<p><strong>ತುಮಕೂರು</strong>: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಮೊಬೈಲ್ ಕದ್ದು ಪರಾರಿಯಾಗಿದ್ದ ಚಿಕ್ಕನಾಯಕನಹಳ್ಳಿಯ ಫಾರೀಕ್ಪಾಷ (30), ಮೊಹಮದ್ ಸಾಹಿಲ್ (20) ಎಂಬುವರನ್ನು ಪೊಲೀಸರು ಬಂಧಿಸಿ, ಮೊಬೈಲ್ ವಶಕ್ಕೆ ಪಡೆದಿದ್ದಾರೆ.</p>.<p>ತುರುವೇಕೆರೆ ತಾಲ್ಲೂಕಿನ ಕೆಬ್ಬೆಪಾಳ್ಯ ಗ್ರಾಮದ ಹೊರ ವಲಯದಲ್ಲಿ ನ. 2ರ ಸಂಜೆ ಕಾಲೇಜು ಮುಗಿಸಿಕೊಂಡು ವಾಪಸ್ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಹೆದರಿಸಿ ಮೊಬೈಲ್ ಕಿತ್ತುಕೊಂಡು ಹೋಗಿದ್ದರು. ಈ ಸಂಬಂಧ ದಂಡಿನಶಿವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಡಿ. 23ರಂದು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ದರೋಡೆ– ಬಂಧನ: ರಸ್ತೆಯಲ್ಲಿ ವಾಹನಗಳನ್ನು ಅಡ್ಡಹಾಕಿ ಚಾಲಕರನ್ನು ಬೆದರಿಸಿ ದರೋಡೆ ಮಾಡುತ್ತಿದ್ದ ತುರುವೇಕೆರೆ ಪಟ್ಟಣದ ರಾಘವೇಂದ್ರ ನಗರದ ಸುರೇಶ (35) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಪಾಂಡವಪುರ ತಾಲ್ಲೂಕಿನ ಹಿರೆಮರಳಿ ಗ್ರಾಮದ ಪ್ರಕಾಶ್ ಎಂಬುವರು ಡಿ. 20ರಂದು ಪಾಂಡವಪುರದಿಂದ ಬಳ್ಳಾರಿಗೆ ಐಶರ್ ವಾಹನದಲ್ಲಿ ಬೆಲ್ಲದ ಲೋಡ್ ತೆಗೆದುಕೊಂಡು ಹೋಗುತ್ತಿದ್ದರು. ಅಂದು ರಾತ್ರಿ 10 ಗಂಟೆಗೆ ತುರುವೇಕೆರೆಯ ಮುನಿಯೂರು ಗೇಟ್ ಸಮೀಪ ಮೂವರು ಅಪರಿಚಿತರು ರಸ್ತೆಗೆ ಅಡ್ಡಲಾಗಿ ಆಟೊ ನಿಲ್ಲಿಸಿ, ₹50 ಸಾವಿರ ಬೆಲೆ ಬಾಳುವ ಮೊಬೈಲ್, ₹100 ಹಣ ದರೋಡೆ ಮಾಡಿದ್ದರು. ಈ ಬಗ್ಗೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಕಳವು ಮಾಡಿದ್ದ 5 ಬೈಕ್ ಮತ್ತು 6 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.</p>.<p>ಎರಡು ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಗೆ ಕುಣಿಗಲ್ ಉಪವಿಭಾಗ ಡಿವೈಎಸ್ಪಿ ಲಕ್ಷ್ಮಿಕಾಂತ್ ನೇತೃತ್ವದಲ್ಲಿ ತುರುವೇಕೆರೆ ವೃತ್ತದ ಸಿಪಿಐ ಬಿ.ಎನ್.ಲೋಹಿತ್ ಅವರ ತಂಡ ಕಾರ್ಯಾಚರಣೆ ನಡೆಸಿತ್ತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಮೊಬೈಲ್ ಕದ್ದು ಪರಾರಿಯಾಗಿದ್ದ ಚಿಕ್ಕನಾಯಕನಹಳ್ಳಿಯ ಫಾರೀಕ್ಪಾಷ (30), ಮೊಹಮದ್ ಸಾಹಿಲ್ (20) ಎಂಬುವರನ್ನು ಪೊಲೀಸರು ಬಂಧಿಸಿ, ಮೊಬೈಲ್ ವಶಕ್ಕೆ ಪಡೆದಿದ್ದಾರೆ.</p>.<p>ತುರುವೇಕೆರೆ ತಾಲ್ಲೂಕಿನ ಕೆಬ್ಬೆಪಾಳ್ಯ ಗ್ರಾಮದ ಹೊರ ವಲಯದಲ್ಲಿ ನ. 2ರ ಸಂಜೆ ಕಾಲೇಜು ಮುಗಿಸಿಕೊಂಡು ವಾಪಸ್ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಹೆದರಿಸಿ ಮೊಬೈಲ್ ಕಿತ್ತುಕೊಂಡು ಹೋಗಿದ್ದರು. ಈ ಸಂಬಂಧ ದಂಡಿನಶಿವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಡಿ. 23ರಂದು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ದರೋಡೆ– ಬಂಧನ: ರಸ್ತೆಯಲ್ಲಿ ವಾಹನಗಳನ್ನು ಅಡ್ಡಹಾಕಿ ಚಾಲಕರನ್ನು ಬೆದರಿಸಿ ದರೋಡೆ ಮಾಡುತ್ತಿದ್ದ ತುರುವೇಕೆರೆ ಪಟ್ಟಣದ ರಾಘವೇಂದ್ರ ನಗರದ ಸುರೇಶ (35) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಪಾಂಡವಪುರ ತಾಲ್ಲೂಕಿನ ಹಿರೆಮರಳಿ ಗ್ರಾಮದ ಪ್ರಕಾಶ್ ಎಂಬುವರು ಡಿ. 20ರಂದು ಪಾಂಡವಪುರದಿಂದ ಬಳ್ಳಾರಿಗೆ ಐಶರ್ ವಾಹನದಲ್ಲಿ ಬೆಲ್ಲದ ಲೋಡ್ ತೆಗೆದುಕೊಂಡು ಹೋಗುತ್ತಿದ್ದರು. ಅಂದು ರಾತ್ರಿ 10 ಗಂಟೆಗೆ ತುರುವೇಕೆರೆಯ ಮುನಿಯೂರು ಗೇಟ್ ಸಮೀಪ ಮೂವರು ಅಪರಿಚಿತರು ರಸ್ತೆಗೆ ಅಡ್ಡಲಾಗಿ ಆಟೊ ನಿಲ್ಲಿಸಿ, ₹50 ಸಾವಿರ ಬೆಲೆ ಬಾಳುವ ಮೊಬೈಲ್, ₹100 ಹಣ ದರೋಡೆ ಮಾಡಿದ್ದರು. ಈ ಬಗ್ಗೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಕಳವು ಮಾಡಿದ್ದ 5 ಬೈಕ್ ಮತ್ತು 6 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.</p>.<p>ಎರಡು ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಗೆ ಕುಣಿಗಲ್ ಉಪವಿಭಾಗ ಡಿವೈಎಸ್ಪಿ ಲಕ್ಷ್ಮಿಕಾಂತ್ ನೇತೃತ್ವದಲ್ಲಿ ತುರುವೇಕೆರೆ ವೃತ್ತದ ಸಿಪಿಐ ಬಿ.ಎನ್.ಲೋಹಿತ್ ಅವರ ತಂಡ ಕಾರ್ಯಾಚರಣೆ ನಡೆಸಿತ್ತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>