ತುಮಕೂರು: ಅಡಿಕೆ ಸಸಿ ಕಡಿದ ಕಿಡಿಗೇಡಿಗಳು

ತುಮಕೂರು: ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಸೋಮಲಾಪುರ ಗ್ರಾಮದ ಪಂಚಾಕ್ಷರಿ, ಜಯರಾಮಯ್ಯ, ನಟರಾಜು ಅವರಿಗೆ ಸೇರಿದ ಅಡಿಕೆ ಸಸಿಗಳನ್ನು ಕಿಡಿಗೇಡಿಗಳು ಶನಿವಾರ ರಾತ್ರಿ ಕಡಿದು ಹಾಕಿದ್ದಾರೆ.
ಅಂದಾಜು 100 ಸಸಿಗಳನ್ನು ಕಡಿದಿದ್ದಾರೆ. ಕಳೆದ ರಾತ್ರಿ ನಡೆದ ಘಟನೆ, ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಸೋಮಲಾಪುರದ ಕಂಬದ ನರಸಿಂಹ ಸ್ವಾಮಿ ದೇವಸ್ಥಾನದ ದಾರಿಗೆ ತೊಂದರೆಯಾಗಿದ್ದರಿಂದ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.