ ಈವರೆಗೂ ಬಳಕೆಯಾಗಿಲ್ಲ ಹಾಗೂ ಕೆಲ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ದಾಖಲೆಗಳು ಹೇಳುತ್ತಿವೆ.</p>.<p>2020ನೇ ಸಾಲಿನಲ್ಲಿ ₹1 ಕೋಟಿ ವೆಚ್ಚದ 24 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿತ್ತು. ಈ ಪೈಕಿ ಕಾಮಗಾರಿಗಳು ಪೂರ್ಣ<br />ಗೊಂಡಿವೆ. ಎರಡು ವರ್ಷದಲ್ಲಿ ಕ್ಷೇತ್ರದ ವಿವಿಧ ಗ್ರಾಮದ ವಿವಿಧ 63ದೇವಾಲಯಗಳ ಅಭಿವೃದ್ಧಿಗೆ ಅನುದಾನ ನೀಡಿದ್ದಾರೆ. ಕ್ಷೇತ್ರದ ಬೋರಾಗುಂಟೆ ಹಾಗೂ ಬ್ಯಾಡರಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ನೀಡಿದ್ದ ತಲಾ ₹6 ಲಕ್ಷ ಅನುದಾನ ನೀಡಿದ್ದಾರೆ. ಆದರೆ ನೀರಿನ ಘಟಕ ನಿರ್ಮಾಣ ಮಾಡಲುತಲಾ ₹1 ಲಕ್ಷ ಅನುದಾನದ ಕೊರತೆಯಿಂದ ಇನ್ನೂ ಕಾಮಗಾರಿ ಪ್ರಾರಂಭವಾಗಿಲ್ಲ.</p>.<p>ಕ್ಷೇತ್ರದ ಬಡಿಗೊಂಡನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಭಿವೃದ್ಧಿಗೆ ₹2 ಲಕ್ಷ ಹಾಗೂ ಮರಿತಿಮ್ಮನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಭಿವೃದ್ಧಿಗೆ ₹3 ಲಕ್ಷ ಶಾಸಕರು ಅನುದಾನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>