ಕುಣಿಗಲ್: ಜಲ್ಲೆಯ ಪ್ರಮುಖ ಜಾತ್ರಾ ಮಹೋತ್ಸವಗಳಲ್ಲಿ ಭಕ್ತರ ಸೋಗಿನಲ್ಲಿ ಬಂದು ಮಹಿಳೆಯರ ಚಿನ್ನದ ಸರ ದೋಚುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಪ್ರಸಾದ್, ಕೃಷ್ಣಮ್ಮ ಮತ್ತು ಲಕ್ಷ್ಮಮ್ಮ ಬಂಧಿತರು. ಉಳಿದ ಆರೋಪಿಗಳ ಪತ್ತೆ ಕಾರ್ಯಚರಣೆ ಮುಂದುವರೆದಿದೆ.
ಭಕ್ತರ ಸೋಗಿನಲ್ಲಿ ಜಾತ್ರೆಗೆ ಕುಟುಂಬ ಸಮೇತರಾಗಿ ಬರುತ್ತಿದ್ದ ಆರೋಪಿಗಳ ತಂಡ ಮಹಿಳೆಯರ ಚಿನ್ನದ ಸರ ಕದಿಯುತ್ತಿದ್ದರು. ಗುಬ್ಬಿ, ಚಿಕ್ಕನಾಯಕನಹಳ್ಳಿ, ಅಮೃತೂರು, ಹುಲಿಯೂರುದುರ್ಗ, ದಂಡಿನಶಿವರ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಜಾತ್ರೆಗಳಲ್ಲಿ ಇವರು ಕಳ್ಳತನ ಮಾಡಿದ್ದಾರೆ.
ಒಟ್ಟು 9 ಪ್ರಕರಣ ಬೇಧಿಸಿರುವ ಪೊಲೀಸರು ಆರೋಪಿಗಳಿಂದ 375 ಗ್ರಾಂ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.
ಡಿವೈಎಸ್ಪಿ ಲಕ್ಷ್ಮೀಕಾಂತ್ ನೇತೃತ್ವದಲ್ಲಿ ಉಪವಿಭಾಗದ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದರು.